ಆಂದೋಲನ 50

ಆಂದೋಲನ ಸುದ್ದಿಗಳೇ ಸತ್ವಯುತ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಟಿ ಅವರನ್ನು ಬಣ್ಣಿಸಿದರು.

ಆಂದೋಲನದಿನಪತ್ರಿಕೆಯ ೫೦ ವರ್ಷದ ಸಾರ್ಥಕ ಪಯಣ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಹಿನಿ ಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳುಆಂದೋಲನಪತ್ರಿಕೆಯಲ್ಲೂ ಪ್ರಕಟವಾಗುತ್ತಿವೆ. ಆದರೆ ಸುದ್ದಿಯ ವಿಶ್ಲೇಷಣೆ ವಿಭಿನ್ನ ಮತ್ತು ಸತ್ವಯುತವಾಗಿರುತ್ತದೆ. ಸಕಾರಾತ್ಮಕ ಚಿಂತನೆಯಿಂದ ಪತ್ರಿಕೆಯನ್ನು ಕೋಟಿ ಅವರು ಕಟ್ಟಿದ್ದಾರೆ. ಇದೇ ಪರಂಪರೆಯನ್ನು ಅವರ ಮಕ್ಕಳು ಮುಂದುವರಿಸಿಕೊಂಡು ಹೋಗಲಿ ಎಂದರು. ರೈತರ ಸ್ಥಿತಿ: ವಸ್ತುನಿಷ್ಠವಾಗಿ ನೋಡಿ: ರೈತರ ಮಕ್ಕಳು ಖಾಯಂ ಆಗಿ ರೈತರಾಗೇ ಉಳಿಯಲು ಆಗುವುದಿಲ್ಲ. ಭೂಮಿ ಅಷ್ಟೇ ಇದೆ. ಜನರು ಹೆಚ್ಚಾದಂತೆ ಸಣ್ಣಸಣ್ಣ ತುಂಡುಗಳಾಗಿವೆ. ೨೦ ಎಕರೆ ಭೂಮಿ ಈಗ ಎಂಟತ್ತು ಭಾಗಗಳಾಗಿ ಹೋಗಿದೆ. ಭಾಗದಲ್ಲಿ ರೈತರು ಏನು ಮಾಡಲು ಸಾಧ್ಯ. ಅವರು ಬೇರೆಬೇರೆ ವೃತ್ತಿಗೆ ಹೋಗಬೇಕು. ಇದರಿಂದ ಅವರು ಆರ್ಥಿಕವಾಗಿ ಬೆಳವಣಿಗೆಯಾಗುತ್ತಾರೆ. ಆದರೆ ವಿಚಾರದಲ್ಲಿ ಪೂರ್ವಗ್ರಹವಾಗಿ ಟೀಕಿಸುವುದನ್ನು ಬಿಟ್ಟು ಸಕಾರಾತ್ಮಕ ಭಾವನೆಯಿಂದ ವಸ್ತುನಿಷ್ಠವಾಗಿ ನೋಡಬೇಕು. ಹೊಸತನ್ನು ಟೀಕೆ ಮಾಡುವುದಲ್ಲ. ಮೊದಲು ಖಾಸಗೀಕರಣವನ್ನು ಟೀಕಿಸಲಾಯಿತು. ಬಳಿಕ ಅದನ್ನು ಒಪ್ಪಿಕೊಂಡರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆಗಳನ್ನು ಕುರಿತು ಸಮರ್ಥನೆ ನೀಡಿದರು.

ಅಗ್ನಿಪಥ್ ಸಮರ್ಥನೆ: ರಾಷ್ಟ್ರದ ಸೈನ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸುವ ಯೋಜನೆಯಾದಅಗ್ನಿಪಥ್ಅನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ೧೭ರಿಂದ ೨೪ ವಯಸ್ಸಿನ ಯುವಕರಿಗೆ ಉತ್ತಮ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ನೀಡುವುದಲ್ಲದೇ ಮುಂದಿನ ದಿನದಲ್ಲಿ ಅವರಿಗೆ ಬೇರೆ ಕಡೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇಂತಹ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು. ಜಗತ್ತಿನ ಅನೇಕ ದೇಶಗಳಲ್ಲಿ ವ್ಯವಸ್ಥೆ ಇದೆ. ಯೋಜನೆಯ ಅವಕಾಶವನ್ನು ಬಳಕೆ ಮಾಡಿಕೊಂಡು ರಾಜ್ಯರಾಷ್ಟ್ರ ಮುಂದೆ ಹೋಗಬೇಕು ಎಂದರು.

ಬದಲಾವಣೆಯು ನಿರಂತರವಾಗಿ ಇರುತ್ತದೆ. ಇದನ್ನು ಬಳಕೆ ಮಾಡಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಬೇಕು. ಉತ್ಕೃಷ್ಟತಾ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

11 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago