-ಶ್ರೀಧರ್ ಆರ್. ಭಟ್
ಒಂದು ಪತ್ರಿಕೆ ಎಂದರೆ ಒಬ್ಬ ವ್ಯಕ್ತಿಯಿಂದ ಆಗುವುದಿಲ್ಲ . ಸುದ್ದಿ ಸಂಗ್ರಾಹಕರಿಂದ ಹಿಡಿದು ಅದು ಓದುಗರ ಕೈ ತಲುಪುವವರಿಗೆ ಈ ರಂಗದಲ್ಲಿ ಹಲವಾರು ಜನರ ಪರಿಶ್ರಮ ಅಡಕವಾಗಿರುತ್ತದೆ. ಕೆಲವರ ಶ್ರಮ ಬಹಿರಂಗವಾದರೆ ಮಿಕ್ಕವರ ಶ್ರಮ ಎಲೆಮರೆ ಕಾಯಿಯಂತಾಗಿ ಹೊರಜಗತ್ತಿಗೆ ಕಾಣುವುದೇ ಇಲ್ಲ. ಪತ್ರಿಕಾ ರಂಗದಲ್ಲಿ ಪ್ರತಿ ದಿನ ಚಳಿ, ಮಳೆ, ಗಾಳಿ ಬಿಸಿಲುಗಳ ಪರಿವೆಯೇ ಇಲ್ಲದೆ ದುಡಿಯುತ್ತಿರುವ ಮಹತ್ವದ ವಿಭಾಗ ವಿತರಣೆಯ ವಿಭಾಗ. ಮುದ್ರಿತವಾಗಿ ಹೊರಬಂದ ಪತ್ರಿಕೆಯನ್ನು ಸಮಯಕ್ಕೆ ಸರಿಯಾಗಿ ಓದುಗರ ಕೈಗಿಡಲು ಮನೆ ಮನೆಗೆ ಪತ್ರಿಕೆ ತಲುಪಿಸುವ ಜವಾಬ್ದಾರಿ ಇವರದ್ದು. ಸೈಕಲ್ನಲ್ಲಿ ಸಾಗಿ ಪತ್ರಿಕೆ ಹುಂಚುವವರು ವಿರಳವಾಗಿ ವಾಹನಗಳಲ್ಲಿ ಪತ್ರಿಕೆ ತಲುಪಿಸುವ ವ್ಯವಸ್ಥೆ ಕಾಣುತ್ತಿರುವ ಈ ಕಾಲದಲ್ಲಿ ಇಲ್ಲೊಬ್ಬರು ಬರೋಬ್ಬರಿ ದಿನಕ್ಕೆ ೫೦ ಕಿ.ಮೀ. ಸುತ್ತಿ ೧೭ ಗ್ರಾಮಗಳಿಗೆ ಪತ್ರಿಕೆಯನ್ನು ತಲುಪಿಸುತ್ತಿದ್ದಾರೆ. ಇಂತಹ ಕಾಯಕ ಯೋಗಿಯನ್ನು ಕಾಣಲು ನೀವು ಮೈಸೂರು ತಾಲ್ಲೂಕಿನ ದೇವಯ್ಯನ ಹುಂಡಿಗೆ ಬರಬೇಕು.
ಬೆಳಗಿನ ಜಾವ ೩ ಗಂಟೆಗೆ ದೇವೇಗೌಡನ ಹುಂಡಿಯಿಂದ ಹೊರಬೀಳುವ ಶಿವನಾಗು, ಮೈಸೂರು ತಾಲ್ಲೂಕಿನ ಮೇಗಾಳಪುರಕ್ಕೆ ಬಂದು ವಾಹನಗಳಲ್ಲಿ ಬರುವ ಪತ್ರಿಕೆಗಳನ್ನು ಪಡೆದು ಸೈಕಲ್ ನಲ್ಲಿ ಹೇರಿಕೊಂಡು ವಿತರಣೆಯ ಕಾಯಕ ಆರಂಭಿಸುತ್ತಾರೆ. ಮೇಗಳಾಪುರ, ಮುದ್ದೇಗೌಡನ ಹುಂಡಿ, ಹೊಸಳ್ಳಿ, ಕುಪ್ಪೇಗಾಲ, ಅಂಚೆ ಹುಂಡಿ, ಸಿದ್ದರಾಮಯ್ಯನ ಹುಂಡಿ, ಕೆಂಪಯ್ಯನ ಹುಂಡಿ, ಶ್ರೀನಿವಾಸಪುರ, ರಂಗನಾಥ ಪುರ, ನಂದಿಗುಂದಪುರ, ನಂದಿಗುಂದ, ತುಂಬಸೋಗೆ, ಮರಡಿ ಹುಂಡಿ, ಹೊಸಕೋಟೆ, ತಾಯೂರು ಗ್ರಾಮಗಳಲ್ಲಿ ಪತ್ರಿಕೆ ವಿತರಿಸಿ ತಿರುಗಿ ದೇವೇಗೌಡನ ಹುಂಡಿಗೆ ಹಿಂತಿರುಗುವಾಗ ಬೆಳಿಗ್ಗೆ ೧೧ ಗಂಟೆಯಾಗುತ್ತದೆ.
ಪ್ರತಿ ದಿನವೂ ಪತ್ರಿಕೆಯ ವಿತರಣೆಗಾಗಿಯೇ ೮ ತಾಸುಗಳ ಕಾಲ ೫೦ ಕಿ.ಮೀ. ಸೈಕಲ್ ತುಳಿಯುವ ಇಂತಹವರ ಶ್ರಮ ಜೀವನಕ್ಕೆ ಬೆಲೆ ಕಟ್ಟಲಾಗದು. ಇಂಥವರೇ ಪತ್ರಿಕೆಗಳ ಆಧಾರಸ್ಥಂಭ. ಆದರೆ ಪತ್ರಿಕೆಗೆ ಸಂಬಂಧಿಸಿದ ಪ್ರಶಸ್ತಿಗಳ ವಿಚಾರಕ್ಕೆ ಬಂದರೆ ವಿತರಣೆ ವಿಭಾಗ ಗಣನೆಗೆ ಬರುವುದಿಲ್ಲ. ಹೀಗಾಗಿ ಶಿವನಾಗು ಅಂಥವರ ಶ್ರಮಕ್ಕೆ ಇಂದಿಗೂ ಮಾನ್ಯತೆ ಸಿಕ್ಕಿಲ್ಲ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…