ಆಂದೋಲನ 50

ನಂಜನಗೂಡಿನಲ್ಲಿದೆ ದೇಶದ ಮೊದಲ ರೈಲ್ವೆ ಸೇತುವೆ !

ಎರಡೂವರೆ ಶತಮಾನಗಳನ್ನು ದಾಟಿರುವ ನಂಜನಗೂಡಿನ ಈ ರೈಲ್ವೆ ಸೇತುವೆ ಕಪಿಲಾ ನದಿಯಲ್ಲಿ ಪ್ರತಿವರ್ಷ ಬರುವ ನೂರಾರು ಪ್ರವಾಹಗಳನ್ನು ಕಂಡಿದೆ. ಆದರೆ ಬಗ್ಗದೆ, ಜಗ್ಗದೆ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂಥ ಸೇತುವೆಯನ್ನು ದುರಸ್ತಿಗೊಳಿಸಿ ಪಾರಂಪರಿಕ ಸೇತುವಾಗಿ ಉಳಿಸಿಕೊಂಡರೆ ಮೈಸೂರಿನ ಪಾರಂಪರಿಕ ಸೊಬಗಿಗೆ ಮತ್ತೊಂದು ಸೇರ್ಪಡೆ.

ಆರ್.ಎಲ್.ಮಂಜುನಾಥ್

ಭಾರತದ ಮೊತ್ತ ಮೊದಲ ರೈಲ್ವೆ ಸೇತುವೆ ಮೈಸೂರು ಜಿಲ್ಲೆಯಲ್ಲಿದೆ ಎಂಬ ಸಂಗತಿ ನಿಮಗೆ ಗೊತ್ತೆ? ಹೌದು ೨೮೧ ವರ್ಷಗಳ ಹಳೆಯ ಸೇತುವೆ ಜಿಲ್ಲೆಯ ನಂಜನಗೂಡು ಸಮೀಪದ ಮಲ್ಲನಮೂಲೆ ಬಳಿ ಇದೆ. ಇದರ ಮತ್ತೊಂದು ವಿಶೇಷವೆಂದರೆ, ಈ ರೈಲ್ವೆ ಸೇತುವೆ ಪ್ರಪಂಚದ ಮೊದಲ ೧೦ ರೈಲ್ವೆ ಸೇತುವೆಗಳಲ್ಲಿ ಒಂದು.

ಒಟ್ಟು ೨೨೫ ಮೀ. ಉದ್ದದ ಈ ಸೇತುವೆಯನ್ನು ೧೭೩೫ರಲ್ಲಿ ಅಂದಿನ ಮೈಸೂರು ಸಂಸ್ಥಾನದಲ್ಲಿದ್ದ ಮಹಾಪ್ರಧಾನಿ, ದಳವಾಯಿ ಕಳಲೆ ದೇವರಾಜಯ್ಯ ಅವರು ನಿರ್ಮಿಸಿದ್ದಾರೆ. ಈ ಸೇತುವೆಯನ್ನು ಅಂದು ಸೈನಿಕರ, ಸಾರ್ವಜನಿಕರ ಓಡಾಟಕ್ಕೆ, ಎತ್ತಿನಗಾಡಿ, ಕುದುರೆಗಳ ಸಂಚಾರಕ್ಕೆ ನಿರ್ಮಿಸಲಾಗಿತ್ತು. ಆದರೆ, ನಂತರ ಬಂದ ಬ್ರಿಟಿಷರು ೧೮೯೯ರಲ್ಲಿ ಈ ಸುಸಜ್ಜಿತ ಸೇತುವೆಯನ್ನು ಕಂಡು ಇದರ ಮೇಲೆ ರೈಲ್ವೆ ಹಳಿಯನ್ನು ನಿರ್ಮಿಸಿದರು.

ಈ ಮಾರ್ಗದಲ್ಲಿ ೧೦೦ ವರ್ಷಗಳಿಗೂ ಹೆಚ್ಚು ಕಾಲ ರೈಲುಗಳು ಸಂಚರಿಸಿವೆ. ಆದರೆ, ೨೦೦೭ರಲ್ಲಿ ಬ್ರಾಡ್‌ಗೇಜ್ ಅಳವಡಿಕೆ ಮಾಡಿ, ಹೊಸ ಸೇತುವೆ ನಿರ್ಮಿಸಿದಾಗಿನಿಂದ ಮೀಟರ್‌ಗೇಜ್ ಆಗಿದ್ದ ಈ ರೈಲ್ವೆ ಸೇತುವೆ ನಿಷ್ಕ್ರಿಯವಾಗಿದೆ. ಇಂತಹ ಐತಿಹಾಸಿಕ ಹಿರಿಮೆಯನ್ನು ಹೊಂದಿರುವ ಈ ರೈಲ್ವೆ ಸೇತುವೆ ಈಗ ನಿರ್ಲಕ್ಷ್ಯಕ್ಕೆ ಒಳಗಾಗಿ, ಗಿಡ-ಗಂಟಿಗಳಿಂದ, ಜೊಂಡುಗಳಿಂದ ಆವೃತವಾಗಿದೆ. ದೇಶದ ರೈಲ್ವೆ ಇತಿಹಾಸದ ಕೊಂಡಿಯಾಗಿರುವ ಈ ಸೇತುವೆಯನ್ನು ಪಾರಂಪರಿಕ ಸೇತುವಾಗಿ ಅಭಿವೃದ್ಧಿಪಡಿಸಬೇಕೆನ್ನುವುದು ಸ್ಥಳೀಯರ ಆಗ್ರಹ.

ಕೆಲವು ವರ್ಷಗಳ ಹಿಂದೆ ರೈಲ್ವೆ ಇಲಾಖೆ ಈ ಐತಿಹಾಸಿಕ ರೈಲ್ವೆ ಸೇತುವೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಸಲುವಾಗಿ ಅಲ್ಲಿ ರೈಲ್ವೆ ಬೋಗಿಯೊಂದನ್ನು ಇಟ್ಟು, ಮಾಹಿತಿ ಫಲಕ ಅಳವಡಿಸಿ ಪ್ರಚಾರ ನಡೆಸಿತ್ತು. ಸೇತುವೆ ಸುತ್ತಮುತ್ತ ಸ್ವಚ್ಛಗೊಳಿಸಿ ಅಭಿವೃದ್ಧಿಗೊಳಿಸುವ ಕಾರ‌್ಯ ನಡೆದಿತ್ತು. ಈ ಕೆಲಸ ಮತ್ತೆ ನನೆಗುದಿಗೆ ಬಿದ್ದಿದೆ.

andolana

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

45 mins ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

5 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

5 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

5 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

5 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

5 hours ago