ಆಂದೋಲನ 50

ನಂಜನಗೂಡಿನಲ್ಲಿದೆ ದೇಶದ ಮೊದಲ ರೈಲ್ವೆ ಸೇತುವೆ !

ಎರಡೂವರೆ ಶತಮಾನಗಳನ್ನು ದಾಟಿರುವ ನಂಜನಗೂಡಿನ ಈ ರೈಲ್ವೆ ಸೇತುವೆ ಕಪಿಲಾ ನದಿಯಲ್ಲಿ ಪ್ರತಿವರ್ಷ ಬರುವ ನೂರಾರು ಪ್ರವಾಹಗಳನ್ನು ಕಂಡಿದೆ. ಆದರೆ ಬಗ್ಗದೆ, ಜಗ್ಗದೆ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂಥ ಸೇತುವೆಯನ್ನು ದುರಸ್ತಿಗೊಳಿಸಿ ಪಾರಂಪರಿಕ ಸೇತುವಾಗಿ ಉಳಿಸಿಕೊಂಡರೆ ಮೈಸೂರಿನ ಪಾರಂಪರಿಕ ಸೊಬಗಿಗೆ ಮತ್ತೊಂದು ಸೇರ್ಪಡೆ.

ಆರ್.ಎಲ್.ಮಂಜುನಾಥ್

ಭಾರತದ ಮೊತ್ತ ಮೊದಲ ರೈಲ್ವೆ ಸೇತುವೆ ಮೈಸೂರು ಜಿಲ್ಲೆಯಲ್ಲಿದೆ ಎಂಬ ಸಂಗತಿ ನಿಮಗೆ ಗೊತ್ತೆ? ಹೌದು ೨೮೧ ವರ್ಷಗಳ ಹಳೆಯ ಸೇತುವೆ ಜಿಲ್ಲೆಯ ನಂಜನಗೂಡು ಸಮೀಪದ ಮಲ್ಲನಮೂಲೆ ಬಳಿ ಇದೆ. ಇದರ ಮತ್ತೊಂದು ವಿಶೇಷವೆಂದರೆ, ಈ ರೈಲ್ವೆ ಸೇತುವೆ ಪ್ರಪಂಚದ ಮೊದಲ ೧೦ ರೈಲ್ವೆ ಸೇತುವೆಗಳಲ್ಲಿ ಒಂದು.

ಒಟ್ಟು ೨೨೫ ಮೀ. ಉದ್ದದ ಈ ಸೇತುವೆಯನ್ನು ೧೭೩೫ರಲ್ಲಿ ಅಂದಿನ ಮೈಸೂರು ಸಂಸ್ಥಾನದಲ್ಲಿದ್ದ ಮಹಾಪ್ರಧಾನಿ, ದಳವಾಯಿ ಕಳಲೆ ದೇವರಾಜಯ್ಯ ಅವರು ನಿರ್ಮಿಸಿದ್ದಾರೆ. ಈ ಸೇತುವೆಯನ್ನು ಅಂದು ಸೈನಿಕರ, ಸಾರ್ವಜನಿಕರ ಓಡಾಟಕ್ಕೆ, ಎತ್ತಿನಗಾಡಿ, ಕುದುರೆಗಳ ಸಂಚಾರಕ್ಕೆ ನಿರ್ಮಿಸಲಾಗಿತ್ತು. ಆದರೆ, ನಂತರ ಬಂದ ಬ್ರಿಟಿಷರು ೧೮೯೯ರಲ್ಲಿ ಈ ಸುಸಜ್ಜಿತ ಸೇತುವೆಯನ್ನು ಕಂಡು ಇದರ ಮೇಲೆ ರೈಲ್ವೆ ಹಳಿಯನ್ನು ನಿರ್ಮಿಸಿದರು.

ಈ ಮಾರ್ಗದಲ್ಲಿ ೧೦೦ ವರ್ಷಗಳಿಗೂ ಹೆಚ್ಚು ಕಾಲ ರೈಲುಗಳು ಸಂಚರಿಸಿವೆ. ಆದರೆ, ೨೦೦೭ರಲ್ಲಿ ಬ್ರಾಡ್‌ಗೇಜ್ ಅಳವಡಿಕೆ ಮಾಡಿ, ಹೊಸ ಸೇತುವೆ ನಿರ್ಮಿಸಿದಾಗಿನಿಂದ ಮೀಟರ್‌ಗೇಜ್ ಆಗಿದ್ದ ಈ ರೈಲ್ವೆ ಸೇತುವೆ ನಿಷ್ಕ್ರಿಯವಾಗಿದೆ. ಇಂತಹ ಐತಿಹಾಸಿಕ ಹಿರಿಮೆಯನ್ನು ಹೊಂದಿರುವ ಈ ರೈಲ್ವೆ ಸೇತುವೆ ಈಗ ನಿರ್ಲಕ್ಷ್ಯಕ್ಕೆ ಒಳಗಾಗಿ, ಗಿಡ-ಗಂಟಿಗಳಿಂದ, ಜೊಂಡುಗಳಿಂದ ಆವೃತವಾಗಿದೆ. ದೇಶದ ರೈಲ್ವೆ ಇತಿಹಾಸದ ಕೊಂಡಿಯಾಗಿರುವ ಈ ಸೇತುವೆಯನ್ನು ಪಾರಂಪರಿಕ ಸೇತುವಾಗಿ ಅಭಿವೃದ್ಧಿಪಡಿಸಬೇಕೆನ್ನುವುದು ಸ್ಥಳೀಯರ ಆಗ್ರಹ.

ಕೆಲವು ವರ್ಷಗಳ ಹಿಂದೆ ರೈಲ್ವೆ ಇಲಾಖೆ ಈ ಐತಿಹಾಸಿಕ ರೈಲ್ವೆ ಸೇತುವೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಸಲುವಾಗಿ ಅಲ್ಲಿ ರೈಲ್ವೆ ಬೋಗಿಯೊಂದನ್ನು ಇಟ್ಟು, ಮಾಹಿತಿ ಫಲಕ ಅಳವಡಿಸಿ ಪ್ರಚಾರ ನಡೆಸಿತ್ತು. ಸೇತುವೆ ಸುತ್ತಮುತ್ತ ಸ್ವಚ್ಛಗೊಳಿಸಿ ಅಭಿವೃದ್ಧಿಗೊಳಿಸುವ ಕಾರ‌್ಯ ನಡೆದಿತ್ತು. ಈ ಕೆಲಸ ಮತ್ತೆ ನನೆಗುದಿಗೆ ಬಿದ್ದಿದೆ.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago