ಆಂದೋಲನ 50

ನನ್ನ ಪರವಾಗಿ ಪೇದೆಗೆ ತರಾಟೆ ತೆಗೆದುಕೊಂಡಿದ್ದ ಕೋಟಿ

-ಸ.ರ.ಸುದರ್ಶನ
ಕನ್ನಡಪರ ಹೋರಾಟಗಾರರು

‘ಆಂದೋಲನ’ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ನನಗೆ ನಿಕಟವಾಗಿದ್ದು ಗೋಕಾಕ್ ಚಳವಳಿಯಲ್ಲಿ. ಆ ಚಳವಳಿಯಲ್ಲಿ ಒಂದು ದಿನ ಆಗಿನ ಮುಖ್ಯಮಂತ್ರಿ ಗುಂಡೂರಾವ್ ವಿರುದ್ಧ ಪ್ರದರ್ಶನಕ್ಕೆ ತೀರ್ಮಾನಿಸಲಾಗಿತ್ತು. ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಸಭೆಯೊಳಗೆ ಸೇರಿದ ನಾವುಗಳು ಗುಂಡೂರಾವ್ ಬರುತ್ತಿದ್ದಂತೆ ಘೋಷಣೆ ಕೂಗಿ ಮುತ್ತಿಗೆ ಹಾಕಿದೆವು. ಆಗ ಪೊಲೀಸರು ನನ್ನನ್ನು ಎಳೆದುಕೊಂಡು ಹೋಗಿ ಒಂದು ವ್ಯಾನಿನೊಳಗೆ ದೂಡಿದರು. ನಾನು ಅದರೊಳಗಿನ ಆಸನದ ಮೇಲೆ ಕುಳಿತೆ. ಅಲ್ಲಿದ್ದ ಒಬ್ಬ ಪೇದೆ ನನ್ನನ್ನು ಕೆಳಗೆ ಕುಳಿತುಕೊಳ್ಳೋ ಎಂದು ಗದರಿಸಿದ. ಆಗ ನಾನೊಬ್ಬನೇ ವ್ಯಾನಿನೊಳಗೆ ಇದ್ದವನು. ಆ ವೇಳೆಗಾಗಲೇ ಘೋಷಣೆ ಕೂಗುತ್ತಿದ್ದಾಗ ಎತ್ತಿದ ಕೈ ಗೆ ಸೋಕಿದ ಲಾಠಿಯಿಂದ ಉರಿಯತೊಡಗಿತ್ತು. ಮತ್ತೆ ಹೊಡೆದಾನು ಎಂದು ಹೆದರಿ ಕೆಳಗೆ ಇಟ್ಟಿದ್ದ ಟೈರಿನ ಮೇಲೆ ಕುಳಿತೆ. ಆದರೆ ಅದು ನನ್ನ ಸ್ವಾಭಿಮಾನಕ್ಕೆ ಪೆಟ್ಟುಕೊಟ್ಟಿತ್ತು. ಆದರೆ ಅದೇ ಮೊದಲ ಸಲ ಪೊಲೀಸರ ಒಡನಾಟ. ಆ ಪೇದೆಯ ಮಾತು ಧಿಕ್ಕರಿಸಲು ಧೈರ್ಯ ಬರಲಿಲ್ಲ.

ಹತ್ತು ನಿಮಿಷಗಳ ನಂತರ ಘೋಷಣೆ ಕೂಗುತ್ತಿದ್ದ ಇನ್ನೊಬ್ಬ ಚಳವಳಿಗಾರನನ್ನು, ಪೊಲೀಸನೊಬ್ಬ ಕರೆತಂದು ವ್ಯಾನಿಗೆ ಹತ್ತಿಸಿದ. ಅವರೇ ರಾಜಶೇಖರ ಕೋಟಿ. ಅವರು ವ್ಯಾನಿನೊಳಗೆ ಬಂದಾಗ ನನಗೆ ನೂರು ಆನೆಬಲ ಬಂದಂತಾಯಿತು. ‘‘ನೋಡಿ ಕೋಟಿ, ಈ ಪೊಲೀಸ್ ನನ್ನನ್ನು ಆಸನದ ಮೇಲೆ ಕೂರಬೇಡ ಎನ್ನುತ್ತಾನೆ’’ ಎಂದೆ. ರೋಷಾವಿಷ್ಟರಾದ ಕೋಟಿ ಆತನನ್ನು ತರಾಟೆಗೆ ತೆಗೆದುಕೊಂಡರು. ಕೂತ್ಕೊಳ್ರಿ ಮೇಲೆ ಎಂದು ನನಗೆ ಹೇಳಿದರು.

ಸಾಮಾನ್ಯವಾಗಿ ಪತ್ರಕರ್ತರು ಹೋರಾಟದ ವರದಿಗಳನ್ನು ಮಾಡುತ್ತಾರೆ. ಆದರೆ ತಾವೇ ಭಾಗವಹಿಸುವುದಿಲ್ಲ. ಅದೇ ರೀತಿ ಕೆಲವು ದೊಡ್ಡ ಸಾಹಿತಿಗಳು ಲೇಖನ ಬರೆಯುವಲ್ಲಿ ಮಾತ್ರ ಸಕ್ರಿಯ ಹೋರಾಟಗಾರರಾಗಿದ್ದರು. ಆದರೆ ಕೋಟಿಯ ಅಂತರಾಳದ ಒಳಗಿದ್ದ ಹೋರಾಟಗಾರನೊಬ್ಬ ಅವರನ್ನು ಬೀದಿಗೆ ಎಳೆದು ತಂದಿದ್ದ. ಕೆಲವು ಹಿರಿಯ ಪತ್ರಕರ್ತರು ಅವರು ಸಕ್ರಿಯವಾಗಿ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದರು. ಆದರೆ ಕೋಟಿ ಅದಕ್ಕೆ ಸೊಪ್ಪು ಹಾಕಲಿಲ್ಲ.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

2 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago