ಆಂದೋಲನ 50

ಆಂದೋಲನ ಸುದ್ದಿಗಳೇ ಸತ್ವಯುತ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಟಿ ಅವರನ್ನು ಬಣ್ಣಿಸಿದರು.

ಆಂದೋಲನದಿನಪತ್ರಿಕೆಯ ೫೦ ವರ್ಷದ ಸಾರ್ಥಕ ಪಯಣ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಹಿನಿ ಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳುಆಂದೋಲನಪತ್ರಿಕೆಯಲ್ಲೂ ಪ್ರಕಟವಾಗುತ್ತಿವೆ. ಆದರೆ ಸುದ್ದಿಯ ವಿಶ್ಲೇಷಣೆ ವಿಭಿನ್ನ ಮತ್ತು ಸತ್ವಯುತವಾಗಿರುತ್ತದೆ. ಸಕಾರಾತ್ಮಕ ಚಿಂತನೆಯಿಂದ ಪತ್ರಿಕೆಯನ್ನು ಕೋಟಿ ಅವರು ಕಟ್ಟಿದ್ದಾರೆ. ಇದೇ ಪರಂಪರೆಯನ್ನು ಅವರ ಮಕ್ಕಳು ಮುಂದುವರಿಸಿಕೊಂಡು ಹೋಗಲಿ ಎಂದರು. ರೈತರ ಸ್ಥಿತಿ: ವಸ್ತುನಿಷ್ಠವಾಗಿ ನೋಡಿ: ರೈತರ ಮಕ್ಕಳು ಖಾಯಂ ಆಗಿ ರೈತರಾಗೇ ಉಳಿಯಲು ಆಗುವುದಿಲ್ಲ. ಭೂಮಿ ಅಷ್ಟೇ ಇದೆ. ಜನರು ಹೆಚ್ಚಾದಂತೆ ಸಣ್ಣಸಣ್ಣ ತುಂಡುಗಳಾಗಿವೆ. ೨೦ ಎಕರೆ ಭೂಮಿ ಈಗ ಎಂಟತ್ತು ಭಾಗಗಳಾಗಿ ಹೋಗಿದೆ. ಭಾಗದಲ್ಲಿ ರೈತರು ಏನು ಮಾಡಲು ಸಾಧ್ಯ. ಅವರು ಬೇರೆಬೇರೆ ವೃತ್ತಿಗೆ ಹೋಗಬೇಕು. ಇದರಿಂದ ಅವರು ಆರ್ಥಿಕವಾಗಿ ಬೆಳವಣಿಗೆಯಾಗುತ್ತಾರೆ. ಆದರೆ ವಿಚಾರದಲ್ಲಿ ಪೂರ್ವಗ್ರಹವಾಗಿ ಟೀಕಿಸುವುದನ್ನು ಬಿಟ್ಟು ಸಕಾರಾತ್ಮಕ ಭಾವನೆಯಿಂದ ವಸ್ತುನಿಷ್ಠವಾಗಿ ನೋಡಬೇಕು. ಹೊಸತನ್ನು ಟೀಕೆ ಮಾಡುವುದಲ್ಲ. ಮೊದಲು ಖಾಸಗೀಕರಣವನ್ನು ಟೀಕಿಸಲಾಯಿತು. ಬಳಿಕ ಅದನ್ನು ಒಪ್ಪಿಕೊಂಡರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆಗಳನ್ನು ಕುರಿತು ಸಮರ್ಥನೆ ನೀಡಿದರು.

ಅಗ್ನಿಪಥ್ ಸಮರ್ಥನೆ: ರಾಷ್ಟ್ರದ ಸೈನ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸುವ ಯೋಜನೆಯಾದಅಗ್ನಿಪಥ್ಅನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ೧೭ರಿಂದ ೨೪ ವಯಸ್ಸಿನ ಯುವಕರಿಗೆ ಉತ್ತಮ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ನೀಡುವುದಲ್ಲದೇ ಮುಂದಿನ ದಿನದಲ್ಲಿ ಅವರಿಗೆ ಬೇರೆ ಕಡೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇಂತಹ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು. ಜಗತ್ತಿನ ಅನೇಕ ದೇಶಗಳಲ್ಲಿ ವ್ಯವಸ್ಥೆ ಇದೆ. ಯೋಜನೆಯ ಅವಕಾಶವನ್ನು ಬಳಕೆ ಮಾಡಿಕೊಂಡು ರಾಜ್ಯರಾಷ್ಟ್ರ ಮುಂದೆ ಹೋಗಬೇಕು ಎಂದರು.

ಬದಲಾವಣೆಯು ನಿರಂತರವಾಗಿ ಇರುತ್ತದೆ. ಇದನ್ನು ಬಳಕೆ ಮಾಡಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಬೇಕು. ಉತ್ಕೃಷ್ಟತಾ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago