ಆಂದೋಲನ 50

ಆಂದೋಲನ ಸುದ್ದಿಗಳೇ ಸತ್ವಯುತ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಟಿ ಅವರನ್ನು ಬಣ್ಣಿಸಿದರು.

ಆಂದೋಲನದಿನಪತ್ರಿಕೆಯ ೫೦ ವರ್ಷದ ಸಾರ್ಥಕ ಪಯಣ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಹಿನಿ ಪತ್ರಿಕೆಗಳಲ್ಲಿ ಬರುವಂತಹ ಸುದ್ದಿಗಳುಆಂದೋಲನಪತ್ರಿಕೆಯಲ್ಲೂ ಪ್ರಕಟವಾಗುತ್ತಿವೆ. ಆದರೆ ಸುದ್ದಿಯ ವಿಶ್ಲೇಷಣೆ ವಿಭಿನ್ನ ಮತ್ತು ಸತ್ವಯುತವಾಗಿರುತ್ತದೆ. ಸಕಾರಾತ್ಮಕ ಚಿಂತನೆಯಿಂದ ಪತ್ರಿಕೆಯನ್ನು ಕೋಟಿ ಅವರು ಕಟ್ಟಿದ್ದಾರೆ. ಇದೇ ಪರಂಪರೆಯನ್ನು ಅವರ ಮಕ್ಕಳು ಮುಂದುವರಿಸಿಕೊಂಡು ಹೋಗಲಿ ಎಂದರು. ರೈತರ ಸ್ಥಿತಿ: ವಸ್ತುನಿಷ್ಠವಾಗಿ ನೋಡಿ: ರೈತರ ಮಕ್ಕಳು ಖಾಯಂ ಆಗಿ ರೈತರಾಗೇ ಉಳಿಯಲು ಆಗುವುದಿಲ್ಲ. ಭೂಮಿ ಅಷ್ಟೇ ಇದೆ. ಜನರು ಹೆಚ್ಚಾದಂತೆ ಸಣ್ಣಸಣ್ಣ ತುಂಡುಗಳಾಗಿವೆ. ೨೦ ಎಕರೆ ಭೂಮಿ ಈಗ ಎಂಟತ್ತು ಭಾಗಗಳಾಗಿ ಹೋಗಿದೆ. ಭಾಗದಲ್ಲಿ ರೈತರು ಏನು ಮಾಡಲು ಸಾಧ್ಯ. ಅವರು ಬೇರೆಬೇರೆ ವೃತ್ತಿಗೆ ಹೋಗಬೇಕು. ಇದರಿಂದ ಅವರು ಆರ್ಥಿಕವಾಗಿ ಬೆಳವಣಿಗೆಯಾಗುತ್ತಾರೆ. ಆದರೆ ವಿಚಾರದಲ್ಲಿ ಪೂರ್ವಗ್ರಹವಾಗಿ ಟೀಕಿಸುವುದನ್ನು ಬಿಟ್ಟು ಸಕಾರಾತ್ಮಕ ಭಾವನೆಯಿಂದ ವಸ್ತುನಿಷ್ಠವಾಗಿ ನೋಡಬೇಕು. ಹೊಸತನ್ನು ಟೀಕೆ ಮಾಡುವುದಲ್ಲ. ಮೊದಲು ಖಾಸಗೀಕರಣವನ್ನು ಟೀಕಿಸಲಾಯಿತು. ಬಳಿಕ ಅದನ್ನು ಒಪ್ಪಿಕೊಂಡರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆಗಳನ್ನು ಕುರಿತು ಸಮರ್ಥನೆ ನೀಡಿದರು.

ಅಗ್ನಿಪಥ್ ಸಮರ್ಥನೆ: ರಾಷ್ಟ್ರದ ಸೈನ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸುವ ಯೋಜನೆಯಾದಅಗ್ನಿಪಥ್ಅನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ೧೭ರಿಂದ ೨೪ ವಯಸ್ಸಿನ ಯುವಕರಿಗೆ ಉತ್ತಮ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ನೀಡುವುದಲ್ಲದೇ ಮುಂದಿನ ದಿನದಲ್ಲಿ ಅವರಿಗೆ ಬೇರೆ ಕಡೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇಂತಹ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು. ಜಗತ್ತಿನ ಅನೇಕ ದೇಶಗಳಲ್ಲಿ ವ್ಯವಸ್ಥೆ ಇದೆ. ಯೋಜನೆಯ ಅವಕಾಶವನ್ನು ಬಳಕೆ ಮಾಡಿಕೊಂಡು ರಾಜ್ಯರಾಷ್ಟ್ರ ಮುಂದೆ ಹೋಗಬೇಕು ಎಂದರು.

ಬದಲಾವಣೆಯು ನಿರಂತರವಾಗಿ ಇರುತ್ತದೆ. ಇದನ್ನು ಬಳಕೆ ಮಾಡಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಬೇಕು. ಉತ್ಕೃಷ್ಟತಾ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago