ಆಂದೋಲನ 50

ನನ್ನ ಪರವಾಗಿ ಪೇದೆಗೆ ತರಾಟೆ ತೆಗೆದುಕೊಂಡಿದ್ದ ಕೋಟಿ

-ಸ.ರ.ಸುದರ್ಶನ
ಕನ್ನಡಪರ ಹೋರಾಟಗಾರರು

‘ಆಂದೋಲನ’ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ನನಗೆ ನಿಕಟವಾಗಿದ್ದು ಗೋಕಾಕ್ ಚಳವಳಿಯಲ್ಲಿ. ಆ ಚಳವಳಿಯಲ್ಲಿ ಒಂದು ದಿನ ಆಗಿನ ಮುಖ್ಯಮಂತ್ರಿ ಗುಂಡೂರಾವ್ ವಿರುದ್ಧ ಪ್ರದರ್ಶನಕ್ಕೆ ತೀರ್ಮಾನಿಸಲಾಗಿತ್ತು. ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಸಭೆಯೊಳಗೆ ಸೇರಿದ ನಾವುಗಳು ಗುಂಡೂರಾವ್ ಬರುತ್ತಿದ್ದಂತೆ ಘೋಷಣೆ ಕೂಗಿ ಮುತ್ತಿಗೆ ಹಾಕಿದೆವು. ಆಗ ಪೊಲೀಸರು ನನ್ನನ್ನು ಎಳೆದುಕೊಂಡು ಹೋಗಿ ಒಂದು ವ್ಯಾನಿನೊಳಗೆ ದೂಡಿದರು. ನಾನು ಅದರೊಳಗಿನ ಆಸನದ ಮೇಲೆ ಕುಳಿತೆ. ಅಲ್ಲಿದ್ದ ಒಬ್ಬ ಪೇದೆ ನನ್ನನ್ನು ಕೆಳಗೆ ಕುಳಿತುಕೊಳ್ಳೋ ಎಂದು ಗದರಿಸಿದ. ಆಗ ನಾನೊಬ್ಬನೇ ವ್ಯಾನಿನೊಳಗೆ ಇದ್ದವನು. ಆ ವೇಳೆಗಾಗಲೇ ಘೋಷಣೆ ಕೂಗುತ್ತಿದ್ದಾಗ ಎತ್ತಿದ ಕೈ ಗೆ ಸೋಕಿದ ಲಾಠಿಯಿಂದ ಉರಿಯತೊಡಗಿತ್ತು. ಮತ್ತೆ ಹೊಡೆದಾನು ಎಂದು ಹೆದರಿ ಕೆಳಗೆ ಇಟ್ಟಿದ್ದ ಟೈರಿನ ಮೇಲೆ ಕುಳಿತೆ. ಆದರೆ ಅದು ನನ್ನ ಸ್ವಾಭಿಮಾನಕ್ಕೆ ಪೆಟ್ಟುಕೊಟ್ಟಿತ್ತು. ಆದರೆ ಅದೇ ಮೊದಲ ಸಲ ಪೊಲೀಸರ ಒಡನಾಟ. ಆ ಪೇದೆಯ ಮಾತು ಧಿಕ್ಕರಿಸಲು ಧೈರ್ಯ ಬರಲಿಲ್ಲ.

ಹತ್ತು ನಿಮಿಷಗಳ ನಂತರ ಘೋಷಣೆ ಕೂಗುತ್ತಿದ್ದ ಇನ್ನೊಬ್ಬ ಚಳವಳಿಗಾರನನ್ನು, ಪೊಲೀಸನೊಬ್ಬ ಕರೆತಂದು ವ್ಯಾನಿಗೆ ಹತ್ತಿಸಿದ. ಅವರೇ ರಾಜಶೇಖರ ಕೋಟಿ. ಅವರು ವ್ಯಾನಿನೊಳಗೆ ಬಂದಾಗ ನನಗೆ ನೂರು ಆನೆಬಲ ಬಂದಂತಾಯಿತು. ‘‘ನೋಡಿ ಕೋಟಿ, ಈ ಪೊಲೀಸ್ ನನ್ನನ್ನು ಆಸನದ ಮೇಲೆ ಕೂರಬೇಡ ಎನ್ನುತ್ತಾನೆ’’ ಎಂದೆ. ರೋಷಾವಿಷ್ಟರಾದ ಕೋಟಿ ಆತನನ್ನು ತರಾಟೆಗೆ ತೆಗೆದುಕೊಂಡರು. ಕೂತ್ಕೊಳ್ರಿ ಮೇಲೆ ಎಂದು ನನಗೆ ಹೇಳಿದರು.

ಸಾಮಾನ್ಯವಾಗಿ ಪತ್ರಕರ್ತರು ಹೋರಾಟದ ವರದಿಗಳನ್ನು ಮಾಡುತ್ತಾರೆ. ಆದರೆ ತಾವೇ ಭಾಗವಹಿಸುವುದಿಲ್ಲ. ಅದೇ ರೀತಿ ಕೆಲವು ದೊಡ್ಡ ಸಾಹಿತಿಗಳು ಲೇಖನ ಬರೆಯುವಲ್ಲಿ ಮಾತ್ರ ಸಕ್ರಿಯ ಹೋರಾಟಗಾರರಾಗಿದ್ದರು. ಆದರೆ ಕೋಟಿಯ ಅಂತರಾಳದ ಒಳಗಿದ್ದ ಹೋರಾಟಗಾರನೊಬ್ಬ ಅವರನ್ನು ಬೀದಿಗೆ ಎಳೆದು ತಂದಿದ್ದ. ಕೆಲವು ಹಿರಿಯ ಪತ್ರಕರ್ತರು ಅವರು ಸಕ್ರಿಯವಾಗಿ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದರು. ಆದರೆ ಕೋಟಿ ಅದಕ್ಕೆ ಸೊಪ್ಪು ಹಾಕಲಿಲ್ಲ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago