ಆಂದೋಲನ 50

ಗುರಿ ಮೀರಿದ ಸಾಧನೆ ಮಾಡಿದ ಹದಿನಾರು ಪಂಚಾಯಿತಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಯು ಹದಿನಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ೭ ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು, ಒಟ್ಟು ೧೮ ಜನ ಗ್ರಾ.ಪಂ ಚುನಾಯಿತ ಸದಸ್ಯರಿದ್ದಾರೆ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಗ್ರಾಮಸ್ಥರ ಸಹಕಾರದೊಂದಿಗೆ ೨೦೨೧-೨೨ ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ರ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶೇ. ೧೧೦ ರಷ್ಟು ಸಾಧನೆ ಮಾಡಲಾಗಿದೆ.ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಹಾಗು ಸ್ಥಳೀಯ ಶಾಸಕರ ನಿಧಿಯಿಂದ ನೂತನವಾದ ಗ್ರಾಮ ಪಂಚಾಯಿತಿ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಸದ್ಯದಲ್ಲೆ ಕಾಮಗಾರಿ ಪೂರ್ಣಗೊಳ್ಳಲಿದೆ. ಗ್ರಾಮದಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಕೆರೆ ಹೂಳೆತ್ತುವ ಕಾಮಗಾರಿ, ಇಂಗು ಗುಂಡಿ ನಿರ್ಮಾಣ, ಕೆರೆ ಪುನಶ್ಚೇತನ ಕಾಮಗಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ, ಗಿಡ ನಡುವ ಕಾಮಗಾರಿ, ಜಮೀನು ಸಮತಟ್ಟು ಕಾಮಗಾರಿ ಮಾಡಲಾಗಿದೆ. ಜಾನುವಾರು/ ಕುರಿ ಸಾಕಾಣಿಗೆ, ಮೀನು ಸಾಕಾಣಿಕೆ ಸಲುವಾಗಿ, ದನದ ಕೊಟ್ಟಿಗೆ, ಮೀನು ಸಾಕಾಣಿಕೆ ಹೊಂಡ, ಕುರಿ ಶೆಡ್ಡು ನಿರ್ಮಾಣ, ವೈಯಕ್ತಿಕ ಶೌಚಾಲಯ ಹಾಗು ಇನ್ನು ಹಲವಾರು ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.ಓದುಗರಿಗೆ ಸಹಾಯವಾಗಲು ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು ನವೀಕರಿಸಿ ಡಿಜಿಟಲ್ ಲೈಬ್ರರಿಯನ್ನಾಗಿ ಉನ್ನತಿಕರಿಸಿ ಲೈಬ್ರರಿಗೆ ಪ್ರತ್ಯೇಕವಾಗಿ ಹೊಸ ವೆಬ್ ಸೈಟ್ ರೂಪಿಸಲಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲಾ ಕುಟುಂಗಳಿಗೆ ಡಸ್ಟ್ ಬಿನ್‌ಗಳನ್ನು ವಿತರಿಸಿ ಕಸ ಸಂಗ್ರಹಣೆ ಮಾಡುವ ಕಾರ್ಯವನ್ನು ಪಂಚಾಯಿತಿಯಿಂದ ಹಮ್ಮಿಕೊಳ್ಳಲಾಗುವುದು.ನರೇಗಾ ಯೋಜನೆ ಅಡಿಯಲ್ಲಿ ರೈತರ ಜಮೀನಿಗೆ ಹೋಗುವ ರಸ್ತೆ ನಿರ್ಮಾಣ, ಮನೆಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣ ಹಾಗೂ ಮುಂತಾದ ಅಭಿವೃದ್ದಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.

ಗ್ರಾಮದ ಪುರಾತನ ಮಾದಪ್ಪ ದೇವಾಲಯ ವನ್ನು ಪುನರುಜ್ಜೀವಗೊಳಿಸಲಾಗಿದೆ. ಮೈಸೂರು ಹಾಗೂ ನಂಜನಗೂಡು  ತಾಲ್ಲೂಕಿನ ಹಲವು ಗ್ರಾಮಗಳಿಂದ ಜನ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ದೇಗುಲಕ್ಕೆ ಹೊಸ ರೂಪ ನೀಡಿ ರುವುದು ಅವರೆಲ್ಲರಿಗೂ ಸಂತಸ ತಂದಿದೆ.

andolana

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago