ಆಂದೋಲನ 50

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ ನಿರಂತರವಾಗಿ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿಯೇ ರಾಜ್ಯ ಮಟ್ಟದ ಪತ್ರಿಕೆಗಳ ದರ ಸಮರದ ಹೊರತಾಗಿಯೂ ಸುದ್ದಿ ಮೌಲ್ಯಕ್ಕೆ ಆದ್ಯತೆ ನೀಡಿದ ‘ಆಂದೋಲನ’ ನಂಬರ್ ವನ್ ಪತ್ರಿಕೆಯಾಗಿ ಮುಂದುವರಿದಿದೆ.

ಆಂದೋಲನ ಪತ್ರಿಕೆಯಲ್ಲಿ ಯಾವುದೇ ಸುದ್ದಿಗಳು ಪ್ರಕಟವಾದರೆ ಸಂಬಂಧಪಟ್ಟವರು ತಕ್ಷಣ ಸ್ಪಂದಿಸುತ್ತಾರೆ ಎನ್ನುವ ಓದುಗರ ನಂಬಿಕೆ ಇದುವರೆಗೆ ಸುಳ್ಳಾಗಿಲ್ಲ. ಆಂದೋಲನ ವರದಿ ಫಲಶ್ರುತಿಯ ಕೆಲವು ಉದಾಹರಣೆಗಳು ಇಲ್ಲಿವೆ.

ಸುಮಾರು ೨೦ ವರ್ಷಗಳ ಹಿಂದಿನ ಮಾತು. ತಾಲ್ಲೂಕಿನ ಅಂತರಸಂತೆ ವಿಎಸ್ಸೆಸ್ಸೆನ್ ಸೊಸೈಟಿಯಲ್ಲಿ ಪಡಿತರದಾರರಿಗೆ ವಿತರಿಸದೆ ಸುಮಾರು ನೂರು ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ಮತ್ತು ಗೋಧಿ ದಾಸ್ತಾನು ಮಾಡಲಾಗಿತ್ತು. ಇದನ್ನು ಕೇರಳಕ್ಕೆ ಸಾಗಿಸುವ ಹುನ್ನಾರದ ಸುಳಿವು ಪಡೆದ ಪತ್ರಿಕೆ ಸಚಿತ್ರ ವರದಿ ಮಾಡಿತ್ತು. ಪರಿಣಾಮ ಆಹಾರ ಶಿರಸ್ತೇದಾರ್, ಫುಡ್ ಇನ್‌ಸ್ಪೆಕ್ಟರ್, ಕಾರ‌್ಯದರ್ಶಿ ಅಮಾನತುಗೊಂಡರು. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಪತ್ರಿಕೆ ವಿವರವಾದ ವರದಿ ಪ್ರಕಟಿಸಿದ ಬಳಿಕ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕೋಟೆ ಪಟ್ಟಣ ಪಂಚಾಯಿತಿಯ ಖಾತೆ ಅವ್ಯವಹಾರವನ್ನು ಪತ್ರಿಕೆ ಬಯಲಿಗೆಳೆದ ಬಳಿಕ ಹಲವು ಜನಪ್ರತಿನಿಧಿಗಳ ಮೇಲೆ ಕೇಸು ದಾಖಲಾಯಿತು.

ಜಿಪಂ ಕಾಮಗಾರಿಯ ೪ ಕೋಟಿ ರೂ. ಮೊತ್ತದ ಹಗರಣವನ್ನೂ ಆಂದೋಲನ ಬಯಲಿಗೆಳೆದಿತ್ತು. ಈ ಸಂಬಂಧ ಎಂಜಿನಿಯರ್ ಅಮಾನತಾಗಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಸ್ತಿ ಪರಭಾರೆ ಸಂಚನ್ನು ಪತ್ರಿಕೆಯ ವರದಿ ವಿಫಲಗೊಳಿಸಿತ್ತು. ಠಾಣೆಯಲ್ಲಿಯೇ ತನ್ನ ಗೆಳೆಯನ ಹುಟ್ಟು ಹಬ್ಬ ಆಚರಿಸಿದ ಸರಗೂರು ಸಬ್ ಇನ್‌ಸ್ಪೆಕ್ಟರ್ ಪತ್ರಿಕೆಯ ವರದಿಯ ಪರಿಣಾಮ ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಪತ್ರಿಕೆ ವರದಿಯನ್ನು ಆಧರಿಸಿ ನಿರ್ಬಂಧ ಹೇರಲಾಯಿತು. ಇದು ನೆನಪಿನಾಳದಿಂದ ಹೆಕ್ಕಿದ ಕೆಲವೇ ಪ್ರಕರಣಗಳು. ಇಂತಹ ಅನೇಕ ಉದಾಹರಣೆಗಳನ್ನು ಪಟ್ಟಿ ಮಾಡಬಹುದು.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

12 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

12 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

13 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

22 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

23 hours ago