ಆಂದೋಲನ 50

ತಿ.ನರಸೀಪುರ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮ: ಅಶ್ವಿನ್ ಕುಮಾರ್‌

ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು.

ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಲಕಾಡು,ಸೋಮನಾಥಪುರ, ಗುಂಜಾನರಸಿಂಹಸ್ವಾಮಿ ದೇವಸ್ಥಾನ ಸೇರಿದಂತೆ ಹಲವಾರು ಪ್ರೇಕ್ಷಣೀಯ ಸ್ಥಳಗಳು ಇವೆ. ಮುಂದಿನ ದಿನಗಳಲ್ಲಿ ಪ್ರಮುಖ ಸ್ಥಳಗಳನ್ನುಪ್ರವಾಸಿ ತಾಣವನ್ನಾಗಿ ಮಾಡಿ ಪ್ರವಾಸಿಗರು ಹೆಚ್ಚು ಬರುವಂತೆ ಮಾಡಲಾಗುವುದು ಎಂದು ಹೇಳಿದರು. ಪಂಚಲಿಂಗದರ್ಶನ ಹೊರತುಪಡಿಸಿದರೆ ಉಳಿದ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರು ಬರುವುದಿಲ್ಲ. ಗುಂಜಾನರಸಿಂಹಸ್ವಾಮಿ ದೇವಸ್ಥಾನವನ್ನು ಐತಿಹಾಸಿಕ ಸ್ಥಳವನ್ನಾಗಿ ಮಾಡಲು ರೂಪುರೇಷೆ ತಯಾರಿಸಲಾಗಿದೆ. ಗಂಗರ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ತಲಕಾಡನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ ಎಂದು ಹೇಳಿದರು.

ರಾಜಶೇಖರಕೋಟಿ ಅವರು ಪ್ರಖರ ಪತ್ರಕರ್ತರು. ಆಂದೋಲನದಲ್ಲಿ ಪ್ರಶ್ನೆ ಹಾಕಿ ಸುದ್ದಿ ಮಾಡಿದನ್ನು ನೋಡಿಲ್ಲ. ಪಕ್ಷಾತೀತ, ಜಾತ್ಯತೀತ ಮತ್ತು ಸಮಾಜಮುಖಿಯಾಗಿ ಸಾಗುವುದಲ್ಲದೆ ಅದೇ ರೀತಿ ಪತ್ರಿಕೆಯನ್ನು ನಡೆಸಿಕೊಂಡು ಬರಲಾಗಿದೆ ಎಂದರು. ರಾಜಶೇಖರಕೋಟಿ ಅವರು ನನಗೆ ಜಾಸ್ತಿ ಒಡನಾಟ ಇಲ್ಲದಿದ್ದರೂ ಆಂದೋಲನ ಬಗ್ಗೆ ನನಗೆ ಗೊತ್ತಿದೆ. ಯಾವುದೇ ವಿಚಾರದಲ್ಲಿ ತಾರತಮ್ಯವನ್ನು ಮಾಡದೆ ಎಲ್ಲರಿಗೂ ಅವಕಾಶವನ್ನು ಮಾಡಿಕೊಟ್ಟಿರುವುದು ವಿಶೇಷವಾಗಿದೆ ಎಂದರು.

ಆಂದೋಲನ ಪತ್ರಿಕೆಯು ವಸ್ತುನಿಷ್ಠವಾಗಿ ಹೊರ ಬರುತ್ತಿದೆ. ಯಾವ ಸಂದರ್ಭದಲ್ಲೂ ಪತ್ರಿಕಾಧರ್ಮವನ್ನು ಬಿಟ್ಟುಕೊಟ್ಟಿಲ್ಲ. ರಾಜಶೇಖರಕೋಟಿ ಅವರ ನಂತರದಲ್ಲಿ ಪತ್ರಿಕೆಯ ಹೊಣೆ ಹೊತ್ತಿರುವ ಮಕ್ಕಳು ಅದೇ ದಾರಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಈ ಪತ್ರಿಕೆಯು ನೂರು ವರ್ಷ ಪೂರೈಸಬೇಕು. ಸಮಾಜಕ್ಕೆ ಮಾರ್ಗದರ್ಶನ ನೀಡುವಂತೆ ನಿರಂತರವಾಗಿ ಹೊರ ಬರಲಿ ಎಂದು ಹಾರೈಸಿದರು.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

30 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

32 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

35 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

37 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

49 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

53 mins ago