ಆಂದೋಲನ 50

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ ನಿರಂತರವಾಗಿ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿಯೇ ರಾಜ್ಯ ಮಟ್ಟದ ಪತ್ರಿಕೆಗಳ ದರ ಸಮರದ ಹೊರತಾಗಿಯೂ ಸುದ್ದಿ ಮೌಲ್ಯಕ್ಕೆ ಆದ್ಯತೆ ನೀಡಿದ ‘ಆಂದೋಲನ’ ನಂಬರ್ ವನ್ ಪತ್ರಿಕೆಯಾಗಿ ಮುಂದುವರಿದಿದೆ.

ಆಂದೋಲನ ಪತ್ರಿಕೆಯಲ್ಲಿ ಯಾವುದೇ ಸುದ್ದಿಗಳು ಪ್ರಕಟವಾದರೆ ಸಂಬಂಧಪಟ್ಟವರು ತಕ್ಷಣ ಸ್ಪಂದಿಸುತ್ತಾರೆ ಎನ್ನುವ ಓದುಗರ ನಂಬಿಕೆ ಇದುವರೆಗೆ ಸುಳ್ಳಾಗಿಲ್ಲ. ಆಂದೋಲನ ವರದಿ ಫಲಶ್ರುತಿಯ ಕೆಲವು ಉದಾಹರಣೆಗಳು ಇಲ್ಲಿವೆ.

ಸುಮಾರು ೨೦ ವರ್ಷಗಳ ಹಿಂದಿನ ಮಾತು. ತಾಲ್ಲೂಕಿನ ಅಂತರಸಂತೆ ವಿಎಸ್ಸೆಸ್ಸೆನ್ ಸೊಸೈಟಿಯಲ್ಲಿ ಪಡಿತರದಾರರಿಗೆ ವಿತರಿಸದೆ ಸುಮಾರು ನೂರು ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ಮತ್ತು ಗೋಧಿ ದಾಸ್ತಾನು ಮಾಡಲಾಗಿತ್ತು. ಇದನ್ನು ಕೇರಳಕ್ಕೆ ಸಾಗಿಸುವ ಹುನ್ನಾರದ ಸುಳಿವು ಪಡೆದ ಪತ್ರಿಕೆ ಸಚಿತ್ರ ವರದಿ ಮಾಡಿತ್ತು. ಪರಿಣಾಮ ಆಹಾರ ಶಿರಸ್ತೇದಾರ್, ಫುಡ್ ಇನ್‌ಸ್ಪೆಕ್ಟರ್, ಕಾರ‌್ಯದರ್ಶಿ ಅಮಾನತುಗೊಂಡರು. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಪತ್ರಿಕೆ ವಿವರವಾದ ವರದಿ ಪ್ರಕಟಿಸಿದ ಬಳಿಕ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕೋಟೆ ಪಟ್ಟಣ ಪಂಚಾಯಿತಿಯ ಖಾತೆ ಅವ್ಯವಹಾರವನ್ನು ಪತ್ರಿಕೆ ಬಯಲಿಗೆಳೆದ ಬಳಿಕ ಹಲವು ಜನಪ್ರತಿನಿಧಿಗಳ ಮೇಲೆ ಕೇಸು ದಾಖಲಾಯಿತು.

ಜಿಪಂ ಕಾಮಗಾರಿಯ ೪ ಕೋಟಿ ರೂ. ಮೊತ್ತದ ಹಗರಣವನ್ನೂ ಆಂದೋಲನ ಬಯಲಿಗೆಳೆದಿತ್ತು. ಈ ಸಂಬಂಧ ಎಂಜಿನಿಯರ್ ಅಮಾನತಾಗಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಸ್ತಿ ಪರಭಾರೆ ಸಂಚನ್ನು ಪತ್ರಿಕೆಯ ವರದಿ ವಿಫಲಗೊಳಿಸಿತ್ತು. ಠಾಣೆಯಲ್ಲಿಯೇ ತನ್ನ ಗೆಳೆಯನ ಹುಟ್ಟು ಹಬ್ಬ ಆಚರಿಸಿದ ಸರಗೂರು ಸಬ್ ಇನ್‌ಸ್ಪೆಕ್ಟರ್ ಪತ್ರಿಕೆಯ ವರದಿಯ ಪರಿಣಾಮ ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಪತ್ರಿಕೆ ವರದಿಯನ್ನು ಆಧರಿಸಿ ನಿರ್ಬಂಧ ಹೇರಲಾಯಿತು. ಇದು ನೆನಪಿನಾಳದಿಂದ ಹೆಕ್ಕಿದ ಕೆಲವೇ ಪ್ರಕರಣಗಳು. ಇಂತಹ ಅನೇಕ ಉದಾಹರಣೆಗಳನ್ನು ಪಟ್ಟಿ ಮಾಡಬಹುದು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago