ಆಂದೋಲನ 52

ಟಿಬೆಟ್ ಅನ್ನು ಕಣ್ಣ ಮುಂದೆ ತರುವ ಟಿಬೆಟಿಯನ್ನರ ಶಿಬಿರ

ಒಡೆಯರ ಪಾಳ್ಯದ ಬಳಿಯ ಪ್ರವಾಸಿಗರ ನೆಚ್ಚಿನ ತಾಣ

ಹನೂರು: ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದ ಬಳಿ ನಿರ್ಮಿಸಿರುವ ನಿರಾಶ್ರಿತ ಟಿಬೆಟಿಯನ್ನರ ಶಿಬಿರ ಈಗ ಪ್ರವಾಸಿಗರ ನೆಚ್ಚಿನ ತಾಣ.

ದಿನ ಕಳೆದಂತೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ರಜಾ ಹಾಗೂ ವಾರಾಂತ್ಯದ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲೇ ಈ ಶಿಬಿರ ಇದೆ. ಟಿಬೆಟ್‌ನಿಂದ 1950ರ ದಶಕದಲ್ಲಿ ವಲಸೆ ಬಂದ ನಿರಾಶ್ರಿತರಿಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು, ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಬಳಿ ನೆಲೆಯನ್ನು ಕಲ್ಪಿಸಲಾಯಿತು. ಅಂದಿನಿಂದಲೂ ಟಿಬೆಟಿಯನ್ನರು ಸ್ಥಳೀಯರೊಂದಿಗೆ ಸೌಹಾರ್ದಯುತ ಜೀವನ ನಡೆಸುತ್ತಿದ್ದಾರೆ.

ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳ ಪಡುವ ಒಡೆಯರಪಾಳ್ಯ ಗ್ರಾಮಕ್ಕೆ ಅಂಟಿಕೊಂಡಂತೆ ಇರುವ ಶಿಬಿರದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ವಿಲೇಜ್‌ಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿ ವಿಲೇಜ್‌ ಒಬ್ಬ ಮುಖಂಡರಿದ್ದು, ಇವರೆಲ್ಲರೂ ನಿರಾಶ್ರಿತರ ಶಿಬಿರದ ಆಡಳಿತಾಧಿಕಾರಿಯ ನಿಯಂತ್ರಣದಲ್ಲಿರುತ್ತಾರೆ.

ಈ ಶಿಬಿರ ಇನ್ನೊಂದು ಕಡೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಇದು ಪ್ರಕೃತಿ ಪ್ರಿಯರು ಭೇಟಿ ನೀಡಲು ಅತ್ಯಂತ ಸೂಕ್ತ ಸ್ಥಳವಾಗಿದೆ. ಶಿಬಿರದಲ್ಲಿ ಏಳು ಬೌದ್ಧ ಮಂದಿರಗಳಿವೆ. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಇಲ್ಲಿ ಬೌದ್ಧ ಭಿಕ್ಕುಗಳಿದ್ದಾರೆ. ಭಿಕ್ಕುಗಳಿಗೆ ವಸತಿ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ಕಟ್ಟಡಗಳ ವಿನ್ಯಾಸ ಆಕರ್ಷಕವಾಗಿವೆ. ಮಂದಿರದ ಒಳಗಡೆ ಇರುವ ಬುದ್ಧನ ವಿಗ್ರಹಗಳು ಸೂಜಿಗಲ್ಲಿನಂತೆ ಸೆಳೆಯುತ್ತವೆ.

ಇಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ಶಾಲೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಓದುತ್ತಿದ್ದಾರೆ. ಜತೆಗೆ ಇಲ್ಲಿ ವರ್ಷಕ್ಕೊಮ್ಮೆ ರಾಜ್ಯ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯನ್ನೂ ಆಯೋಜಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಗುಣಮಟ್ಟದ ರಸ್ತೆ, ವಿದ್ಯುತ್‌ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಕೃಷಿ ಕಾಲದಲ್ಲಿ ಕೃಷಿ ಚಟು ವಟಿಕೆಯಲ್ಲಿ ತೊಡಗುವ ಇವರು ಉಳಿದ ವೇಳೆ ಹೊರ ರಾಜ್ಯಗಳಿಗೆ ವ್ಯಾಪಾರಕ್ಕೆ ಹೋಗುತ್ತಾರೆ. ಇಲ್ಲಿ ನೆಲೆಸಿರುವ ಜನರ ಬಹುತೇಕ ಮಕ್ಕಳು ಹೊರದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ.

  • ನೂರಾರು ಎಕರೆ ಪ್ರದೇಶದಲ್ಲಿ
    ಹರಡಿಕೊಂಡಿರುವ ಶಿಬಿರ
  • ಶಿಬಿರದಲ್ಲಿದೆ ಸಿಬಿಎಸ್‌ಇ ಪಠ್ಯ ಕ್ರಮದ ಶಾಲೆ
  • ಪ್ರಕೃತಿ ಆರಾಧಕರ ಭೇಟಿಗೆ ಸೂಕ್ತ ತಾಣ
  • 7 ಬೌದ್ಧ ಮಂದಿರಗಳನ್ನು ಒಳಗೊಂಡಿರುವ ಶಿಬಿರ
  • ಒಡೆಯರ ಪಾಳ್ಯದಲ್ಲಿರುವ ಟಿಬೆಟಿಯನ್ ಕ್ಯಾಂಪ್‌ನ ಜನಸಂಖ್ಯೆ -3,100,
  • ಕುಟುಂಬಗಳು-704

 

ಕೃಷಿ, ಸಣ್ಣಪುಟ್ಟ ವ್ಯಾಪಾರ, ಧಾರ್ಮಿಕ ಪ್ರವಾಸೋದ್ಯಮವನ್ನು ನಂಬಿ ಬದುಕುತ್ತಿದ್ದೇವೆ. ನಮ್ಮ ಸುತ್ತಲಿನ ಗ್ರಾಮಗಳ ಕನ್ನಡಿಗರ ಜೊತೆ ಸೌಹಾರ್ದಯುತವಾಗಿ ಇದ್ದುಕೊಂಡು ಉತ್ತಮ ಜೀವನ ನಡೆಸುತ್ತಿದ್ದೇವೆ.
-ಗೆಲೆಕ್ ಜುಂಗನೆ, ಆಡಳಿತಾಧಿಕಾರಿ, ಒಡೆಯರಪಾಳ್ಯ

ಬುದ್ದನ ಬೃಹತ್‌ ಪ್ರತಿಮೆ
ಶಿಬಿರದಲ್ಲಿ ಈಗಾಗಲೇ ಬೌದ್ಧ ಮಂದಿರಗಳು, ಸ್ತೂಪಗಳಿವೆ. ಇಲ್ಲಿ 6 ಕೋಟಿ ರೂ. ವೆಚ್ಚದಲ್ಲಿ 113 ಅಡಿ ಎತ್ತರದ ಧ್ಯಾನಸ್ಥ ಬುದ್ಧನ ಮೂರ್ತಿಯನ್ನು ಸ್ಥಾಪಿಸಲಾಗಿದೆ. ಟಿಬೆಟಿಯನ್ನರೇ ಮ್ಯಾನ್ಮಾರ್ ನಿಂದ ಪ್ರತಿಮೆಯನ್ನು ಇಲ್ಲಿಗೆ ತಂದು ಪ್ರತಿಷ್ಠಾಪಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

2 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

5 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

8 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

9 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

12 hours ago