ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ ದಿನಪತ್ರಿಕೆಯ ೫೨ನೇ ವರ್ಷದ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ‘ಆಂದೋಲನ’ವೆಂದರೆ ಅದೊಂದು ಕ್ರಾಂತಿ. ‘ಆಂದೋಲನ’ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರಿಂದ ಈಗಿನ ಸಂಪಾದಕರಾದ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿಯವರು ಪತ್ರಿಕೆ ಮುಖಾಂತರ ಸಮಾಜದ ಭ್ರಷ್ಟಾಚಾರ, ಜಾತೀಯತೆ, ಅಸ್ಪೃಶ್ಯತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ರೈತರ, ಯೋಧರ, ಬಡವರ, ದಲಿತರ, ಗಿರಿಜನರ, ಶೋಷಿತ ವರ್ಗದವರ ಪರವಾಗಿ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ಪತ್ರಿಕೆಯ ತಾಲ್ಲೂಕು ವರದಿಗಾರ ಮಂಜು ಕೋಟೆ, ಅನಿಲ್ ಅಂತರಸಂತೆ, ದಾಸೇಗೌಡ, ಹಂಪಾಪುರ ನಾಗೇಶ, ಮುಖಂಡರಾದ ಸತೀಶ್ ಗೌಡ, ನಾಗನಹಳ್ಳಿ ಪ್ರದೀಪ, ರಾಜು ವಿಶ್ವಕರ್ಮ, ಗಣೇಶಚಾರ್ ಪರಶಿವಮೂರ್ತಿ, ಶಿವಮಲ್ಲಪ್ಪ, ತಹಸಿಲ್ದಾರ್ ಶ್ರೀನಿವಾಸ್, ರುಕಿಯ ಬೇಗಂ, ಸಣ್ಣರಾಮಪ್ಪ, ಮಹೇಶ್, ತಾಪಂ ಇಒ ಧರಣೇಶ್, ಸುಷ್ಮಾ, ಸಿಪಿಐ ಶಬ್ಬೀರ್ ಹುಸೇನ್, ಈರೇಗೌಡ, ಚಿಕ್ಕವೀರ ನಾಯಕ, ನರಸಿಂಹಮೂರ್ತಿ, ಐಡಿಯಾ ವೆಂಕಟೇಶ್, ಮಿಲ್ ನಾಗರಾಜು, ಶಂಭುಲಿಂಗ ನಾಯಕ, ಇತರರು ಹಾಜರಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…