ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ ದಿನಪತ್ರಿಕೆಯ ೫೨ನೇ ವರ್ಷದ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ‘ಆಂದೋಲನ’ವೆಂದರೆ ಅದೊಂದು ಕ್ರಾಂತಿ. ‘ಆಂದೋಲನ’ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರಿಂದ ಈಗಿನ ಸಂಪಾದಕರಾದ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿಯವರು ಪತ್ರಿಕೆ ಮುಖಾಂತರ ಸಮಾಜದ ಭ್ರಷ್ಟಾಚಾರ, ಜಾತೀಯತೆ, ಅಸ್ಪೃಶ್ಯತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ರೈತರ, ಯೋಧರ, ಬಡವರ, ದಲಿತರ, ಗಿರಿಜನರ, ಶೋಷಿತ ವರ್ಗದವರ ಪರವಾಗಿ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ಪತ್ರಿಕೆಯ ತಾಲ್ಲೂಕು ವರದಿಗಾರ ಮಂಜು ಕೋಟೆ, ಅನಿಲ್ ಅಂತರಸಂತೆ, ದಾಸೇಗೌಡ, ಹಂಪಾಪುರ ನಾಗೇಶ, ಮುಖಂಡರಾದ ಸತೀಶ್ ಗೌಡ, ನಾಗನಹಳ್ಳಿ ಪ್ರದೀಪ, ರಾಜು ವಿಶ್ವಕರ್ಮ, ಗಣೇಶಚಾರ್ ಪರಶಿವಮೂರ್ತಿ, ಶಿವಮಲ್ಲಪ್ಪ, ತಹಸಿಲ್ದಾರ್ ಶ್ರೀನಿವಾಸ್, ರುಕಿಯ ಬೇಗಂ, ಸಣ್ಣರಾಮಪ್ಪ, ಮಹೇಶ್, ತಾಪಂ ಇಒ ಧರಣೇಶ್, ಸುಷ್ಮಾ, ಸಿಪಿಐ ಶಬ್ಬೀರ್ ಹುಸೇನ್, ಈರೇಗೌಡ, ಚಿಕ್ಕವೀರ ನಾಯಕ, ನರಸಿಂಹಮೂರ್ತಿ, ಐಡಿಯಾ ವೆಂಕಟೇಶ್, ಮಿಲ್ ನಾಗರಾಜು, ಶಂಭುಲಿಂಗ ನಾಯಕ, ಇತರರು ಹಾಜರಿದ್ದರು.
ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು…
ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ…
ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ…
ತಮಿಳುನಾಡು: ತಮಿಳು ಸ್ಟಾರ್ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ…
ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ…
ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ…