ಆಂದೋಲನ 52

ತ್ರಿವೇಣಿ ಸಂಗಮ ಖ್ಯಾತಿಯ ತಿ.ನರಸೀಪುರದ ವಾಸ್ತವ, ವಿಶ್ವ ಪರಂಪರೆ ಪಟ್ಟಿಯಲ್ಲಿ ಹೆಸರು; ಅಭಿವೃದ್ಧಿ ಎಂದರೆ ಏದುಸಿರು

  • ಎಂ.ನಾರಾಯಣ

ವಿಶ್ವ ಪರಂಪರೆ ತಾಣವನ್ನು ಹೊಂದಿರುವ ತಿನರಸೀಪುರ ತಾಲ್ಲೂಕು ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ, ಈ ತಾಲ್ಲೂಕು ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದೆ. ಇದಲ್ಲದೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಎಚ್‌.ಸಿ.ಮಹದೇವಪ್ಪನವರನ್ನು ನಾಲ್ಕು ಬಾರಿ ಸಚಿವರನ್ನಾಗಿ ಮಾಡಿ, ಎರಡು ಬಾರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನಾಗಿ ಮಾಡಿದ ಈ ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ವಿಷಾದನೀಯ.

ಈ ತಾಲ್ಲೂಕಿನ ಜನತೆ ಉದ್ಯೋಗಕ್ಕಾಗಿ ಮೈಸೂರು ನಗರ ಹಾಗೂ ಇತರೆ ತಾಲ್ಲೂಕುಗಳಿಗೆ ಅಲೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜನಪ್ರತಿನಿಧಿಗಳು ಸಮಸ್ಯೆಗಳನ್ನು ಅರಿತು, ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಗಮನಹರಿಸದೇ ಇರುವುದು ವಿಪರ್ಯಾಸ. ಪ್ರಮುಖವಾಗಿ ಪಟ್ಟಣದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವುದು ಅತ್ಯಗತ್ಯ.

ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿರುವ ಸೋಮನಾಥಪುರದ ಚನ್ನಕೇಶವ ದೇವಾಲಯ, ತಲಕಾಡು ದೇವಾಲಯಗಳು, ಮೂಗೂರು ತಿಬ್ಬಾದೇವಿ ದೇವಾಲಯ ಪ್ರಸಿದ್ಧ ಸ್ಥಳಗಳಾಗಿವೆ. ತಿ.ನರಸೀಪುರದತ್ರಿವೇಣಿ ಸಂಗಮ ಪ್ರವಾಸೋದ್ಯಮ ಸ್ಥಳವಾಗಿದೆ. ಮೈಸೂರು, ನಂಜನಗೂಡು, ಕೊಳ್ಳೇಗಾಲ, ಚಾಮರಾಜನಗರ ಹಾಗೂ ಮಳವಳ್ಳಿ ತಾಲ್ಲೂಕುಗಳು ತಿನರಸೀಪುರ ದಿಂದ 30 ಕಿ.ಮೀ. ವ್ಯಾಪ್ತಿಯಲ್ಲಿವೆ.

ಪ್ರವಾಸಿ ತಾಣಗಳ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ತಿ.ನರಸೀಪುರದಲ್ಲಿ ಸುಸಜ್ಜಿತ ವಸತಿಗೃಹಗಳು, ಐಷಾರಾಮಿ ಹೋಟೆಲ್‌ಗಳ ವ್ಯವಸ್ಥೆ ಇಲ್ಲ. ಹಾಗಾಗಿ ಪ್ರವಾಸಿಗರು ಈ 30 ಕಿ.ಮೀ. ವ್ಯಾಪ್ತಿಯೊಳಗೆ ಇರುವ ಸ್ಥಳಗಳಿಗೆ ತೆರಳುತ್ತಾರೆ. ಇದರಿಂದ ತಾಲ್ಲೂಕಿನ ಪ್ರವಾ ಸೋದ್ಯಮ ಅಭಿವೃದ್ಧಿಗೆ ಹೊಡೆತ ಬಿದ್ದಿದೆ. ತಾಲ್ಲೂಕಿನಲ್ಲಿ ಕೈಗಾರಿಕೆ ಗಳನ್ನು ಸ್ಥಾಪಿಸಿ, ನಿರು ದ್ಯೋಗಿಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿದ್ದರೆ, ಇಲ್ಲಿನ ಜನ ನೆಮ್ಮದಿಯ ಜೀವನ ಮಾಡಬಹುದಿತ್ತು.

ಯಾವುದೇ ತಾಲ್ಲೂಕು ಅಭಿವೃದ್ಧಿ ಹೊಂದ ಬೇಕಾದರೆ ಕೈಗಾರಿಕೆಗಳ ಪಾತ್ರವೂ ಮುಖ್ಯವಾಗಿರುತ್ತದೆ. ವಾಣಿಜ್ಯ ನಗರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತದೆ. ಆದರೆ ಈ ಕ್ಷೇತ್ರದಿಂದ ಆಯ್ಕೆಯಾಗುವ ಜನ ಪ್ರತಿನಿಧಿಗಳು ಅಭಿವೃದ್ಧಿ ಕುರಿತು ಚಿಂತನೆ ಮಾಡಿದ್ದರೆ, ಇಂಥ ಸ್ಥಿತಿ ಇರುತ್ತಿರಲಿಲ್ಲ.

ಈಗಲಾದರೂ ಬಂಡವಾಳಶಾಹಿಗಳಿಗೆ ಸ್ಥಳಾವಕಾಶ ಕಲ್ಪಿಸಿಕೊಟ್ಟು ಕಾರ್ಖಾನೆಗಳು, ಹೈಟೆಕ್ ವಸತಿ ಗೃಹ ನಿರ್ಮಾಣ, ಐಷಾರಾಮಿ ಹೋಟೆಲ್‌ಗಳನ್ನು ಸ್ಥಾಪನೆ ಮಾಡಬೇಕು. ಅದರಿಂದ ವ್ಯಾಪಾರ ವಹಿವಾಟು ಹೆಚ್ಚುವ ಮೂಲಕ ತಿ.ನರಸೀಪುರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ.

 

• ಪ್ರವಾಸಿಗರು ತಂಗಲೂ ಸೂಕ್ತ ವಸತಿಗೃಹ, ಹೋಟೆಲ್‌ಗಳ ಕೊರತೆ
ಕೈಗಾರಿಕೆಗಳು ಸ್ಥಾಪನೆಯಾದರೆ ಸ್ಥಳೀಯರಿಗೆ ಉದ್ಯೋಗ ಸಿಗುವ ನಿರೀಕ್ಷೆ
• ಪ್ರವಾಸಿ ತಾಣಗಳಲ್ಲೂ ಮೂಲಸೌಕರ್ಯಗಳ ಕೊರತೆ
• ರಾಜ್ಯ ಸರ್ಕಾರ ಇಚ್ಚಾಶಕ್ತಿ ತೋರಿದರೆ ತಿ.ನರಸೀಪುರದ ಪ್ರಗತಿ ಸಾಧ್ಯ

ತಿ.ನರಸೀಪುರ ತಾಲ್ಲೂಕಿನ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ತಾಲ್ಲೂಕನ್ನು ವ್ಯವಸಾಯಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಉದ್ಯೋಗಕ್ಕಾಗಿ ಸಾಕಷ್ಟು ಜನರು ಮೈಸೂರು ಹಾಗೂ ನಂಜನಗೂಡು ಕಾರ್ಖಾನೆಗಳಿಗೆ ತೆರಳುತ್ತಿದ್ದಾರೆ. ತಾಲ್ಲೂಕಿನಲ್ಲಿ ಕಾರ್ಖಾನೆಗಳು ಸ್ಥಾಪನೆಯಾದರೆ ಆರ್ಥಿಕ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಅನುಕೂಲವಾಗಲಿದೆ.-ಶ್ರೀಕಂಠ ಪ್ರಸಾದ್, ಉದ್ಯಮಿ, ಶ್ರೀಕಂಠೇಶ್ವರ ಅಕ್ಕಿ ಗಿರಣಿ ಮಾಲೀಕರು.

ರಸ್ತೆಗಳು ಅಭಿವೃದ್ಧಿಯಾಗಬೇಕು, ಬಡಾವಣೆಗಳಿಗೆ ಮೂಲಭೂತ ಸೌಲಭ್ಯ, ವ್ಯಾಪಾರ ವಹಿವಾಟುಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ನಿರುದ್ಯೋಗ ಸಮಸ್ಯೆಗಳಿಗೆ ಕಾರ್ಖಾನೆಗಳನ್ನು ಸ್ಥಾಪಿಸುವುದೇ ಪರಿಹಾರವಾಗಿದೆ.
-ಕೆ.ಎನ್.ಪ್ರಭುಸ್ವಾಮಿ, ಕಾರ್ಯದರ್ಶಿ, ನಾಗರಿಕ ಸೇವಾ ಸಮಿತಿ,

ಆಂದೋಲನ ಡೆಸ್ಕ್

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago