ಆಂದೋಲನ 50

ಪತ್ರಿಕೆ ಹಂಚಲು ದಿನಾ 50 ಕಿ.ಮೀ. ಸೈಕಲ್ ತುಳಿತಾರೆ…

-ಶ್ರೀಧರ್ ಆರ್. ಭಟ್

ಒಂದು ಪತ್ರಿಕೆ ಎಂದರೆ ಒಬ್ಬ ವ್ಯಕ್ತಿಯಿಂದ ಆಗುವುದಿಲ್ಲ . ಸುದ್ದಿ ಸಂಗ್ರಾಹಕರಿಂದ ಹಿಡಿದು ಅದು ಓದುಗರ ಕೈ ತಲುಪುವವರಿಗೆ ಈ ರಂಗದಲ್ಲಿ ಹಲವಾರು ಜನರ ಪರಿಶ್ರಮ ಅಡಕವಾಗಿರುತ್ತದೆ. ಕೆಲವರ ಶ್ರಮ ಬಹಿರಂಗವಾದರೆ ಮಿಕ್ಕವರ ಶ್ರಮ ಎಲೆಮರೆ ಕಾಯಿಯಂತಾಗಿ ಹೊರಜಗತ್ತಿಗೆ ಕಾಣುವುದೇ ಇಲ್ಲ. ಪತ್ರಿಕಾ ರಂಗದಲ್ಲಿ ಪ್ರತಿ ದಿನ ಚಳಿ, ಮಳೆ, ಗಾಳಿ ಬಿಸಿಲುಗಳ ಪರಿವೆಯೇ ಇಲ್ಲದೆ ದುಡಿಯುತ್ತಿರುವ ಮಹತ್ವದ ವಿಭಾಗ ವಿತರಣೆಯ ವಿಭಾಗ. ಮುದ್ರಿತವಾಗಿ ಹೊರಬಂದ ಪತ್ರಿಕೆಯನ್ನು ಸಮಯಕ್ಕೆ ಸರಿಯಾಗಿ ಓದುಗರ ಕೈಗಿಡಲು ಮನೆ ಮನೆಗೆ ಪತ್ರಿಕೆ ತಲುಪಿಸುವ ಜವಾಬ್ದಾರಿ ಇವರದ್ದು. ಸೈಕಲ್‌ನಲ್ಲಿ ಸಾಗಿ ಪತ್ರಿಕೆ ಹುಂಚುವವರು ವಿರಳವಾಗಿ ವಾಹನಗಳಲ್ಲಿ ಪತ್ರಿಕೆ ತಲುಪಿಸುವ ವ್ಯವಸ್ಥೆ ಕಾಣುತ್ತಿರುವ ಈ ಕಾಲದಲ್ಲಿ ಇಲ್ಲೊಬ್ಬರು ಬರೋಬ್ಬರಿ ದಿನಕ್ಕೆ ೫೦ ಕಿ.ಮೀ. ಸುತ್ತಿ ೧೭ ಗ್ರಾಮಗಳಿಗೆ ಪತ್ರಿಕೆಯನ್ನು ತಲುಪಿಸುತ್ತಿದ್ದಾರೆ. ಇಂತಹ ಕಾಯಕ ಯೋಗಿಯನ್ನು ಕಾಣಲು ನೀವು ಮೈಸೂರು ತಾಲ್ಲೂಕಿನ ದೇವಯ್ಯನ ಹುಂಡಿಗೆ ಬರಬೇಕು.
ಈ ಗ್ರಾಮದ ಶಿವನಾಗು ಪತ್ರಿಕೆಯನ್ನು ಓದುಗರ ಕೈಗೆ ತಲುಪಿಸಲೇಂದೇ ಪ್ರತಿದಿನ ೫೦ ಕಿ.ಮೀ. ದೂರ ಸೈಕಲ್ ತುಳಿಯುತ್ತಿದ್ದಾರೆ. ಇವರ ಈ ಕಾಯಕ ಇಂದು ನಿನ್ನೆಯದಲ್ಲ . ಬರೋಬ್ಬರಿ ೨೪ ವರ್ಷಗಳಿಂದಲೂ ನಿರಂತರವಾಗಿ ಸಾಗಿದೆ.

ಬೆಳಗಿನ ಜಾವ ೩ ಗಂಟೆಗೆ ದೇವೇಗೌಡನ ಹುಂಡಿಯಿಂದ ಹೊರಬೀಳುವ ಶಿವನಾಗು, ಮೈಸೂರು ತಾಲ್ಲೂಕಿನ ಮೇಗಾಳಪುರಕ್ಕೆ ಬಂದು ವಾಹನಗಳಲ್ಲಿ ಬರುವ ಪತ್ರಿಕೆಗಳನ್ನು ಪಡೆದು ಸೈಕಲ್ ನಲ್ಲಿ ಹೇರಿಕೊಂಡು ವಿತರಣೆಯ ಕಾಯಕ ಆರಂಭಿಸುತ್ತಾರೆ. ಮೇಗಳಾಪುರ, ಮುದ್ದೇಗೌಡನ ಹುಂಡಿ, ಹೊಸಳ್ಳಿ, ಕುಪ್ಪೇಗಾಲ, ಅಂಚೆ ಹುಂಡಿ, ಸಿದ್ದರಾಮಯ್ಯನ ಹುಂಡಿ, ಕೆಂಪಯ್ಯನ ಹುಂಡಿ, ಶ್ರೀನಿವಾಸಪುರ, ರಂಗನಾಥ ಪುರ, ನಂದಿಗುಂದಪುರ, ನಂದಿಗುಂದ, ತುಂಬಸೋಗೆ, ಮರಡಿ ಹುಂಡಿ, ಹೊಸಕೋಟೆ, ತಾಯೂರು ಗ್ರಾಮಗಳಲ್ಲಿ ಪತ್ರಿಕೆ ವಿತರಿಸಿ ತಿರುಗಿ ದೇವೇಗೌಡನ ಹುಂಡಿಗೆ ಹಿಂತಿರುಗುವಾಗ ಬೆಳಿಗ್ಗೆ ೧೧ ಗಂಟೆಯಾಗುತ್ತದೆ.

ಪ್ರತಿ ದಿನವೂ ಪತ್ರಿಕೆಯ ವಿತರಣೆಗಾಗಿಯೇ ೮ ತಾಸುಗಳ ಕಾಲ ೫೦ ಕಿ.ಮೀ. ಸೈಕಲ್ ತುಳಿಯುವ ಇಂತಹವರ ಶ್ರಮ ಜೀವನಕ್ಕೆ ಬೆಲೆ ಕಟ್ಟಲಾಗದು. ಇಂಥವರೇ ಪತ್ರಿಕೆಗಳ ಆಧಾರಸ್ಥಂಭ. ಆದರೆ ಪತ್ರಿಕೆಗೆ ಸಂಬಂಧಿಸಿದ ಪ್ರಶಸ್ತಿಗಳ ವಿಚಾರಕ್ಕೆ ಬಂದರೆ ವಿತರಣೆ ವಿಭಾಗ ಗಣನೆಗೆ ಬರುವುದಿಲ್ಲ. ಹೀಗಾಗಿ ಶಿವನಾಗು ಅಂಥವರ ಶ್ರಮಕ್ಕೆ ಇಂದಿಗೂ ಮಾನ್ಯತೆ ಸಿಕ್ಕಿಲ್ಲ.

andolana

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

7 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

7 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

8 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

9 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

11 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

13 hours ago