ಆಂದೋಲನ 50

ತಿ.ನರಸೀಪುರ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮ: ಅಶ್ವಿನ್ ಕುಮಾರ್‌

ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು.

ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಲಕಾಡು,ಸೋಮನಾಥಪುರ, ಗುಂಜಾನರಸಿಂಹಸ್ವಾಮಿ ದೇವಸ್ಥಾನ ಸೇರಿದಂತೆ ಹಲವಾರು ಪ್ರೇಕ್ಷಣೀಯ ಸ್ಥಳಗಳು ಇವೆ. ಮುಂದಿನ ದಿನಗಳಲ್ಲಿ ಪ್ರಮುಖ ಸ್ಥಳಗಳನ್ನುಪ್ರವಾಸಿ ತಾಣವನ್ನಾಗಿ ಮಾಡಿ ಪ್ರವಾಸಿಗರು ಹೆಚ್ಚು ಬರುವಂತೆ ಮಾಡಲಾಗುವುದು ಎಂದು ಹೇಳಿದರು. ಪಂಚಲಿಂಗದರ್ಶನ ಹೊರತುಪಡಿಸಿದರೆ ಉಳಿದ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರು ಬರುವುದಿಲ್ಲ. ಗುಂಜಾನರಸಿಂಹಸ್ವಾಮಿ ದೇವಸ್ಥಾನವನ್ನು ಐತಿಹಾಸಿಕ ಸ್ಥಳವನ್ನಾಗಿ ಮಾಡಲು ರೂಪುರೇಷೆ ತಯಾರಿಸಲಾಗಿದೆ. ಗಂಗರ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ತಲಕಾಡನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ ಎಂದು ಹೇಳಿದರು.

ರಾಜಶೇಖರಕೋಟಿ ಅವರು ಪ್ರಖರ ಪತ್ರಕರ್ತರು. ಆಂದೋಲನದಲ್ಲಿ ಪ್ರಶ್ನೆ ಹಾಕಿ ಸುದ್ದಿ ಮಾಡಿದನ್ನು ನೋಡಿಲ್ಲ. ಪಕ್ಷಾತೀತ, ಜಾತ್ಯತೀತ ಮತ್ತು ಸಮಾಜಮುಖಿಯಾಗಿ ಸಾಗುವುದಲ್ಲದೆ ಅದೇ ರೀತಿ ಪತ್ರಿಕೆಯನ್ನು ನಡೆಸಿಕೊಂಡು ಬರಲಾಗಿದೆ ಎಂದರು. ರಾಜಶೇಖರಕೋಟಿ ಅವರು ನನಗೆ ಜಾಸ್ತಿ ಒಡನಾಟ ಇಲ್ಲದಿದ್ದರೂ ಆಂದೋಲನ ಬಗ್ಗೆ ನನಗೆ ಗೊತ್ತಿದೆ. ಯಾವುದೇ ವಿಚಾರದಲ್ಲಿ ತಾರತಮ್ಯವನ್ನು ಮಾಡದೆ ಎಲ್ಲರಿಗೂ ಅವಕಾಶವನ್ನು ಮಾಡಿಕೊಟ್ಟಿರುವುದು ವಿಶೇಷವಾಗಿದೆ ಎಂದರು.

ಆಂದೋಲನ ಪತ್ರಿಕೆಯು ವಸ್ತುನಿಷ್ಠವಾಗಿ ಹೊರ ಬರುತ್ತಿದೆ. ಯಾವ ಸಂದರ್ಭದಲ್ಲೂ ಪತ್ರಿಕಾಧರ್ಮವನ್ನು ಬಿಟ್ಟುಕೊಟ್ಟಿಲ್ಲ. ರಾಜಶೇಖರಕೋಟಿ ಅವರ ನಂತರದಲ್ಲಿ ಪತ್ರಿಕೆಯ ಹೊಣೆ ಹೊತ್ತಿರುವ ಮಕ್ಕಳು ಅದೇ ದಾರಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಈ ಪತ್ರಿಕೆಯು ನೂರು ವರ್ಷ ಪೂರೈಸಬೇಕು. ಸಮಾಜಕ್ಕೆ ಮಾರ್ಗದರ್ಶನ ನೀಡುವಂತೆ ನಿರಂತರವಾಗಿ ಹೊರ ಬರಲಿ ಎಂದು ಹಾರೈಸಿದರು.

andolanait

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

7 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

9 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

11 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

12 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

15 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

15 hours ago