ಆಂದೋಲನ 52

ಕೆಆರ್‌ಎಸ್ ಅಣೆಕಟ್ಟೆಯ ಕೌತುಕ…

  • ಹೇಮಂತ್‌ಕುಮಾರ್

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾಗಿ ಇಂದಿಗೆ ಸುಮಾರು 94 ವರ್ಷ ಗಳಾಗಿವೆ.

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಜಲಾಶಯವನ್ನು 1911ರ ನವೆಂಬರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಾರ್ಯಗತಗೊಳಿಸಿದರು. 2.5 ಕೋಟಿ ರೂ. ವೆಚ್ಚದಲ್ಲಿ 1931-32ರಲ್ಲಿ ಪೂರ್ಣಗೊಂಡ ಅಣೆಕಟ್ಟೆಯ ಒಟ್ಟು ಉದ್ದ 2.62 ಕಿ.ಮೀ. ಇದ್ದು, ಕಟ್ಟೆಯನ್ನು ಸುರ್ಕಿ ಗಾರೆ ಮತ್ತು ಸುಣ್ಣದ ಕಲ್ಲುಗಳ ಮಿಶ್ರಣದ ಜೊತೆಗೆ ಮೊಟ್ಟೆಯನ್ನೂ ಸೇರಿಸಿ ರೂಪಿಸಲಾದ ಗಾರೆಯನ್ನು ಬಳಸಿ ನಿರ್ಮಿಸಲಾಗಿದೆ. ಅಣೆಕಟ್ಟೆ 2,621 ಮೀಟರ್ (8,600 ಅಡಿ) ಉದ್ದ ಮತ್ತು 40 ಮೀಟರ್ (130 ಅಡಿ) ಎತ್ತರವಿದೆ.

ಅಣೆಕಟ್ಟಿನಲ್ಲಿ ಗೇಟ್‌ಗಳು, ಸಿಲ್, ಲಿಂಟಲ್ ಮತ್ತು ಸೈಡ್ ಗೂವ್‌ಗಳು ಮತ್ತು ಪ್ಲೇಟ್‌ಗಳು, ಸಮತೋಲನ ತೂಕ, ಫೋಟ್‌ಗಳನ್ನು ಒಳಗೊಂಡಿರುವ 8 ಗೇಟ್‌ಗಳ ಆರು ಸೆಟ್ ಗಳಲ್ಲಿ ಅಂತಹ 48 ಸ್ವಯಂಚಾಲಿತ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಸರಪಳಿಗಳು ಮತ್ತು ಪುಲ್ಲಿಗಳು ಮತ್ತು ಒಳಹರಿವು ಮತ್ತು ಔಬ್ಲೆಟ್ ಪೈಪ್ ಗಳು ಇಲ್ಲಿನ ವಿಶೇಷ. ನವೀನ ತಾಂತ್ರಿಕತೆಯನ್ನು ಉಪಯೋಗಿಸಿಕೊಂಡು ನೀರಿನೊಳಗೇ ಗೇಟ್‌ಗಳನ್ನು ರಿಪೇರಿ ಮಾಡುವ, ಅಂಡರ್‌ವಾಟರ್ ಸಾರ್ಡರಿಂಗ್ ಮಾಡುವ ಸ್ಕೂಬಾ ಡೈವರ್‌ಗಳು ಇಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಆಟೋಮ್ಯಾಟಿಕ್ ಗೇಟ್ ಎಂಬ ತಂತ್ರಜ್ಞಾನ ಒಂದು ಸರಳ ವಿಧಾನದಲ್ಲಿ ರೂಪಿತಗೊಂಡಿದ್ದು, ಅಣೆಕಟ್ಟೆಯಲ್ಲಿ ನೀರು ಭರ್ತಿಯಾಗುತ್ತಿದ್ದಂತೆ ಕಟ್ಟೆಯ ಹೊರಭಾಗದಲ್ಲಿರುವ ಬಾವಿಯಂತಹ ಕಟ್ಟಡಕ್ಕೆ ನೀರು ಹರಿಯುತ್ತದೆ. ಬಾವಿಯಲ್ಲಿರುವ ಟ್ಯಾಂಕ್ ತುಂಬಿ ತೂಕಕ್ಕೆ ಕೆಳಗಿಳಿಯುತ್ತಿದ್ದಂತೆ ಇದಕ್ಕೆ ಹೊಂದಿಸಲಾಗಿರುವ ಸರಪಳಿಯು ಅಣೆಕಟ್ಟೆಯ ಗೇಟನ್ನು ಮೇಲೆತ್ತುತ್ತದೆ. ಇದುವೇ ಆಟೋಮ್ಯಾಟಿಕ್ ಗೇಟ್‌ನ ತಾಂತ್ರಿಕತೆ. ಇಡೀ ಅಣೆಕಟ್ಟೆಯಲ್ಲಿ ಒಟ್ಟು ಕಮಾನು ಪ್ರಕಾರದ 177 ಕಬ್ಬಿಣದ ಬ್ಲೂಯಿಸ್‌ ಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿವೆ. ವಿವಿಧ ಹಂತಗಳಲ್ಲಿ 153 ಬ್ಲೂಸ್ ಗೇಟ್‌ಗಳಿದ್ದು, ಇದರ ಮೂಲಕ ನೀರು ಬಿಡಲಾಗುತ್ತದೆ ಮತ್ತು 2003ರಲ್ಲಿ 80 ಅಡಿ ಮಟ್ಟದ 17 ಬ್ಲೂಸ್‌ಗೇಟ್‌ಗಳು ತುಕ್ಕು ಅಥವಾ ಹಾನಿಗೊಳಗಾಗಿದ್ದರಿಂದ ಬದಲಾಯಿಸಲಾಗಿದೆ.

ಇತ್ತೀಚೆಗೆ 25 ಸ್ಫೂಸ್ ಗೇಟ್‌ಗಳ ಅಂತಿಮ ಸೆಟ್ ಅನ್ನು ಬದಲಿಸುವ ಕೆಲಸ ಪೂರ್ಣಗೊಂಡಿದೆ. ಹೀಗಾಗಿ 58.46 ಕೋಟಿ ರೂ. ವೆಚ್ಚದಲ್ಲಿ ಅಣೆಕಟ್ಟೆ ಪುನರ್ವಸತಿ ಮತ್ತು ಸುಧಾರಣೆ ಯೋಜನೆ (ಡಿಆರ್‌ಐಪಿ) ಅಡಿಯಲ್ಲಿ ಕೈಗೊಂಡ ಯೋಜನೆಯ ಪ್ರಮುಖ ಹಂತವನ್ನು ಮುಟ್ಟಲಾಗಿದೆ.

ಅಣೆಕಟ್ಟೆಯ ಡೆಡ್ ಸ್ಟೋರೇಜ್ ಮಟ್ಟವು 60 ಅಡಿಗಳಿಗೆ ಸೀಮಿತ. 2019ರ ಜುಲೈನಲ್ಲಿ ಅಣೆಕಟ್ಟೆಯ ಶೇಖರಣಾ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂವೇದಕ ಆಧಾರಿತ ನೈಜ-ಸಮಯದ ಡೇಟಾಕ್ಕಾಗಿ ಕೆಆರ್‌ಎಸ್ ಅಣೆಕಟ್ಟಿನಲ್ಲಿ ಟೆಲಿಮೆಟ್ರಿಕ್‌ ವಾಟರ್‌ಗೇಜ್ (ಆನ್‌ಲೈನ್ ಮಾನಿಟರಿಂಗ್ ಸಿಸ್ಟಮ್) ಅನ್ನು ಸ್ಥಾಪಿಸಲಾಗಿದೆ. ಅಣೆಕಟ್ಟೆಯಲ್ಲಿನ ಒಟ್ಟು 1,368,847,000 ಎಂ3 (1,109,742 ಎಕರೆ). ಸಕ್ರಿಯ ಸಾಮರ್ಥ್ಯ, 124,421,000 ಎಂ3.

ಅಣೆಕಟ್ಟೆಯಿಂದ ಸರ್ ಎಂ.ವಿಶ್ವೇಶ್ವರಯ್ಯ ನಾಲೆ, ವರುಣಾ ನಾಲೆ, ರಾಜಾಪರಮೇಶ್ವರಿ, ರಾಮಸ್ವಾಮಿ, ಚಿಕ್ಕದೇವರಾಯ ಸೇರಿದಂತೆ ಹಲವು ಕಾಲುವೆಗಳು ಲಕ್ಷಾಂತರ ಎಕರೆ ಜಮೀನನ್ನು ಹಸಿರಾಗಿಸಿ, ಕೋಟ್ಯಂತರ ಜನರ ಜೀವನಾಡಿಯಾಗಿವೆ. ಕನ್ನಂಬಾಡಿ ಎಂಬ ಗ್ರಾಮವಿದ್ದ ಈ ಸ್ಥಳದಲ್ಲಿ ಟಿಪ್ಪು ಸುಲ್ತಾನ್ ಕೂಡ ಒಡ್ಡು ನಿರ್ಮಿಸಿರುವ ಕುರಿತು ಉಲ್ಲೇಖವಿದೆ. ಜಲಾಶಯವನ್ನು ನಿರ್ಮಿಸಿದ ಪಟ್ಟಣವನ್ನು ಕೃಷ್ಣರಾಜಸಾಗರ ಎಂದು ಕರೆಯಲಾಗುತ್ತದೆ. ಕಾವೇರಿ, ಹೇಮಾವತಿ ಮತ್ತು ಲಕ್ಷ್ಮಣತೀರ್ಥ ಎಂಬ ಮೂರು ನದಿಗಳು ಕೃಷ್ಣರಾಜಸಾಗರ ಹಿನ್ನೀರಿನ ಅಂಬಿಗರಹಳ್ಳಿ ಬಳಿ ಸಂಗಮವಾಗುತ್ತವೆ. ಮೈಸೂರು, ಮಂಡ್ಯ ಮತ್ತು ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ಏಕೈಕ ಪ್ರಮುಖ ಮೂಲವಾಗಿರುವ ಕೆಆರ್‌ಎಸ್ ಅಣೆಕಟ್ಟೆಯ ನೀರು ತಮಿಳುನಾಡಿನ ಮೆಟ್ಟೂರು ಅಣೆಕಟ್ಟೆಯ ಕಡೆಗೆ ಹರಿಯುತ್ತದೆ. ಕಾವೇರಿ ನದಿಯು ಮುಂದೆ ಪೂಂಪುಹಾರ್‌ನಲ್ಲಿ ಬಂಗಾಳಕೊಲ್ಲಿಯನ್ನು ಸೇರುತ್ತದೆ.

ಹಳೇ ಗೇಟ್‌ಗಳನ್ನು ಬದಲಾಯಿಸುವ ಕಾಮಗಾರಿ

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago