ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆಗೆ ಗಮನಾರ್ಹ ಇತಿಹಾಸ ಇ ದೆ. ೧೯೬೯ರಿಂ ದ ೧೯೭೪ರವರೆಗೆ ರಾಷ್ಟ್ರಪತಿಯಾಗಿ ದ ವಿ.ವಿ.ಗಿರಿ (ವರಹಗಿರಿ ವೆಂಕಟಗಿರಿ) ಅವರು ತಮ೩/೪ ಆಡಳಿತಾವ ಣಿಯ ಕೊನೆಯ ದಿನಗಳಲ್ಲಿ ನಂಜನಗೂಡಿಗೆ ಭೇಟಿ ನೀಡಿದರು. ಅದರ ನೆನಪಿನಾರ್ಥ ಈ ರಸ್ತೆಗೆ ರಾಷ್ಟ್ರಪತಿ ಎಂದು ಸೇರಿಸಿ ನಾಮಕರಣ ಮಾಡಲಾಗಿದೆ.
ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಿಂದ ಅನತಿ ದೂರದಲ್ಲಿ ಅಂದರೆ ಚಾಮರಾಜನಗರ ರಸ್ತೆಯಲ್ಲಿ ಆ ಕಾಲದಲ್ಲಿ ಮಹಿಳಾ ವಿದ್ಯಾಪೀಠ ಸ್ಥಾಪನೆಯಾಗಿತ್ತು. ಅದು ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸಹಾಯದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲಿಗೆ ಭೇಟಿ ನೀಡಿದ ರಾಷ್ಟ್ರಪತಿ ವಿ.ವಿ.ಗಿರಿ ಅವರು ವಾಪಸ್ ಕಾರಿನಲ್ಲಿ ಮಹಿಳಾ ವಿದ್ಯಾಪೀಠದಿಂದ ಗೋಳೂರು, ಹಳ್ಳದಕೇರಿ, ಶ್ರೀಕಂಠೇಶ್ವರ ದೇವಸ್ಥಾನ ಬಲಭಾಗದಿಂದ ಶ್ರೀ ರಾಘವೇಂದ್ರ ಮಠದ ಮಾರ್ಗದಲ್ಲಿ ಸಂಚರಿಸಿ, ಶ್ರೀ ಪ್ರಸನ್ನ ಚಿಂತಾಮಣಿ ಇಷ್ಟಾರ್ಥ ಸಿದ್ಧಿ ಗಣಪತಿ ದೇವಸ್ಥಾನದ ರಸ್ತೆ ಮೂಲಕ ಊಟಿ ರಸ್ತೆಗೆ ಸೇರಿಕೊಂಡು, ಬಲಭಾಗಕ್ಕೆ ತಿರುವು ತೆಗೆ ದುಕೊಂಡು ಮೈಸೂರು ಕಡೆಗೆ ತೆರಳಿದರು.
ರಾಷ್ಟ್ರಪತಿಯೊಬ್ಬರು ಬಂದು ಹೋದ ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಂಜನಗೂಡಿನಲ್ಲಿ ‘ರಾಷ್ಟ್ರಪತಿ ರಸ್ತೆ’ ಅಸ್ತಿತ್ವಕ್ಕೆ ಬಂದಿತು. ಈ ರಸ್ತೆಯಲ್ಲಿ ಈಗ ಜೆಎಸ್ಎಸ್ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದೆ. ಸಾಕಷ್ಟು ಹಳೆಯದಾದ ಪಕ್ಕಾ ಮಿಡಲ್ ಸ್ಕೂಲ್ ಮೈಸೂರು- ಚಾಮರಾಜನಗರ ರೈಲು ಮಾರ್ಗದ ಗೇಟ್ ನಾಗಮ್ಮ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ, ಬಾಲಕಿಯರ ಸರ್ಕಾರಿ ಪ ದವಿ ಪೂರ್ವ ಕಾಲೇಜು, ಹಲವಾರು ಅತ್ಯಾಧು ನಿಕ ವಸ್ತ್ರಗಳು, ಸಿದ್ಧಉಡುಪುಗಳು, ಪಾದರಕ್ಷೆ ಅಂಗಡಿಗಳು ತಲೆಯೆತ್ತಿವೆ. ಅಲ್ಲದೆ, ರೈಲ್ವೆಗೇಟ್ ಸಮೀಪ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…