ಆಂದೋಲನ 50

ಟೈಟ್ ಜಾಕೆಟ್ ಆರೆಂಜ್‌ಗೆ ಮರು ಹುಟ್ಟು

ಕೊಡಗಿನಲ್ಲಿ ವಿಶೇಷ ಕಿತ್ತಳೆ ತಳಿಗೆ ಸುಮಾರು ೧೮೦ ವರ್ಷಗಳ ಹಿಂದಿನ ಇತಿಹಾಸವಿದೆ.ಹಿಂದೊಮ್ಮೆ ಸಾವಿರ ಲಾರಿಗಳ ಕಿತ್ತಳೆ ಲೋಡು ಕೊಡಗಿಂದ ಹೊರಡುತ್ತಿತ್ತು.ನಂತರ ದಿನಗಳಲ್ಲಿ ಗ್ರೇನಿಂಗ್ ರೋಗ ಬಾಧೆಯಿಂದ ಕೊಡಗಿನ ಕಿತ್ತಳೆಯ ವೈಭವ ಇಳಿಮುಖವಾಯಿತು. ಅದರ ಜಾಗವನ್ನು ನಾಗಪುರದ ಕಿತ್ತಳೆ ಆವರಿಸಿಕೊಂಡಿತ್ತು. ಈಗ ರೋಗ ನಿಧಾನಕ್ಕೆ ನಿಯಂತ್ರಣಕ್ಕೆ ಬಂದಿದ್ದು ಕೊಡಗಿನಲ್ಲಿ ಕಿತ್ತಳೆ ಬೆಳೆ ಚೇತರಿಕೆ ಕಾಣುತ್ತಿದೆ.

ಪುನೀತ್ ಮಡಿಕೇರಿ

ಕೊಡಗಿನ ಕಿತ್ತಳೆ ಗಾತ್ರ, ಬಣ್ಣ, ರುಚಿ ಹಾಗೂ ಔಷಧೀಯ ಗುಣಗಳಿಂದ ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಾದ್ಯಂತ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ.
ಕೊಡಗಿನಲ್ಲಿ ಕಾಫಿ, ಕಾಳು ಮೆಣಸು ತೋಟದ ಜತೆಯಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತದೆ. ಕಳೆದ ೧೨ ವರ್ಷಗಳಿಂದ ರೋಗಗಳಿಗೆ ತುತ್ತಾಗಿ ಅವನತಿಯತ್ತ ಸಾಗುತ್ತಿದ್ದ ಕಿತ್ತಳೆ ಇಂದು ಚೇತರಿಕೆ ಕಾಣುತ್ತಿದೆ.
ಭಾರತದಲ್ಲಿನ ಮೂರು ಪ್ರಮುಖ ಕಿತ್ತಳೆ ತಳಿಗಳೆಂದರೆ ನಾಗಪುರ ಕಿತ್ತಳೆ, ಖಾಸಿ ಕಿತ್ತಳೆ ಮತ್ತು ಕೊಡಗಿನ ಕಿತ್ತಳೆ. ಅದರಲ್ಲೂ ಕೊಡಗಿನ ಕಿತ್ತಳೆಗೆ ಹೆಚ್ಚಿನ ಬೇಡಿಕೆಯಿದೆ. ಸಿಪ್ಪೆಯು ಒಳಗಿನ ಹಣ್ಣಿನ ಭಾಗಕ್ಕೆ ಸಡಿಲವಾಗಿ ಅಂಟಿಕೊಳ್ಳುವ ಗುಣವಿರುವ ನಾಗಪುರ ಕಿತ್ತಳೆ ತಳಿಗೆ ಲೂಸ್ ಜಾಕೆಟ್ ಆರೆಂಜ್ ಅಂತ ಕರೆಯಲಾಗುತ್ತದೆ. ಸಿಪ್ಪೆಯು ಒಳಗಿನ ಹಣ್ಣಿಗೆ ಬಿಗಿಯಾಗಿ ಅಂಟಿಕೊಳ್ಳುವ ಗುಣವಿಶೇಷದ ಕೊಡಗಿನ ಕಿತ್ತಳೆಯು ಟೈಟ್ ಜಾಕೆಟ್ ಆರೆಂಜ್ ಎಂದೇ ಪ್ರಸಿದ್ಧವಾಗಿದೆ.

ಕೊಡಗಿನ ಕಿತ್ತಳೆಯ ಸಿಪ್ಪೆ ತೆಳು. ನೀರಿನಂಶ ಜಾಸ್ತಿ. ಬಾಯಲ್ಲಿ ನೀರೂರಿಸುವ ಹುಳಿಮಿಶ್ರಿತ ಸಿಹಿಯೇ ಕೊಡಗಿನ ಕಿತ್ತಳೆಯ ವಿಶೇಷ. ಅದರ ಸ್ವಾದಿಷ್ಟ ರಸ, ರುಚಿ ಹಾಗು ಕಾಂತಿಗಳು ಅದನ್ನು ಫೇಸ್ ಪ್ಯಾಕಿಗಾಗಿ ಹಾಗು ಮತ್ತಿತರ ಔಷಧೀಯ ಉಪಯೋಗಕ್ಕಾಗಿ ಜನರು ಬಳಸಿಕೊಳ್ಳುವಂತೆ ಆಕರ್ಷಿಸಿವೆ.
ಕಿತ್ತಳೆ ರಸವನ್ನು ಕೂದಲು ಉದುರದಂತೆ ತಡೆಯಲು, ತಲೆತುರಿಕೆ ಹಾಗೂ ಕೂದಲ ಹೊಟ್ಟು ಆಗದಂತೆ ತಡೆಯಲು ಪರಿಣಾಮಕಾರಿಯಾಗಿ ಬಳಸಬಹುದಾಗಿದೆ. ಕೊಡಗಿನ ಕಿತ್ತಳೆಯು ಈ ಪ್ರದೇಶಕ್ಕೆ ಸೀಮಿತವಾದ ವಿಶೇಷ ಬೆಳೆಯಾದ ಹಿನ್ನೆಲೆಯಲ್ಲಿ ಭೌಗೋಳಿಕ ಮಾನ್ಯತೆ ( ಜಿಐ ಟ್ಯಾಗ್ ) ದೊರೆತಿದೆ.

 

ಕುಗ್ಗದ ಬೆಳೆಗಾರರ ಆಸಕ್ತಿ

ಕೊಡಗಿನ ಕಿತ್ತಳೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಪ್ರತಿವರ್ಷ ತೋಟಗಾರಿಕಾ ಇಲಾಖೆಯಲ್ಲಿ ಕಿತ್ತಳೆ ಸಸಿಗಳನ್ನು ಅಭಿವೃದ್ಧಿಪಡಿಸಿ ಬೆಳೆಗಾರರಿಗೆ ವಿತರಿಸಲಾಗುತ್ತಿದೆ. ಜತೆಗೆ, ಖಾಸಗಿ ನರ್ಸರಿಗಳಲ್ಲಿಯೂ ಕಿತ್ತಳೆ ಗಿಡಗಳನ್ನು ಬೆಳೆಯಲಾಗುತ್ತಿದ್ದು ಮುಂಗಾರಿನ ಅವಧಿಯಲ್ಲಿ ಬೆಳೆಗಾರರು ಕಿತ್ತಳೆ ಗಿಡಗಳನ್ನು ಖರೀದಿಸಿ ತೋಟಗಳಲ್ಲಿ ನೆಡುತ್ತಾರೆ. ಕೊಡಗಿನ ಕಿತ್ತಳೆ ಹಣ್ಣಿಗೆ ಅಧಿಕ ಬೇಡಿಕೆ ಇರುವುದರಿಂದ ಬೆಳೆಗಾರರ ಆಸಕ್ತಿ ಕುಗ್ಗಿಲ್ಲ. ನರ್ಸರಿಗಳಲ್ಲಿ ಗಿಡಗಳನ್ನು ಬೆಳೆದು ರೈತರು ಲಾಭಗಳಿಸುತ್ತಿದ್ದಾರೆ.

ರೋಗ ಬಾಧೆಗೆ ತುತ್ತಾಗಿದ್ದ ಕೊಡಗಿನ ಕಿತ್ತಳೆ ೧೨ ವರ್ಷಗಳ ನಂತರ ಚೇತರಿಕೆ ಕಾಣುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು ೬೬೩೯ ಹೆಕ್ಟರ್‌ನಲ್ಲಿ ಬೆಳೆಯಲಾಗುತ್ತಿದ್ದು, ಸುಮಾರು ಒಂದೂವರೆ ಲಕ್ಷ ಮೆಟ್ರಿಕ್ ಟನ್ ಇಳುವರಿ ಬರುತ್ತಿದೆ.ಕೇರಳದಲ್ಲಿ ಕೊಡಗಿನ ಕಿತ್ತಲೆಗೆ ಹೆಚ್ಚು ಬೇಡಿಕೆ ಇದೆ. ಜತೆಗೆ ಜಿಲ್ಲೆಯ ಹಾಪ್ ಕಾಮ್ಸ್ ನಲ್ಲಿ ಖರೀದಿ ಮಾಡಲಾಗುತ್ತದೆ.

-ಸಿ.ಎಂ.ಪ್ರಮೋದ್, ಉಪನಿದೇರ್ಶಕರು(ಪ್ರಭಾರ), ತೋಟಗಾರಿಕೆ ಇಲಾಖೆ.

 

 

 

 

andolana

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

3 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

3 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

3 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

4 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

4 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago