-ಶ್ರೀಧರ್ ಆರ್. ಭಟ್
ಒಂದು ಪತ್ರಿಕೆ ಎಂದರೆ ಒಬ್ಬ ವ್ಯಕ್ತಿಯಿಂದ ಆಗುವುದಿಲ್ಲ . ಸುದ್ದಿ ಸಂಗ್ರಾಹಕರಿಂದ ಹಿಡಿದು ಅದು ಓದುಗರ ಕೈ ತಲುಪುವವರಿಗೆ ಈ ರಂಗದಲ್ಲಿ ಹಲವಾರು ಜನರ ಪರಿಶ್ರಮ ಅಡಕವಾಗಿರುತ್ತದೆ. ಕೆಲವರ ಶ್ರಮ ಬಹಿರಂಗವಾದರೆ ಮಿಕ್ಕವರ ಶ್ರಮ ಎಲೆಮರೆ ಕಾಯಿಯಂತಾಗಿ ಹೊರಜಗತ್ತಿಗೆ ಕಾಣುವುದೇ ಇಲ್ಲ. ಪತ್ರಿಕಾ ರಂಗದಲ್ಲಿ ಪ್ರತಿ ದಿನ ಚಳಿ, ಮಳೆ, ಗಾಳಿ ಬಿಸಿಲುಗಳ ಪರಿವೆಯೇ ಇಲ್ಲದೆ ದುಡಿಯುತ್ತಿರುವ ಮಹತ್ವದ ವಿಭಾಗ ವಿತರಣೆಯ ವಿಭಾಗ. ಮುದ್ರಿತವಾಗಿ ಹೊರಬಂದ ಪತ್ರಿಕೆಯನ್ನು ಸಮಯಕ್ಕೆ ಸರಿಯಾಗಿ ಓದುಗರ ಕೈಗಿಡಲು ಮನೆ ಮನೆಗೆ ಪತ್ರಿಕೆ ತಲುಪಿಸುವ ಜವಾಬ್ದಾರಿ ಇವರದ್ದು. ಸೈಕಲ್ನಲ್ಲಿ ಸಾಗಿ ಪತ್ರಿಕೆ ಹುಂಚುವವರು ವಿರಳವಾಗಿ ವಾಹನಗಳಲ್ಲಿ ಪತ್ರಿಕೆ ತಲುಪಿಸುವ ವ್ಯವಸ್ಥೆ ಕಾಣುತ್ತಿರುವ ಈ ಕಾಲದಲ್ಲಿ ಇಲ್ಲೊಬ್ಬರು ಬರೋಬ್ಬರಿ ದಿನಕ್ಕೆ ೫೦ ಕಿ.ಮೀ. ಸುತ್ತಿ ೧೭ ಗ್ರಾಮಗಳಿಗೆ ಪತ್ರಿಕೆಯನ್ನು ತಲುಪಿಸುತ್ತಿದ್ದಾರೆ. ಇಂತಹ ಕಾಯಕ ಯೋಗಿಯನ್ನು ಕಾಣಲು ನೀವು ಮೈಸೂರು ತಾಲ್ಲೂಕಿನ ದೇವಯ್ಯನ ಹುಂಡಿಗೆ ಬರಬೇಕು.
ಬೆಳಗಿನ ಜಾವ ೩ ಗಂಟೆಗೆ ದೇವೇಗೌಡನ ಹುಂಡಿಯಿಂದ ಹೊರಬೀಳುವ ಶಿವನಾಗು, ಮೈಸೂರು ತಾಲ್ಲೂಕಿನ ಮೇಗಾಳಪುರಕ್ಕೆ ಬಂದು ವಾಹನಗಳಲ್ಲಿ ಬರುವ ಪತ್ರಿಕೆಗಳನ್ನು ಪಡೆದು ಸೈಕಲ್ ನಲ್ಲಿ ಹೇರಿಕೊಂಡು ವಿತರಣೆಯ ಕಾಯಕ ಆರಂಭಿಸುತ್ತಾರೆ. ಮೇಗಳಾಪುರ, ಮುದ್ದೇಗೌಡನ ಹುಂಡಿ, ಹೊಸಳ್ಳಿ, ಕುಪ್ಪೇಗಾಲ, ಅಂಚೆ ಹುಂಡಿ, ಸಿದ್ದರಾಮಯ್ಯನ ಹುಂಡಿ, ಕೆಂಪಯ್ಯನ ಹುಂಡಿ, ಶ್ರೀನಿವಾಸಪುರ, ರಂಗನಾಥ ಪುರ, ನಂದಿಗುಂದಪುರ, ನಂದಿಗುಂದ, ತುಂಬಸೋಗೆ, ಮರಡಿ ಹುಂಡಿ, ಹೊಸಕೋಟೆ, ತಾಯೂರು ಗ್ರಾಮಗಳಲ್ಲಿ ಪತ್ರಿಕೆ ವಿತರಿಸಿ ತಿರುಗಿ ದೇವೇಗೌಡನ ಹುಂಡಿಗೆ ಹಿಂತಿರುಗುವಾಗ ಬೆಳಿಗ್ಗೆ ೧೧ ಗಂಟೆಯಾಗುತ್ತದೆ.
ಪ್ರತಿ ದಿನವೂ ಪತ್ರಿಕೆಯ ವಿತರಣೆಗಾಗಿಯೇ ೮ ತಾಸುಗಳ ಕಾಲ ೫೦ ಕಿ.ಮೀ. ಸೈಕಲ್ ತುಳಿಯುವ ಇಂತಹವರ ಶ್ರಮ ಜೀವನಕ್ಕೆ ಬೆಲೆ ಕಟ್ಟಲಾಗದು. ಇಂಥವರೇ ಪತ್ರಿಕೆಗಳ ಆಧಾರಸ್ಥಂಭ. ಆದರೆ ಪತ್ರಿಕೆಗೆ ಸಂಬಂಧಿಸಿದ ಪ್ರಶಸ್ತಿಗಳ ವಿಚಾರಕ್ಕೆ ಬಂದರೆ ವಿತರಣೆ ವಿಭಾಗ ಗಣನೆಗೆ ಬರುವುದಿಲ್ಲ. ಹೀಗಾಗಿ ಶಿವನಾಗು ಅಂಥವರ ಶ್ರಮಕ್ಕೆ ಇಂದಿಗೂ ಮಾನ್ಯತೆ ಸಿಕ್ಕಿಲ್ಲ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…