ಆಂದೋಲನ 50

ʻಎಂದೂ ನಿನ್ನ ನೆರಳಾಗಿ ಕಾಯುವೆ’ ಎಂದು ಭಾವಿಪತ್ನಿ ಹರಿಪ್ರಿಯಾಗೆ ವಸಿಷ್ಠನ ಅಭಯ

ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ಸೈಲೆಂಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೂಡ ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸುತ್ತಿಲ್ಲ. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಈ ಜೋಡಿ ಪೋಸ್ಟ್ ಮಾಡಿದ್ದಾರೆ. “ಎಂದೂ ನಿನ್ನ ನೆರಳಾಗಿ ಕಾಯುವೆ” ಅಂತಾ ಹರಿಪ್ರಿಯಾ ಬಗೆಗಿನ ಭಾವನೆಯನ್ನ ತಮ್ಮ ಸೋಷಿಯಲ್ ಮೀಡಿಯಾದ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ

ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದೂ ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

4 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

8 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

8 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

8 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

8 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago