ಆಂದೋಲನ 50

ತಿ.ನರಸೀಪುರ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮ: ಅಶ್ವಿನ್ ಕುಮಾರ್‌

ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು.

ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಲಕಾಡು,ಸೋಮನಾಥಪುರ, ಗುಂಜಾನರಸಿಂಹಸ್ವಾಮಿ ದೇವಸ್ಥಾನ ಸೇರಿದಂತೆ ಹಲವಾರು ಪ್ರೇಕ್ಷಣೀಯ ಸ್ಥಳಗಳು ಇವೆ. ಮುಂದಿನ ದಿನಗಳಲ್ಲಿ ಪ್ರಮುಖ ಸ್ಥಳಗಳನ್ನುಪ್ರವಾಸಿ ತಾಣವನ್ನಾಗಿ ಮಾಡಿ ಪ್ರವಾಸಿಗರು ಹೆಚ್ಚು ಬರುವಂತೆ ಮಾಡಲಾಗುವುದು ಎಂದು ಹೇಳಿದರು. ಪಂಚಲಿಂಗದರ್ಶನ ಹೊರತುಪಡಿಸಿದರೆ ಉಳಿದ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರು ಬರುವುದಿಲ್ಲ. ಗುಂಜಾನರಸಿಂಹಸ್ವಾಮಿ ದೇವಸ್ಥಾನವನ್ನು ಐತಿಹಾಸಿಕ ಸ್ಥಳವನ್ನಾಗಿ ಮಾಡಲು ರೂಪುರೇಷೆ ತಯಾರಿಸಲಾಗಿದೆ. ಗಂಗರ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ತಲಕಾಡನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ ಎಂದು ಹೇಳಿದರು.

ರಾಜಶೇಖರಕೋಟಿ ಅವರು ಪ್ರಖರ ಪತ್ರಕರ್ತರು. ಆಂದೋಲನದಲ್ಲಿ ಪ್ರಶ್ನೆ ಹಾಕಿ ಸುದ್ದಿ ಮಾಡಿದನ್ನು ನೋಡಿಲ್ಲ. ಪಕ್ಷಾತೀತ, ಜಾತ್ಯತೀತ ಮತ್ತು ಸಮಾಜಮುಖಿಯಾಗಿ ಸಾಗುವುದಲ್ಲದೆ ಅದೇ ರೀತಿ ಪತ್ರಿಕೆಯನ್ನು ನಡೆಸಿಕೊಂಡು ಬರಲಾಗಿದೆ ಎಂದರು. ರಾಜಶೇಖರಕೋಟಿ ಅವರು ನನಗೆ ಜಾಸ್ತಿ ಒಡನಾಟ ಇಲ್ಲದಿದ್ದರೂ ಆಂದೋಲನ ಬಗ್ಗೆ ನನಗೆ ಗೊತ್ತಿದೆ. ಯಾವುದೇ ವಿಚಾರದಲ್ಲಿ ತಾರತಮ್ಯವನ್ನು ಮಾಡದೆ ಎಲ್ಲರಿಗೂ ಅವಕಾಶವನ್ನು ಮಾಡಿಕೊಟ್ಟಿರುವುದು ವಿಶೇಷವಾಗಿದೆ ಎಂದರು.

ಆಂದೋಲನ ಪತ್ರಿಕೆಯು ವಸ್ತುನಿಷ್ಠವಾಗಿ ಹೊರ ಬರುತ್ತಿದೆ. ಯಾವ ಸಂದರ್ಭದಲ್ಲೂ ಪತ್ರಿಕಾಧರ್ಮವನ್ನು ಬಿಟ್ಟುಕೊಟ್ಟಿಲ್ಲ. ರಾಜಶೇಖರಕೋಟಿ ಅವರ ನಂತರದಲ್ಲಿ ಪತ್ರಿಕೆಯ ಹೊಣೆ ಹೊತ್ತಿರುವ ಮಕ್ಕಳು ಅದೇ ದಾರಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಈ ಪತ್ರಿಕೆಯು ನೂರು ವರ್ಷ ಪೂರೈಸಬೇಕು. ಸಮಾಜಕ್ಕೆ ಮಾರ್ಗದರ್ಶನ ನೀಡುವಂತೆ ನಿರಂತರವಾಗಿ ಹೊರ ಬರಲಿ ಎಂದು ಹಾರೈಸಿದರು.

andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

15 hours ago