ಆಂದೋಲನ 50

ಅಂತರಾಳದಲ್ಲಿ ಜಾಗ ನೀಡಿ ಶೋಷಿತರ ಏಳ್ಗೆ ಬಯಸಿದ ‘ಆಂದೋಲನ’

ಬಸವರಾಜು ಜಿ. ದೇವೀರಮ್ಮನಹಳ್ಳಿ

ನಾನು ಕಳೆದ ೨೦ ವರ್ಷಗಳಿಂದ ‘ಆಂ ದೋಲನ’ ದ ಓ ದುಗ. ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಶೋಷಿತ ಸಮುದಾಯಗಳ ಕುರಿತು ಪತ್ರಿಕೆಯು ತೆಗೆ ದುಕೊಂಡ ನಿಲುವು ಹಾಗೂ ತಾಳಿ ದ ಧೋರಣೆಯ ಬಗ್ಗೆ ನನಗೆ ಸದಾ ಹೆಮ್ಮೆಯಿದೆ. ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರನ್ನು ಐದಾರು ಬಾರಿ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಒಮ್ಮೆ ವಿದೇಶದಿಂದ ತಮ್ಮ  ಪ್ರಿಂಟಿಂಗ್‌ ಪ್ರೆಸ್‌ಗೆ ಮಷಿನ್‌ವೊಂದನ್ನು ತಂದಿದ್ದ ಸಂದರ್ಭವದು. ಪ್ರಿಂಟಿಂಗ್‌ ಮಷಿನ್‌ ಅನ್ನು ಸುರಕ್ಷಿತವಾಗಿ ತರಲು ಅದರ ಮೇಲೊದಿಕೆಯಾಗಿ ಮರದ ಶೀಟ್‌ ಗಳನ್ನು ಹಾಕಿ ಮು ದ್ರಣ ಘಟಕಕ್ಕೆ ತರಲಾಗಿತ್ತು. ಈ ಮರದ ಶೀಟ್‌ಗಳ ಬೆಲೆಯೇ ಅಂ ದು ಲಕ್ಷಾಂತರ ರೂಪಾಯಿ ಮೌಲ್ಯ ದಾಗಿತ್ತು. ಈ ಶೀಟ್‌ ಅನ್ನು ಕೊಂಡುಕೊಳ್ಳುವ ಸಲುವಾಗಿ ಅವರ ಬಳಿಗೆ ನಾನು ಹಾಗೂ ನನ್ನ ಸ್ನೇಹಿತ ಇಬ್ಬರೂ ಹೋಗಿದ್ದೆವು. ಈ ವೇಳೆ ಸಮುದಾಯದ ಹಿರಿಯ ನಾಯಕ ವಿ.ಶ್ರೀನಿವಾಸ್‌ ಪ್ರಸಾದ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಲ್ಲದೇ ನಾನು ‘ಆಂ ದೋಲನ’ ಓದುಗ ಅಂತ ಪರಿಚಯಿಸಿಕೊಂಡೆ. ಆಗ ಕೋಟಿ ಅವರು ನಾವು ಬಂದ ವಿಚಾರವನ್ನು ಕೇಳಿ ದರು. ನನ್ನ ಸ್ನೇಹಿತ ಮನೆ ಕಟ್ಟುತ್ತಿದ್ದು, ಅದಕ್ಕಾಗಿ ಮಷಿನ್‌ ಮೇಲೊದಿಕೆಯ ಮರ ದ ಶೀಟ್‌ಗಳನ್ನು ನಮಗೆ ನೀಡಿದರೆ ಅನುಕೂಲವಾಗುತ್ತ ದೆ ಎಂದು ನಾನು ವಿನಂತಿಸಿಕೊಂಡೆ.

ಮರು ಮಾತನಾಡದೆ, ಅವರು ಸುಮಾರು ಹತ್ತು ಲಕ್ಷ ರೂಪಾಯಿಗಳ ಬೆಲೆ ಬಾಳುತ್ತಿದ್ದ ಶೀಟ್‌ಗಳನ್ನು ಕೇವಲ ಎರಡು ಲಕ್ಷ
ರೂಪಾಯಿಗಳಿಗೆ ನೀಡಿ ನಮ್ಮನ್ನು ಹರಸಿದರು. ಶೋಷಿತ ಸಮು ದಾಯಗಳ ಜನರು ನಗರ ಪ್ರದೇಶಗಳಲ್ಲಿ ಮನೆ ಕಟ್ಟಿಕೊಳ್ಳುವು ದು ಕನಸಿನ ಮಾತು. ಇಂತಹ ಸಂ ದರ್ಭ ದಲ್ಲಿ ಶೋಷಿತ ವರ್ಗ ದ ವ್ಯಕ್ತಿಯೊಬಟರು ಮನೆ ಕಟ್ಟಲು ಮುಂದಾಗಿರುವು ದನ್ನು ನೋಡಿ ಮರದ ಶೀಟ್‌ಗಳನ್ನು ಹಿಂದೆ-ಮುಂದೆ ಯೋಚಿಸದೇ ನಮಗೆ ಕೊಟ್ಟರು. ಈ ಘಟನೆಯು ಶೋಷಿತ ಸಮು ದಾಯಗಳ ಕುರಿತು ರಾಜಶೇಖರ ಕೋಟಿ ಅವರಲ್ಲಿದ ತುಡಿತ ಹಾಗೂ ಮಾನವೀಯ ಅಂತಃಕರಣ ಎಂತಹದು ಎಂಬುದು ಮನವರಿಕೆಯಾಗುತ್ತದೆ. ಪತ್ರಿಕೆಯ ಮುಖಪುಟದಲ್ಲಿ ದೀನ ದಲಿತರ ಸುದಿಗೆ ಜಾಗ ಕೊಟ್ಟಿದ್ದ, ಮನಸ್ಸಿನ ಅಂತರಾಳ ದಲ್ಲಿ ಶೋಷಿತರ ಏಳ್ಗೆ ಬಯಸಿದ್ದ ಕೋಟಿಯವರ ಬದುಕಿನ ನಡೆ ಸರ್ವಕಾಲಕ್ಕೂ ಅನುಕರಣೀಯ. ಅವರ ಆಶಯದ ನೆರಳಿನಲ್ಲಿ ಪತ್ರಿಕೆ ಮುನ್ನಡೆಯಲಿ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

5 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

18 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

18 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

18 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

18 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 hours ago