ಆಂದೋಲನ 50

ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆ!

ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆಗೆ ಗಮನಾರ್ಹ ಇತಿಹಾಸ ಇ ದೆ. ೧೯೬೯ರಿಂ ದ ೧೯೭೪ರವರೆಗೆ ರಾಷ್ಟ್ರಪತಿಯಾಗಿ ದ ವಿ.ವಿ.ಗಿರಿ (ವರಹಗಿರಿ ವೆಂಕಟಗಿರಿ) ಅವರು ತಮ೩/೪ ಆಡಳಿತಾವ ಣಿಯ ಕೊನೆಯ ದಿನಗಳಲ್ಲಿ ನಂಜನಗೂಡಿಗೆ ಭೇಟಿ ನೀಡಿದರು. ಅದರ ನೆನಪಿನಾರ್ಥ ಈ ರಸ್ತೆಗೆ ರಾಷ್ಟ್ರಪತಿ ಎಂದು ಸೇರಿಸಿ ನಾಮಕರಣ ಮಾಡಲಾಗಿದೆ.

ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಿಂದ ಅನತಿ ದೂರದಲ್ಲಿ ಅಂದರೆ ಚಾಮರಾಜನಗರ ರಸ್ತೆಯಲ್ಲಿ ಆ ಕಾಲದಲ್ಲಿ ಮಹಿಳಾ ವಿದ್ಯಾಪೀಠ ಸ್ಥಾಪನೆಯಾಗಿತ್ತು. ಅದು ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸಹಾಯದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲಿಗೆ ಭೇಟಿ ನೀಡಿದ ರಾಷ್ಟ್ರಪತಿ ವಿ.ವಿ.ಗಿರಿ ಅವರು ವಾಪಸ್‌ ಕಾರಿನಲ್ಲಿ ಮಹಿಳಾ ವಿದ್ಯಾಪೀಠದಿಂದ ಗೋಳೂರು, ಹಳ್ಳದಕೇರಿ, ಶ್ರೀಕಂಠೇಶ್ವರ ದೇವಸ್ಥಾನ ಬಲಭಾಗದಿಂದ ಶ್ರೀ ರಾಘವೇಂದ್ರ ಮಠದ ಮಾರ್ಗದಲ್ಲಿ ಸಂಚರಿಸಿ, ಶ್ರೀ ಪ್ರಸನ್ನ ಚಿಂತಾಮಣಿ ಇಷ್ಟಾರ್ಥ ಸಿದ್ಧಿ ಗಣಪತಿ ದೇವಸ್ಥಾನದ ರಸ್ತೆ ಮೂಲಕ ಊಟಿ ರಸ್ತೆಗೆ ಸೇರಿಕೊಂಡು, ಬಲಭಾಗಕ್ಕೆ ತಿರುವು ತೆಗೆ ದುಕೊಂಡು ಮೈಸೂರು ಕಡೆಗೆ ತೆರಳಿದರು.

ರಾಷ್ಟ್ರಪತಿಯೊಬ್ಬರು ಬಂದು ಹೋದ ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಂಜನಗೂಡಿನಲ್ಲಿ ‘ರಾಷ್ಟ್ರಪತಿ ರಸ್ತೆ’ ಅಸ್ತಿತ್ವಕ್ಕೆ ಬಂದಿತು. ಈ ರಸ್ತೆಯಲ್ಲಿ ಈಗ ಜೆಎಸ್‌ಎಸ್‌ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದೆ. ಸಾಕಷ್ಟು ಹಳೆಯದಾದ ಪಕ್ಕಾ ಮಿಡಲ್‌ ಸ್ಕೂಲ್‌ ಮೈಸೂರು- ಚಾಮರಾಜನಗರ ರೈಲು ಮಾರ್ಗದ ಗೇಟ್‌ ನಾಗಮ್ಮ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ, ಬಾಲಕಿಯರ ಸರ್ಕಾರಿ ಪ ದವಿ ಪೂರ್ವ ಕಾಲೇಜು, ಹಲವಾರು ಅತ್ಯಾಧು ನಿಕ ವಸ್ತ್ರಗಳು, ಸಿದ್ಧಉಡುಪುಗಳು, ಪಾದರಕ್ಷೆ ಅಂಗಡಿಗಳು ತಲೆಯೆತ್ತಿವೆ. ಅಲ್ಲದೆ, ರೈಲ್ವೆಗೇಟ್‌ ಸಮೀಪ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.

andolana

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

19 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

21 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

24 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

26 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

28 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

31 mins ago