ಆಂದೋಲನ 50

ಟೈಟ್ ಜಾಕೆಟ್ ಆರೆಂಜ್‌ಗೆ ಮರು ಹುಟ್ಟು

ಕೊಡಗಿನಲ್ಲಿ ವಿಶೇಷ ಕಿತ್ತಳೆ ತಳಿಗೆ ಸುಮಾರು ೧೮೦ ವರ್ಷಗಳ ಹಿಂದಿನ ಇತಿಹಾಸವಿದೆ.ಹಿಂದೊಮ್ಮೆ ಸಾವಿರ ಲಾರಿಗಳ ಕಿತ್ತಳೆ ಲೋಡು ಕೊಡಗಿಂದ ಹೊರಡುತ್ತಿತ್ತು.ನಂತರ ದಿನಗಳಲ್ಲಿ ಗ್ರೇನಿಂಗ್ ರೋಗ ಬಾಧೆಯಿಂದ ಕೊಡಗಿನ ಕಿತ್ತಳೆಯ ವೈಭವ ಇಳಿಮುಖವಾಯಿತು. ಅದರ ಜಾಗವನ್ನು ನಾಗಪುರದ ಕಿತ್ತಳೆ ಆವರಿಸಿಕೊಂಡಿತ್ತು. ಈಗ ರೋಗ ನಿಧಾನಕ್ಕೆ ನಿಯಂತ್ರಣಕ್ಕೆ ಬಂದಿದ್ದು ಕೊಡಗಿನಲ್ಲಿ ಕಿತ್ತಳೆ ಬೆಳೆ ಚೇತರಿಕೆ ಕಾಣುತ್ತಿದೆ.

ಪುನೀತ್ ಮಡಿಕೇರಿ

ಕೊಡಗಿನ ಕಿತ್ತಳೆ ಗಾತ್ರ, ಬಣ್ಣ, ರುಚಿ ಹಾಗೂ ಔಷಧೀಯ ಗುಣಗಳಿಂದ ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಾದ್ಯಂತ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ.
ಕೊಡಗಿನಲ್ಲಿ ಕಾಫಿ, ಕಾಳು ಮೆಣಸು ತೋಟದ ಜತೆಯಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತದೆ. ಕಳೆದ ೧೨ ವರ್ಷಗಳಿಂದ ರೋಗಗಳಿಗೆ ತುತ್ತಾಗಿ ಅವನತಿಯತ್ತ ಸಾಗುತ್ತಿದ್ದ ಕಿತ್ತಳೆ ಇಂದು ಚೇತರಿಕೆ ಕಾಣುತ್ತಿದೆ.
ಭಾರತದಲ್ಲಿನ ಮೂರು ಪ್ರಮುಖ ಕಿತ್ತಳೆ ತಳಿಗಳೆಂದರೆ ನಾಗಪುರ ಕಿತ್ತಳೆ, ಖಾಸಿ ಕಿತ್ತಳೆ ಮತ್ತು ಕೊಡಗಿನ ಕಿತ್ತಳೆ. ಅದರಲ್ಲೂ ಕೊಡಗಿನ ಕಿತ್ತಳೆಗೆ ಹೆಚ್ಚಿನ ಬೇಡಿಕೆಯಿದೆ. ಸಿಪ್ಪೆಯು ಒಳಗಿನ ಹಣ್ಣಿನ ಭಾಗಕ್ಕೆ ಸಡಿಲವಾಗಿ ಅಂಟಿಕೊಳ್ಳುವ ಗುಣವಿರುವ ನಾಗಪುರ ಕಿತ್ತಳೆ ತಳಿಗೆ ಲೂಸ್ ಜಾಕೆಟ್ ಆರೆಂಜ್ ಅಂತ ಕರೆಯಲಾಗುತ್ತದೆ. ಸಿಪ್ಪೆಯು ಒಳಗಿನ ಹಣ್ಣಿಗೆ ಬಿಗಿಯಾಗಿ ಅಂಟಿಕೊಳ್ಳುವ ಗುಣವಿಶೇಷದ ಕೊಡಗಿನ ಕಿತ್ತಳೆಯು ಟೈಟ್ ಜಾಕೆಟ್ ಆರೆಂಜ್ ಎಂದೇ ಪ್ರಸಿದ್ಧವಾಗಿದೆ.

ಕೊಡಗಿನ ಕಿತ್ತಳೆಯ ಸಿಪ್ಪೆ ತೆಳು. ನೀರಿನಂಶ ಜಾಸ್ತಿ. ಬಾಯಲ್ಲಿ ನೀರೂರಿಸುವ ಹುಳಿಮಿಶ್ರಿತ ಸಿಹಿಯೇ ಕೊಡಗಿನ ಕಿತ್ತಳೆಯ ವಿಶೇಷ. ಅದರ ಸ್ವಾದಿಷ್ಟ ರಸ, ರುಚಿ ಹಾಗು ಕಾಂತಿಗಳು ಅದನ್ನು ಫೇಸ್ ಪ್ಯಾಕಿಗಾಗಿ ಹಾಗು ಮತ್ತಿತರ ಔಷಧೀಯ ಉಪಯೋಗಕ್ಕಾಗಿ ಜನರು ಬಳಸಿಕೊಳ್ಳುವಂತೆ ಆಕರ್ಷಿಸಿವೆ.
ಕಿತ್ತಳೆ ರಸವನ್ನು ಕೂದಲು ಉದುರದಂತೆ ತಡೆಯಲು, ತಲೆತುರಿಕೆ ಹಾಗೂ ಕೂದಲ ಹೊಟ್ಟು ಆಗದಂತೆ ತಡೆಯಲು ಪರಿಣಾಮಕಾರಿಯಾಗಿ ಬಳಸಬಹುದಾಗಿದೆ. ಕೊಡಗಿನ ಕಿತ್ತಳೆಯು ಈ ಪ್ರದೇಶಕ್ಕೆ ಸೀಮಿತವಾದ ವಿಶೇಷ ಬೆಳೆಯಾದ ಹಿನ್ನೆಲೆಯಲ್ಲಿ ಭೌಗೋಳಿಕ ಮಾನ್ಯತೆ ( ಜಿಐ ಟ್ಯಾಗ್ ) ದೊರೆತಿದೆ.

 

ಕುಗ್ಗದ ಬೆಳೆಗಾರರ ಆಸಕ್ತಿ

ಕೊಡಗಿನ ಕಿತ್ತಳೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಪ್ರತಿವರ್ಷ ತೋಟಗಾರಿಕಾ ಇಲಾಖೆಯಲ್ಲಿ ಕಿತ್ತಳೆ ಸಸಿಗಳನ್ನು ಅಭಿವೃದ್ಧಿಪಡಿಸಿ ಬೆಳೆಗಾರರಿಗೆ ವಿತರಿಸಲಾಗುತ್ತಿದೆ. ಜತೆಗೆ, ಖಾಸಗಿ ನರ್ಸರಿಗಳಲ್ಲಿಯೂ ಕಿತ್ತಳೆ ಗಿಡಗಳನ್ನು ಬೆಳೆಯಲಾಗುತ್ತಿದ್ದು ಮುಂಗಾರಿನ ಅವಧಿಯಲ್ಲಿ ಬೆಳೆಗಾರರು ಕಿತ್ತಳೆ ಗಿಡಗಳನ್ನು ಖರೀದಿಸಿ ತೋಟಗಳಲ್ಲಿ ನೆಡುತ್ತಾರೆ. ಕೊಡಗಿನ ಕಿತ್ತಳೆ ಹಣ್ಣಿಗೆ ಅಧಿಕ ಬೇಡಿಕೆ ಇರುವುದರಿಂದ ಬೆಳೆಗಾರರ ಆಸಕ್ತಿ ಕುಗ್ಗಿಲ್ಲ. ನರ್ಸರಿಗಳಲ್ಲಿ ಗಿಡಗಳನ್ನು ಬೆಳೆದು ರೈತರು ಲಾಭಗಳಿಸುತ್ತಿದ್ದಾರೆ.

ರೋಗ ಬಾಧೆಗೆ ತುತ್ತಾಗಿದ್ದ ಕೊಡಗಿನ ಕಿತ್ತಳೆ ೧೨ ವರ್ಷಗಳ ನಂತರ ಚೇತರಿಕೆ ಕಾಣುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು ೬೬೩೯ ಹೆಕ್ಟರ್‌ನಲ್ಲಿ ಬೆಳೆಯಲಾಗುತ್ತಿದ್ದು, ಸುಮಾರು ಒಂದೂವರೆ ಲಕ್ಷ ಮೆಟ್ರಿಕ್ ಟನ್ ಇಳುವರಿ ಬರುತ್ತಿದೆ.ಕೇರಳದಲ್ಲಿ ಕೊಡಗಿನ ಕಿತ್ತಲೆಗೆ ಹೆಚ್ಚು ಬೇಡಿಕೆ ಇದೆ. ಜತೆಗೆ ಜಿಲ್ಲೆಯ ಹಾಪ್ ಕಾಮ್ಸ್ ನಲ್ಲಿ ಖರೀದಿ ಮಾಡಲಾಗುತ್ತದೆ.

-ಸಿ.ಎಂ.ಪ್ರಮೋದ್, ಉಪನಿದೇರ್ಶಕರು(ಪ್ರಭಾರ), ತೋಟಗಾರಿಕೆ ಇಲಾಖೆ.

 

 

 

 

andolana

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago