ಆಂದೋಲನ 50

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ ನಿರಂತರವಾಗಿ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿಯೇ ರಾಜ್ಯ ಮಟ್ಟದ ಪತ್ರಿಕೆಗಳ ದರ ಸಮರದ ಹೊರತಾಗಿಯೂ ಸುದ್ದಿ ಮೌಲ್ಯಕ್ಕೆ ಆದ್ಯತೆ ನೀಡಿದ ‘ಆಂದೋಲನ’ ನಂಬರ್ ವನ್ ಪತ್ರಿಕೆಯಾಗಿ ಮುಂದುವರಿದಿದೆ.

ಆಂದೋಲನ ಪತ್ರಿಕೆಯಲ್ಲಿ ಯಾವುದೇ ಸುದ್ದಿಗಳು ಪ್ರಕಟವಾದರೆ ಸಂಬಂಧಪಟ್ಟವರು ತಕ್ಷಣ ಸ್ಪಂದಿಸುತ್ತಾರೆ ಎನ್ನುವ ಓದುಗರ ನಂಬಿಕೆ ಇದುವರೆಗೆ ಸುಳ್ಳಾಗಿಲ್ಲ. ಆಂದೋಲನ ವರದಿ ಫಲಶ್ರುತಿಯ ಕೆಲವು ಉದಾಹರಣೆಗಳು ಇಲ್ಲಿವೆ.

ಸುಮಾರು ೨೦ ವರ್ಷಗಳ ಹಿಂದಿನ ಮಾತು. ತಾಲ್ಲೂಕಿನ ಅಂತರಸಂತೆ ವಿಎಸ್ಸೆಸ್ಸೆನ್ ಸೊಸೈಟಿಯಲ್ಲಿ ಪಡಿತರದಾರರಿಗೆ ವಿತರಿಸದೆ ಸುಮಾರು ನೂರು ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ಮತ್ತು ಗೋಧಿ ದಾಸ್ತಾನು ಮಾಡಲಾಗಿತ್ತು. ಇದನ್ನು ಕೇರಳಕ್ಕೆ ಸಾಗಿಸುವ ಹುನ್ನಾರದ ಸುಳಿವು ಪಡೆದ ಪತ್ರಿಕೆ ಸಚಿತ್ರ ವರದಿ ಮಾಡಿತ್ತು. ಪರಿಣಾಮ ಆಹಾರ ಶಿರಸ್ತೇದಾರ್, ಫುಡ್ ಇನ್‌ಸ್ಪೆಕ್ಟರ್, ಕಾರ‌್ಯದರ್ಶಿ ಅಮಾನತುಗೊಂಡರು. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಪತ್ರಿಕೆ ವಿವರವಾದ ವರದಿ ಪ್ರಕಟಿಸಿದ ಬಳಿಕ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕೋಟೆ ಪಟ್ಟಣ ಪಂಚಾಯಿತಿಯ ಖಾತೆ ಅವ್ಯವಹಾರವನ್ನು ಪತ್ರಿಕೆ ಬಯಲಿಗೆಳೆದ ಬಳಿಕ ಹಲವು ಜನಪ್ರತಿನಿಧಿಗಳ ಮೇಲೆ ಕೇಸು ದಾಖಲಾಯಿತು.

ಜಿಪಂ ಕಾಮಗಾರಿಯ ೪ ಕೋಟಿ ರೂ. ಮೊತ್ತದ ಹಗರಣವನ್ನೂ ಆಂದೋಲನ ಬಯಲಿಗೆಳೆದಿತ್ತು. ಈ ಸಂಬಂಧ ಎಂಜಿನಿಯರ್ ಅಮಾನತಾಗಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಸ್ತಿ ಪರಭಾರೆ ಸಂಚನ್ನು ಪತ್ರಿಕೆಯ ವರದಿ ವಿಫಲಗೊಳಿಸಿತ್ತು. ಠಾಣೆಯಲ್ಲಿಯೇ ತನ್ನ ಗೆಳೆಯನ ಹುಟ್ಟು ಹಬ್ಬ ಆಚರಿಸಿದ ಸರಗೂರು ಸಬ್ ಇನ್‌ಸ್ಪೆಕ್ಟರ್ ಪತ್ರಿಕೆಯ ವರದಿಯ ಪರಿಣಾಮ ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕ್ಲಬ್‌ಗಳ ಮೇಲೆ ಪತ್ರಿಕೆ ವರದಿಯನ್ನು ಆಧರಿಸಿ ನಿರ್ಬಂಧ ಹೇರಲಾಯಿತು. ಇದು ನೆನಪಿನಾಳದಿಂದ ಹೆಕ್ಕಿದ ಕೆಲವೇ ಪ್ರಕರಣಗಳು. ಇಂತಹ ಅನೇಕ ಉದಾಹರಣೆಗಳನ್ನು ಪಟ್ಟಿ ಮಾಡಬಹುದು.

andolana

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

3 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

3 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

3 hours ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

4 hours ago