ಒಡೆಯರ ಪಾಳ್ಯದ ಬಳಿಯ ಪ್ರವಾಸಿಗರ ನೆಚ್ಚಿನ ತಾಣ
ಹನೂರು: ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದ ಬಳಿ ನಿರ್ಮಿಸಿರುವ ನಿರಾಶ್ರಿತ ಟಿಬೆಟಿಯನ್ನರ ಶಿಬಿರ ಈಗ ಪ್ರವಾಸಿಗರ ನೆಚ್ಚಿನ ತಾಣ.
ದಿನ ಕಳೆದಂತೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ರಜಾ ಹಾಗೂ ವಾರಾಂತ್ಯದ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲೇ ಈ ಶಿಬಿರ ಇದೆ. ಟಿಬೆಟ್ನಿಂದ 1950ರ ದಶಕದಲ್ಲಿ ವಲಸೆ ಬಂದ ನಿರಾಶ್ರಿತರಿಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು, ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಬಳಿ ನೆಲೆಯನ್ನು ಕಲ್ಪಿಸಲಾಯಿತು. ಅಂದಿನಿಂದಲೂ ಟಿಬೆಟಿಯನ್ನರು ಸ್ಥಳೀಯರೊಂದಿಗೆ ಸೌಹಾರ್ದಯುತ ಜೀವನ ನಡೆಸುತ್ತಿದ್ದಾರೆ.
ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳ ಪಡುವ ಒಡೆಯರಪಾಳ್ಯ ಗ್ರಾಮಕ್ಕೆ ಅಂಟಿಕೊಂಡಂತೆ ಇರುವ ಶಿಬಿರದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ವಿಲೇಜ್ಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿ ವಿಲೇಜ್ ಒಬ್ಬ ಮುಖಂಡರಿದ್ದು, ಇವರೆಲ್ಲರೂ ನಿರಾಶ್ರಿತರ ಶಿಬಿರದ ಆಡಳಿತಾಧಿಕಾರಿಯ ನಿಯಂತ್ರಣದಲ್ಲಿರುತ್ತಾರೆ.
ಈ ಶಿಬಿರ ಇನ್ನೊಂದು ಕಡೆ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಇದು ಪ್ರಕೃತಿ ಪ್ರಿಯರು ಭೇಟಿ ನೀಡಲು ಅತ್ಯಂತ ಸೂಕ್ತ ಸ್ಥಳವಾಗಿದೆ. ಶಿಬಿರದಲ್ಲಿ ಏಳು ಬೌದ್ಧ ಮಂದಿರಗಳಿವೆ. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಇಲ್ಲಿ ಬೌದ್ಧ ಭಿಕ್ಕುಗಳಿದ್ದಾರೆ. ಭಿಕ್ಕುಗಳಿಗೆ ವಸತಿ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ಕಟ್ಟಡಗಳ ವಿನ್ಯಾಸ ಆಕರ್ಷಕವಾಗಿವೆ. ಮಂದಿರದ ಒಳಗಡೆ ಇರುವ ಬುದ್ಧನ ವಿಗ್ರಹಗಳು ಸೂಜಿಗಲ್ಲಿನಂತೆ ಸೆಳೆಯುತ್ತವೆ.
ಇಲ್ಲಿ ಸಿಬಿಎಸ್ಇ ಪಠ್ಯಕ್ರಮದ ಶಾಲೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಓದುತ್ತಿದ್ದಾರೆ. ಜತೆಗೆ ಇಲ್ಲಿ ವರ್ಷಕ್ಕೊಮ್ಮೆ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನೂ ಆಯೋಜಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಗುಣಮಟ್ಟದ ರಸ್ತೆ, ವಿದ್ಯುತ್ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಕೃಷಿ ಕಾಲದಲ್ಲಿ ಕೃಷಿ ಚಟು ವಟಿಕೆಯಲ್ಲಿ ತೊಡಗುವ ಇವರು ಉಳಿದ ವೇಳೆ ಹೊರ ರಾಜ್ಯಗಳಿಗೆ ವ್ಯಾಪಾರಕ್ಕೆ ಹೋಗುತ್ತಾರೆ. ಇಲ್ಲಿ ನೆಲೆಸಿರುವ ಜನರ ಬಹುತೇಕ ಮಕ್ಕಳು ಹೊರದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ.
ಕೃಷಿ, ಸಣ್ಣಪುಟ್ಟ ವ್ಯಾಪಾರ, ಧಾರ್ಮಿಕ ಪ್ರವಾಸೋದ್ಯಮವನ್ನು ನಂಬಿ ಬದುಕುತ್ತಿದ್ದೇವೆ. ನಮ್ಮ ಸುತ್ತಲಿನ ಗ್ರಾಮಗಳ ಕನ್ನಡಿಗರ ಜೊತೆ ಸೌಹಾರ್ದಯುತವಾಗಿ ಇದ್ದುಕೊಂಡು ಉತ್ತಮ ಜೀವನ ನಡೆಸುತ್ತಿದ್ದೇವೆ.
-ಗೆಲೆಕ್ ಜುಂಗನೆ, ಆಡಳಿತಾಧಿಕಾರಿ, ಒಡೆಯರಪಾಳ್ಯ
ಬುದ್ದನ ಬೃಹತ್ ಪ್ರತಿಮೆ
ಶಿಬಿರದಲ್ಲಿ ಈಗಾಗಲೇ ಬೌದ್ಧ ಮಂದಿರಗಳು, ಸ್ತೂಪಗಳಿವೆ. ಇಲ್ಲಿ 6 ಕೋಟಿ ರೂ. ವೆಚ್ಚದಲ್ಲಿ 113 ಅಡಿ ಎತ್ತರದ ಧ್ಯಾನಸ್ಥ ಬುದ್ಧನ ಮೂರ್ತಿಯನ್ನು ಸ್ಥಾಪಿಸಲಾಗಿದೆ. ಟಿಬೆಟಿಯನ್ನರೇ ಮ್ಯಾನ್ಮಾರ್ ನಿಂದ ಪ್ರತಿಮೆಯನ್ನು ಇಲ್ಲಿಗೆ ತಂದು ಪ್ರತಿಷ್ಠಾಪಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…