ಆಂದೋಲನ 52

ರಾಜ್ಯ ಪತ್ರಿಕೆಗೆ ಸರಿಸಮನಾದ ʼಆಂದೋಲನʼ

ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ ದಿನಪತ್ರಿಕೆಯ ೫೨ನೇ ವರ್ಷದ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ‘ಆಂದೋಲನ’ವೆಂದರೆ ಅದೊಂದು ಕ್ರಾಂತಿ. ‘ಆಂದೋಲನ’ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರಿಂದ ಈಗಿನ ಸಂಪಾದಕರಾದ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿಯವರು ಪತ್ರಿಕೆ ಮುಖಾಂತರ ಸಮಾಜದ ಭ್ರಷ್ಟಾಚಾರ, ಜಾತೀಯತೆ, ಅಸ್ಪೃಶ್ಯತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ರೈತರ, ಯೋಧರ, ಬಡವರ, ದಲಿತರ, ಗಿರಿಜನರ, ಶೋಷಿತ ವರ್ಗದವರ ಪರವಾಗಿ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು. ಪತ್ರಿಕೆಯ ತಾಲ್ಲೂಕು ವರದಿಗಾರ ಮಂಜು ಕೋಟೆ, ಅನಿಲ್ ಅಂತರಸಂತೆ, ದಾಸೇಗೌಡ, ಹಂಪಾಪುರ ನಾಗೇಶ, ಮುಖಂಡರಾದ ಸತೀಶ್ ಗೌಡ, ನಾಗನಹಳ್ಳಿ ಪ್ರದೀಪ, ರಾಜು ವಿಶ್ವಕರ್ಮ, ಗಣೇಶಚಾರ್ ಪರಶಿವಮೂರ್ತಿ, ಶಿವಮಲ್ಲಪ್ಪ, ತಹಸಿಲ್ದಾರ್ ಶ್ರೀನಿವಾಸ್, ರುಕಿಯ ಬೇಗಂ, ಸಣ್ಣರಾಮಪ್ಪ, ಮಹೇಶ್, ತಾಪಂ ಇಒ ಧರಣೇಶ್, ಸುಷ್ಮಾ, ಸಿಪಿಐ ಶಬ್ಬೀರ್ ಹುಸೇನ್, ಈರೇಗೌಡ, ಚಿಕ್ಕವೀರ ನಾಯಕ, ನರಸಿಂಹಮೂರ್ತಿ, ಐಡಿಯಾ ವೆಂಕಟೇಶ್, ಮಿಲ್ ನಾಗರಾಜು, ಶಂಭುಲಿಂಗ ನಾಯಕ, ಇತರರು ಹಾಜರಿದ್ದರು.

andolana

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

19 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

44 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

1 hour ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

1 hour ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

10 hours ago