ಆಂದೋಲನ 50

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ ನಿರಂತರವಾಗಿ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿಯೇ ರಾಜ್ಯ ಮಟ್ಟದ ಪತ್ರಿಕೆಗಳ ದರ ಸಮರದ ಹೊರತಾಗಿಯೂ ಸುದ್ದಿ ಮೌಲ್ಯಕ್ಕೆ ಆದ್ಯತೆ ನೀಡಿದ ‘ಆಂದೋಲನ’ ನಂಬರ್ ವನ್ ಪತ್ರಿಕೆಯಾಗಿ ಮುಂದುವರಿದಿದೆ.

ಆಂದೋಲನ ಪತ್ರಿಕೆಯಲ್ಲಿ ಯಾವುದೇ ಸುದ್ದಿಗಳು ಪ್ರಕಟವಾದರೆ ಸಂಬಂಧಪಟ್ಟವರು ತಕ್ಷಣ ಸ್ಪಂದಿಸುತ್ತಾರೆ ಎನ್ನುವ ಓದುಗರ ನಂಬಿಕೆ ಇದುವರೆಗೆ ಸುಳ್ಳಾಗಿಲ್ಲ. ಆಂದೋಲನ ವರದಿ ಫಲಶ್ರುತಿಯ ಕೆಲವು ಉದಾಹರಣೆಗಳು ಇಲ್ಲಿವೆ.

ಸುಮಾರು ೨೦ ವರ್ಷಗಳ ಹಿಂದಿನ ಮಾತು. ತಾಲ್ಲೂಕಿನ ಅಂತರಸಂತೆ ವಿಎಸ್ಸೆಸ್ಸೆನ್ ಸೊಸೈಟಿಯಲ್ಲಿ ಪಡಿತರದಾರರಿಗೆ ವಿತರಿಸದೆ ಸುಮಾರು ನೂರು ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ಮತ್ತು ಗೋಧಿ ದಾಸ್ತಾನು ಮಾಡಲಾಗಿತ್ತು. ಇದನ್ನು ಕೇರಳಕ್ಕೆ ಸಾಗಿಸುವ ಹುನ್ನಾರದ ಸುಳಿವು ಪಡೆದ ಪತ್ರಿಕೆ ಸಚಿತ್ರ ವರದಿ ಮಾಡಿತ್ತು. ಪರಿಣಾಮ ಆಹಾರ ಶಿರಸ್ತೇದಾರ್, ಫುಡ್ ಇನ್‌ಸ್ಪೆಕ್ಟರ್, ಕಾರ‌್ಯದರ್ಶಿ ಅಮಾನತುಗೊಂಡರು. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಪತ್ರಿಕೆ ವಿವರವಾದ ವರದಿ ಪ್ರಕಟಿಸಿದ ಬಳಿಕ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕೋಟೆ ಪಟ್ಟಣ ಪಂಚಾಯಿತಿಯ ಖಾತೆ ಅವ್ಯವಹಾರವನ್ನು ಪತ್ರಿಕೆ ಬಯಲಿಗೆಳೆದ ಬಳಿಕ ಹಲವು ಜನಪ್ರತಿನಿಧಿಗಳ ಮೇಲೆ ಕೇಸು ದಾಖಲಾಯಿತು.

ಜಿಪಂ ಕಾಮಗಾರಿಯ ೪ ಕೋಟಿ ರೂ. ಮೊತ್ತದ ಹಗರಣವನ್ನೂ ಆಂದೋಲನ ಬಯಲಿಗೆಳೆದಿತ್ತು. ಈ ಸಂಬಂಧ ಎಂಜಿನಿಯರ್ ಅಮಾನತಾಗಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಸ್ತಿ ಪರಭಾರೆ ಸಂಚನ್ನು ಪತ್ರಿಕೆಯ ವರದಿ ವಿಫಲಗೊಳಿಸಿತ್ತು. ಠಾಣೆಯಲ್ಲಿಯೇ ತನ್ನ ಗೆಳೆಯನ ಹುಟ್ಟು ಹಬ್ಬ ಆಚರಿಸಿದ ಸರಗೂರು ಸಬ್ ಇನ್‌ಸ್ಪೆಕ್ಟರ್ ಪತ್ರಿಕೆಯ ವರದಿಯ ಪರಿಣಾಮ ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಪತ್ರಿಕೆ ವರದಿಯನ್ನು ಆಧರಿಸಿ ನಿರ್ಬಂಧ ಹೇರಲಾಯಿತು. ಇದು ನೆನಪಿನಾಳದಿಂದ ಹೆಕ್ಕಿದ ಕೆಲವೇ ಪ್ರಕರಣಗಳು. ಇಂತಹ ಅನೇಕ ಉದಾಹರಣೆಗಳನ್ನು ಪಟ್ಟಿ ಮಾಡಬಹುದು.

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

14 hours ago