ಆಂದೋಲನ 50

ಗುರಿ ಮೀರಿದ ಸಾಧನೆ ಮಾಡಿದ ಹದಿನಾರು ಪಂಚಾಯಿತಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಯು ಹದಿನಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ೭ ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು, ಒಟ್ಟು ೧೮ ಜನ ಗ್ರಾ.ಪಂ ಚುನಾಯಿತ ಸದಸ್ಯರಿದ್ದಾರೆ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಗ್ರಾಮಸ್ಥರ ಸಹಕಾರದೊಂದಿಗೆ ೨೦೨೧-೨೨ ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ರ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶೇ. ೧೧೦ ರಷ್ಟು ಸಾಧನೆ ಮಾಡಲಾಗಿದೆ.ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಹಾಗು ಸ್ಥಳೀಯ ಶಾಸಕರ ನಿಧಿಯಿಂದ ನೂತನವಾದ ಗ್ರಾಮ ಪಂಚಾಯಿತಿ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಸದ್ಯದಲ್ಲೆ ಕಾಮಗಾರಿ ಪೂರ್ಣಗೊಳ್ಳಲಿದೆ. ಗ್ರಾಮದಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಕೆರೆ ಹೂಳೆತ್ತುವ ಕಾಮಗಾರಿ, ಇಂಗು ಗುಂಡಿ ನಿರ್ಮಾಣ, ಕೆರೆ ಪುನಶ್ಚೇತನ ಕಾಮಗಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ, ಗಿಡ ನಡುವ ಕಾಮಗಾರಿ, ಜಮೀನು ಸಮತಟ್ಟು ಕಾಮಗಾರಿ ಮಾಡಲಾಗಿದೆ. ಜಾನುವಾರು/ ಕುರಿ ಸಾಕಾಣಿಗೆ, ಮೀನು ಸಾಕಾಣಿಕೆ ಸಲುವಾಗಿ, ದನದ ಕೊಟ್ಟಿಗೆ, ಮೀನು ಸಾಕಾಣಿಕೆ ಹೊಂಡ, ಕುರಿ ಶೆಡ್ಡು ನಿರ್ಮಾಣ, ವೈಯಕ್ತಿಕ ಶೌಚಾಲಯ ಹಾಗು ಇನ್ನು ಹಲವಾರು ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.ಓದುಗರಿಗೆ ಸಹಾಯವಾಗಲು ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು ನವೀಕರಿಸಿ ಡಿಜಿಟಲ್ ಲೈಬ್ರರಿಯನ್ನಾಗಿ ಉನ್ನತಿಕರಿಸಿ ಲೈಬ್ರರಿಗೆ ಪ್ರತ್ಯೇಕವಾಗಿ ಹೊಸ ವೆಬ್ ಸೈಟ್ ರೂಪಿಸಲಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲಾ ಕುಟುಂಗಳಿಗೆ ಡಸ್ಟ್ ಬಿನ್‌ಗಳನ್ನು ವಿತರಿಸಿ ಕಸ ಸಂಗ್ರಹಣೆ ಮಾಡುವ ಕಾರ್ಯವನ್ನು ಪಂಚಾಯಿತಿಯಿಂದ ಹಮ್ಮಿಕೊಳ್ಳಲಾಗುವುದು.ನರೇಗಾ ಯೋಜನೆ ಅಡಿಯಲ್ಲಿ ರೈತರ ಜಮೀನಿಗೆ ಹೋಗುವ ರಸ್ತೆ ನಿರ್ಮಾಣ, ಮನೆಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣ ಹಾಗೂ ಮುಂತಾದ ಅಭಿವೃದ್ದಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.

ಗ್ರಾಮದ ಪುರಾತನ ಮಾದಪ್ಪ ದೇವಾಲಯ ವನ್ನು ಪುನರುಜ್ಜೀವಗೊಳಿಸಲಾಗಿದೆ. ಮೈಸೂರು ಹಾಗೂ ನಂಜನಗೂಡು  ತಾಲ್ಲೂಕಿನ ಹಲವು ಗ್ರಾಮಗಳಿಂದ ಜನ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ದೇಗುಲಕ್ಕೆ ಹೊಸ ರೂಪ ನೀಡಿ ರುವುದು ಅವರೆಲ್ಲರಿಗೂ ಸಂತಸ ತಂದಿದೆ.

andolana

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

4 hours ago