ಆಂದೋಲನ 52

ತ್ರಿವೇಣಿ ಸಂಗಮ ಖ್ಯಾತಿಯ ತಿ.ನರಸೀಪುರದ ವಾಸ್ತವ, ವಿಶ್ವ ಪರಂಪರೆ ಪಟ್ಟಿಯಲ್ಲಿ ಹೆಸರು; ಅಭಿವೃದ್ಧಿ ಎಂದರೆ ಏದುಸಿರು

  • ಎಂ.ನಾರಾಯಣ

ವಿಶ್ವ ಪರಂಪರೆ ತಾಣವನ್ನು ಹೊಂದಿರುವ ತಿನರಸೀಪುರ ತಾಲ್ಲೂಕು ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ, ಈ ತಾಲ್ಲೂಕು ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದೆ. ಇದಲ್ಲದೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಎಚ್‌.ಸಿ.ಮಹದೇವಪ್ಪನವರನ್ನು ನಾಲ್ಕು ಬಾರಿ ಸಚಿವರನ್ನಾಗಿ ಮಾಡಿ, ಎರಡು ಬಾರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನಾಗಿ ಮಾಡಿದ ಈ ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ವಿಷಾದನೀಯ.

ಈ ತಾಲ್ಲೂಕಿನ ಜನತೆ ಉದ್ಯೋಗಕ್ಕಾಗಿ ಮೈಸೂರು ನಗರ ಹಾಗೂ ಇತರೆ ತಾಲ್ಲೂಕುಗಳಿಗೆ ಅಲೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜನಪ್ರತಿನಿಧಿಗಳು ಸಮಸ್ಯೆಗಳನ್ನು ಅರಿತು, ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಗಮನಹರಿಸದೇ ಇರುವುದು ವಿಪರ್ಯಾಸ. ಪ್ರಮುಖವಾಗಿ ಪಟ್ಟಣದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವುದು ಅತ್ಯಗತ್ಯ.

ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿರುವ ಸೋಮನಾಥಪುರದ ಚನ್ನಕೇಶವ ದೇವಾಲಯ, ತಲಕಾಡು ದೇವಾಲಯಗಳು, ಮೂಗೂರು ತಿಬ್ಬಾದೇವಿ ದೇವಾಲಯ ಪ್ರಸಿದ್ಧ ಸ್ಥಳಗಳಾಗಿವೆ. ತಿ.ನರಸೀಪುರದತ್ರಿವೇಣಿ ಸಂಗಮ ಪ್ರವಾಸೋದ್ಯಮ ಸ್ಥಳವಾಗಿದೆ. ಮೈಸೂರು, ನಂಜನಗೂಡು, ಕೊಳ್ಳೇಗಾಲ, ಚಾಮರಾಜನಗರ ಹಾಗೂ ಮಳವಳ್ಳಿ ತಾಲ್ಲೂಕುಗಳು ತಿನರಸೀಪುರ ದಿಂದ 30 ಕಿ.ಮೀ. ವ್ಯಾಪ್ತಿಯಲ್ಲಿವೆ.

ಪ್ರವಾಸಿ ತಾಣಗಳ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ತಿ.ನರಸೀಪುರದಲ್ಲಿ ಸುಸಜ್ಜಿತ ವಸತಿಗೃಹಗಳು, ಐಷಾರಾಮಿ ಹೋಟೆಲ್‌ಗಳ ವ್ಯವಸ್ಥೆ ಇಲ್ಲ. ಹಾಗಾಗಿ ಪ್ರವಾಸಿಗರು ಈ 30 ಕಿ.ಮೀ. ವ್ಯಾಪ್ತಿಯೊಳಗೆ ಇರುವ ಸ್ಥಳಗಳಿಗೆ ತೆರಳುತ್ತಾರೆ. ಇದರಿಂದ ತಾಲ್ಲೂಕಿನ ಪ್ರವಾ ಸೋದ್ಯಮ ಅಭಿವೃದ್ಧಿಗೆ ಹೊಡೆತ ಬಿದ್ದಿದೆ. ತಾಲ್ಲೂಕಿನಲ್ಲಿ ಕೈಗಾರಿಕೆ ಗಳನ್ನು ಸ್ಥಾಪಿಸಿ, ನಿರು ದ್ಯೋಗಿಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿದ್ದರೆ, ಇಲ್ಲಿನ ಜನ ನೆಮ್ಮದಿಯ ಜೀವನ ಮಾಡಬಹುದಿತ್ತು.

ಯಾವುದೇ ತಾಲ್ಲೂಕು ಅಭಿವೃದ್ಧಿ ಹೊಂದ ಬೇಕಾದರೆ ಕೈಗಾರಿಕೆಗಳ ಪಾತ್ರವೂ ಮುಖ್ಯವಾಗಿರುತ್ತದೆ. ವಾಣಿಜ್ಯ ನಗರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತದೆ. ಆದರೆ ಈ ಕ್ಷೇತ್ರದಿಂದ ಆಯ್ಕೆಯಾಗುವ ಜನ ಪ್ರತಿನಿಧಿಗಳು ಅಭಿವೃದ್ಧಿ ಕುರಿತು ಚಿಂತನೆ ಮಾಡಿದ್ದರೆ, ಇಂಥ ಸ್ಥಿತಿ ಇರುತ್ತಿರಲಿಲ್ಲ.

ಈಗಲಾದರೂ ಬಂಡವಾಳಶಾಹಿಗಳಿಗೆ ಸ್ಥಳಾವಕಾಶ ಕಲ್ಪಿಸಿಕೊಟ್ಟು ಕಾರ್ಖಾನೆಗಳು, ಹೈಟೆಕ್ ವಸತಿ ಗೃಹ ನಿರ್ಮಾಣ, ಐಷಾರಾಮಿ ಹೋಟೆಲ್‌ಗಳನ್ನು ಸ್ಥಾಪನೆ ಮಾಡಬೇಕು. ಅದರಿಂದ ವ್ಯಾಪಾರ ವಹಿವಾಟು ಹೆಚ್ಚುವ ಮೂಲಕ ತಿ.ನರಸೀಪುರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ.

 

• ಪ್ರವಾಸಿಗರು ತಂಗಲೂ ಸೂಕ್ತ ವಸತಿಗೃಹ, ಹೋಟೆಲ್‌ಗಳ ಕೊರತೆ
ಕೈಗಾರಿಕೆಗಳು ಸ್ಥಾಪನೆಯಾದರೆ ಸ್ಥಳೀಯರಿಗೆ ಉದ್ಯೋಗ ಸಿಗುವ ನಿರೀಕ್ಷೆ
• ಪ್ರವಾಸಿ ತಾಣಗಳಲ್ಲೂ ಮೂಲಸೌಕರ್ಯಗಳ ಕೊರತೆ
• ರಾಜ್ಯ ಸರ್ಕಾರ ಇಚ್ಚಾಶಕ್ತಿ ತೋರಿದರೆ ತಿ.ನರಸೀಪುರದ ಪ್ರಗತಿ ಸಾಧ್ಯ

ತಿ.ನರಸೀಪುರ ತಾಲ್ಲೂಕಿನ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ತಾಲ್ಲೂಕನ್ನು ವ್ಯವಸಾಯಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಉದ್ಯೋಗಕ್ಕಾಗಿ ಸಾಕಷ್ಟು ಜನರು ಮೈಸೂರು ಹಾಗೂ ನಂಜನಗೂಡು ಕಾರ್ಖಾನೆಗಳಿಗೆ ತೆರಳುತ್ತಿದ್ದಾರೆ. ತಾಲ್ಲೂಕಿನಲ್ಲಿ ಕಾರ್ಖಾನೆಗಳು ಸ್ಥಾಪನೆಯಾದರೆ ಆರ್ಥಿಕ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಅನುಕೂಲವಾಗಲಿದೆ.-ಶ್ರೀಕಂಠ ಪ್ರಸಾದ್, ಉದ್ಯಮಿ, ಶ್ರೀಕಂಠೇಶ್ವರ ಅಕ್ಕಿ ಗಿರಣಿ ಮಾಲೀಕರು.

ರಸ್ತೆಗಳು ಅಭಿವೃದ್ಧಿಯಾಗಬೇಕು, ಬಡಾವಣೆಗಳಿಗೆ ಮೂಲಭೂತ ಸೌಲಭ್ಯ, ವ್ಯಾಪಾರ ವಹಿವಾಟುಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ನಿರುದ್ಯೋಗ ಸಮಸ್ಯೆಗಳಿಗೆ ಕಾರ್ಖಾನೆಗಳನ್ನು ಸ್ಥಾಪಿಸುವುದೇ ಪರಿಹಾರವಾಗಿದೆ.
-ಕೆ.ಎನ್.ಪ್ರಭುಸ್ವಾಮಿ, ಕಾರ್ಯದರ್ಶಿ, ನಾಗರಿಕ ಸೇವಾ ಸಮಿತಿ,

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

11 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

12 hours ago