ಆಂದೋಲನ 50

ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳು

ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದರೆ, ಮುಳ್ಳೂರರು ದೇಶ-ವಿದೇಶಗಳಲ್ಲಿ ತಮ್ಮ ಸಾಹಿತ್ಯ ಕೃಷಿ ಮೂಲಕ ಹೆಸರು ಮಾಡಿದ್ದಾರೆ.

 

‘ಕನಸಿನಲ್ಲಿ ಕರ್ಣ’ ಎಂಬ ಮುಳ್ಳೂರರ ಕವಿತೆ ಗುಜರಾತ್ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಕವನ ಸಂಕಲನದಲ್ಲಿ ಗುಜರಾತಿ ಭಾಷೆಗೆ ತರ್ಜುಮೆಗೊಂಡಿದೆ. ಅಮೆರಿಕಾದ ಜಾನ್ ಆಲಿವರ್ ಪೆರಿ ಎಂಬುವವರು ಸಂಪಾದಿಸಿರುವ ಕವನ ಸಂಕಲನದಲ್ಲಿ ಮುಳ್ಳೂರರ ‘ದಿಲ್ಲಿ ದುರುಗವ್ವನ ಕರಾಳ ಶಾಸನ’ ಕವಿತೆ ಇಂಗ್ಲೀಷ್‌ಗೆ ತರ್ಜುಮೆಗೊಂಡು ಪ್ರಕಟಗೊಂಡಿದೆ.

ಈ ಕವನವನ್ನು ‘ಚಂಪಾ’ ಇಂಗ್ಲಿಷ್‌ಗೆ ತರ್ಜುಮೆ ಮಾಡಿದ್ದಾರೆ. ನಂಜನಗೂಡು ತಾಲ್ಲೂಕಿನ ಈ ಎರಡು ಪ್ರತಿಭೆಗಳು ದೇಶ-ವಿದೇಶಗಳಲ್ಲಿ ಹೆಸರು ಮಾಡುವಲ್ಲಿ ದಲಿತ ಚಳವಳಿ ಹಾಗೂ ಇದರಲ್ಲಿ ‘ಆಂದೋಲನ’ ದಿನಪತ್ರಿಕೆಯ ಪಾತ್ರವೂ ಇದೆ ಎಂಬುದನ್ನು ಉಲ್ಲೇಖಿಸಲು ಖುಷಿಯಾಗುತ್ತದೆ.

andolana

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago