ಆಂದೋಲನ 50

ಆಂದೋಲನ ಸುದ್ದಿಗಳೇ ಸತ್ವಯುತ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಟಿ ಅವರನ್ನು ಬಣ್ಣಿಸಿದರು.

ಆಂದೋಲನದಿನಪತ್ರಿಕೆಯ ೫೦ ವರ್ಷದ ಸಾರ್ಥಕ ಪಯಣ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಹಿನಿ ಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳುಆಂದೋಲನಪತ್ರಿಕೆಯಲ್ಲೂ ಪ್ರಕಟವಾಗುತ್ತಿವೆ. ಆದರೆ ಸುದ್ದಿಯ ವಿಶ್ಲೇಷಣೆ ವಿಭಿನ್ನ ಮತ್ತು ಸತ್ವಯುತವಾಗಿರುತ್ತದೆ. ಸಕಾರಾತ್ಮಕ ಚಿಂತನೆಯಿಂದ ಪತ್ರಿಕೆಯನ್ನು ಕೋಟಿ ಅವರು ಕಟ್ಟಿದ್ದಾರೆ. ಇದೇ ಪರಂಪರೆಯನ್ನು ಅವರ ಮಕ್ಕಳು ಮುಂದುವರಿಸಿಕೊಂಡು ಹೋಗಲಿ ಎಂದರು. ರೈತರ ಸ್ಥಿತಿ: ವಸ್ತುನಿಷ್ಠವಾಗಿ ನೋಡಿ: ರೈತರ ಮಕ್ಕಳು ಖಾಯಂ ಆಗಿ ರೈತರಾಗೇ ಉಳಿಯಲು ಆಗುವುದಿಲ್ಲ. ಭೂಮಿ ಅಷ್ಟೇ ಇದೆ. ಜನರು ಹೆಚ್ಚಾದಂತೆ ಸಣ್ಣಸಣ್ಣ ತುಂಡುಗಳಾಗಿವೆ. ೨೦ ಎಕರೆ ಭೂಮಿ ಈಗ ಎಂಟತ್ತು ಭಾಗಗಳಾಗಿ ಹೋಗಿದೆ. ಭಾಗದಲ್ಲಿ ರೈತರು ಏನು ಮಾಡಲು ಸಾಧ್ಯ. ಅವರು ಬೇರೆಬೇರೆ ವೃತ್ತಿಗೆ ಹೋಗಬೇಕು. ಇದರಿಂದ ಅವರು ಆರ್ಥಿಕವಾಗಿ ಬೆಳವಣಿಗೆಯಾಗುತ್ತಾರೆ. ಆದರೆ ವಿಚಾರದಲ್ಲಿ ಪೂರ್ವಗ್ರಹವಾಗಿ ಟೀಕಿಸುವುದನ್ನು ಬಿಟ್ಟು ಸಕಾರಾತ್ಮಕ ಭಾವನೆಯಿಂದ ವಸ್ತುನಿಷ್ಠವಾಗಿ ನೋಡಬೇಕು. ಹೊಸತನ್ನು ಟೀಕೆ ಮಾಡುವುದಲ್ಲ. ಮೊದಲು ಖಾಸಗೀಕರಣವನ್ನು ಟೀಕಿಸಲಾಯಿತು. ಬಳಿಕ ಅದನ್ನು ಒಪ್ಪಿಕೊಂಡರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆಗಳನ್ನು ಕುರಿತು ಸಮರ್ಥನೆ ನೀಡಿದರು.

ಅಗ್ನಿಪಥ್ ಸಮರ್ಥನೆ: ರಾಷ್ಟ್ರದ ಸೈನ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸುವ ಯೋಜನೆಯಾದಅಗ್ನಿಪಥ್ಅನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ೧೭ರಿಂದ ೨೪ ವಯಸ್ಸಿನ ಯುವಕರಿಗೆ ಉತ್ತಮ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ನೀಡುವುದಲ್ಲದೇ ಮುಂದಿನ ದಿನದಲ್ಲಿ ಅವರಿಗೆ ಬೇರೆ ಕಡೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇಂತಹ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು. ಜಗತ್ತಿನ ಅನೇಕ ದೇಶಗಳಲ್ಲಿ ವ್ಯವಸ್ಥೆ ಇದೆ. ಯೋಜನೆಯ ಅವಕಾಶವನ್ನು ಬಳಕೆ ಮಾಡಿಕೊಂಡು ರಾಜ್ಯರಾಷ್ಟ್ರ ಮುಂದೆ ಹೋಗಬೇಕು ಎಂದರು.

ಬದಲಾವಣೆಯು ನಿರಂತರವಾಗಿ ಇರುತ್ತದೆ. ಇದನ್ನು ಬಳಕೆ ಮಾಡಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಬೇಕು. ಉತ್ಕೃಷ್ಟತಾ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

13 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago