ಆಂದೋಲನ 50

ಗುರಿ ಮೀರಿದ ಸಾಧನೆ ಮಾಡಿದ ಹದಿನಾರು ಪಂಚಾಯಿತಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಯು ಹದಿನಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ೭ ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು, ಒಟ್ಟು ೧೮ ಜನ ಗ್ರಾ.ಪಂ ಚುನಾಯಿತ ಸದಸ್ಯರಿದ್ದಾರೆ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಗ್ರಾಮಸ್ಥರ ಸಹಕಾರದೊಂದಿಗೆ ೨೦೨೧-೨೨ ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ರ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶೇ. ೧೧೦ ರಷ್ಟು ಸಾಧನೆ ಮಾಡಲಾಗಿದೆ.ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಹಾಗು ಸ್ಥಳೀಯ ಶಾಸಕರ ನಿಧಿಯಿಂದ ನೂತನವಾದ ಗ್ರಾಮ ಪಂಚಾಯಿತಿ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಸದ್ಯದಲ್ಲೆ ಕಾಮಗಾರಿ ಪೂರ್ಣಗೊಳ್ಳಲಿದೆ. ಗ್ರಾಮದಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಕೆರೆ ಹೂಳೆತ್ತುವ ಕಾಮಗಾರಿ, ಇಂಗು ಗುಂಡಿ ನಿರ್ಮಾಣ, ಕೆರೆ ಪುನಶ್ಚೇತನ ಕಾಮಗಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ, ಗಿಡ ನಡುವ ಕಾಮಗಾರಿ, ಜಮೀನು ಸಮತಟ್ಟು ಕಾಮಗಾರಿ ಮಾಡಲಾಗಿದೆ. ಜಾನುವಾರು/ ಕುರಿ ಸಾಕಾಣಿಗೆ, ಮೀನು ಸಾಕಾಣಿಕೆ ಸಲುವಾಗಿ, ದನದ ಕೊಟ್ಟಿಗೆ, ಮೀನು ಸಾಕಾಣಿಕೆ ಹೊಂಡ, ಕುರಿ ಶೆಡ್ಡು ನಿರ್ಮಾಣ, ವೈಯಕ್ತಿಕ ಶೌಚಾಲಯ ಹಾಗು ಇನ್ನು ಹಲವಾರು ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.ಓದುಗರಿಗೆ ಸಹಾಯವಾಗಲು ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು ನವೀಕರಿಸಿ ಡಿಜಿಟಲ್ ಲೈಬ್ರರಿಯನ್ನಾಗಿ ಉನ್ನತಿಕರಿಸಿ ಲೈಬ್ರರಿಗೆ ಪ್ರತ್ಯೇಕವಾಗಿ ಹೊಸ ವೆಬ್ ಸೈಟ್ ರೂಪಿಸಲಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲಾ ಕುಟುಂಗಳಿಗೆ ಡಸ್ಟ್ ಬಿನ್‌ಗಳನ್ನು ವಿತರಿಸಿ ಕಸ ಸಂಗ್ರಹಣೆ ಮಾಡುವ ಕಾರ್ಯವನ್ನು ಪಂಚಾಯಿತಿಯಿಂದ ಹಮ್ಮಿಕೊಳ್ಳಲಾಗುವುದು.ನರೇಗಾ ಯೋಜನೆ ಅಡಿಯಲ್ಲಿ ರೈತರ ಜಮೀನಿಗೆ ಹೋಗುವ ರಸ್ತೆ ನಿರ್ಮಾಣ, ಮನೆಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣ ಹಾಗೂ ಮುಂತಾದ ಅಭಿವೃದ್ದಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.

ಗ್ರಾಮದ ಪುರಾತನ ಮಾದಪ್ಪ ದೇವಾಲಯ ವನ್ನು ಪುನರುಜ್ಜೀವಗೊಳಿಸಲಾಗಿದೆ. ಮೈಸೂರು ಹಾಗೂ ನಂಜನಗೂಡು  ತಾಲ್ಲೂಕಿನ ಹಲವು ಗ್ರಾಮಗಳಿಂದ ಜನ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ದೇಗುಲಕ್ಕೆ ಹೊಸ ರೂಪ ನೀಡಿ ರುವುದು ಅವರೆಲ್ಲರಿಗೂ ಸಂತಸ ತಂದಿದೆ.

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

3 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago