ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆಗೆ ಗಮನಾರ್ಹ ಇತಿಹಾಸ ಇ ದೆ. ೧೯೬೯ರಿಂ ದ ೧೯೭೪ರವರೆಗೆ ರಾಷ್ಟ್ರಪತಿಯಾಗಿ ದ ವಿ.ವಿ.ಗಿರಿ (ವರಹಗಿರಿ ವೆಂಕಟಗಿರಿ) ಅವರು ತಮ೩/೪ ಆಡಳಿತಾವ ಣಿಯ ಕೊನೆಯ ದಿನಗಳಲ್ಲಿ ನಂಜನಗೂಡಿಗೆ ಭೇಟಿ ನೀಡಿದರು. ಅದರ ನೆನಪಿನಾರ್ಥ ಈ ರಸ್ತೆಗೆ ರಾಷ್ಟ್ರಪತಿ ಎಂದು ಸೇರಿಸಿ ನಾಮಕರಣ ಮಾಡಲಾಗಿದೆ.
ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಿಂದ ಅನತಿ ದೂರದಲ್ಲಿ ಅಂದರೆ ಚಾಮರಾಜನಗರ ರಸ್ತೆಯಲ್ಲಿ ಆ ಕಾಲದಲ್ಲಿ ಮಹಿಳಾ ವಿದ್ಯಾಪೀಠ ಸ್ಥಾಪನೆಯಾಗಿತ್ತು. ಅದು ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸಹಾಯದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲಿಗೆ ಭೇಟಿ ನೀಡಿದ ರಾಷ್ಟ್ರಪತಿ ವಿ.ವಿ.ಗಿರಿ ಅವರು ವಾಪಸ್ ಕಾರಿನಲ್ಲಿ ಮಹಿಳಾ ವಿದ್ಯಾಪೀಠದಿಂದ ಗೋಳೂರು, ಹಳ್ಳದಕೇರಿ, ಶ್ರೀಕಂಠೇಶ್ವರ ದೇವಸ್ಥಾನ ಬಲಭಾಗದಿಂದ ಶ್ರೀ ರಾಘವೇಂದ್ರ ಮಠದ ಮಾರ್ಗದಲ್ಲಿ ಸಂಚರಿಸಿ, ಶ್ರೀ ಪ್ರಸನ್ನ ಚಿಂತಾಮಣಿ ಇಷ್ಟಾರ್ಥ ಸಿದ್ಧಿ ಗಣಪತಿ ದೇವಸ್ಥಾನದ ರಸ್ತೆ ಮೂಲಕ ಊಟಿ ರಸ್ತೆಗೆ ಸೇರಿಕೊಂಡು, ಬಲಭಾಗಕ್ಕೆ ತಿರುವು ತೆಗೆ ದುಕೊಂಡು ಮೈಸೂರು ಕಡೆಗೆ ತೆರಳಿದರು.
ರಾಷ್ಟ್ರಪತಿಯೊಬ್ಬರು ಬಂದು ಹೋದ ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಂಜನಗೂಡಿನಲ್ಲಿ ‘ರಾಷ್ಟ್ರಪತಿ ರಸ್ತೆ’ ಅಸ್ತಿತ್ವಕ್ಕೆ ಬಂದಿತು. ಈ ರಸ್ತೆಯಲ್ಲಿ ಈಗ ಜೆಎಸ್ಎಸ್ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದೆ. ಸಾಕಷ್ಟು ಹಳೆಯದಾದ ಪಕ್ಕಾ ಮಿಡಲ್ ಸ್ಕೂಲ್ ಮೈಸೂರು- ಚಾಮರಾಜನಗರ ರೈಲು ಮಾರ್ಗದ ಗೇಟ್ ನಾಗಮ್ಮ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ, ಬಾಲಕಿಯರ ಸರ್ಕಾರಿ ಪ ದವಿ ಪೂರ್ವ ಕಾಲೇಜು, ಹಲವಾರು ಅತ್ಯಾಧು ನಿಕ ವಸ್ತ್ರಗಳು, ಸಿದ್ಧಉಡುಪುಗಳು, ಪಾದರಕ್ಷೆ ಅಂಗಡಿಗಳು ತಲೆಯೆತ್ತಿವೆ. ಅಲ್ಲದೆ, ರೈಲ್ವೆಗೇಟ್ ಸಮೀಪ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…