ಆಂದೋಲನ 52

ಕೆಆರ್‌ಎಸ್ ಅಣೆಕಟ್ಟೆಯ ಕೌತುಕ…

  • ಹೇಮಂತ್‌ಕುಮಾರ್

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾಗಿ ಇಂದಿಗೆ ಸುಮಾರು 94 ವರ್ಷ ಗಳಾಗಿವೆ.

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಜಲಾಶಯವನ್ನು 1911ರ ನವೆಂಬರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಾರ್ಯಗತಗೊಳಿಸಿದರು. 2.5 ಕೋಟಿ ರೂ. ವೆಚ್ಚದಲ್ಲಿ 1931-32ರಲ್ಲಿ ಪೂರ್ಣಗೊಂಡ ಅಣೆಕಟ್ಟೆಯ ಒಟ್ಟು ಉದ್ದ 2.62 ಕಿ.ಮೀ. ಇದ್ದು, ಕಟ್ಟೆಯನ್ನು ಸುರ್ಕಿ ಗಾರೆ ಮತ್ತು ಸುಣ್ಣದ ಕಲ್ಲುಗಳ ಮಿಶ್ರಣದ ಜೊತೆಗೆ ಮೊಟ್ಟೆಯನ್ನೂ ಸೇರಿಸಿ ರೂಪಿಸಲಾದ ಗಾರೆಯನ್ನು ಬಳಸಿ ನಿರ್ಮಿಸಲಾಗಿದೆ. ಅಣೆಕಟ್ಟೆ 2,621 ಮೀಟರ್ (8,600 ಅಡಿ) ಉದ್ದ ಮತ್ತು 40 ಮೀಟರ್ (130 ಅಡಿ) ಎತ್ತರವಿದೆ.

ಅಣೆಕಟ್ಟಿನಲ್ಲಿ ಗೇಟ್‌ಗಳು, ಸಿಲ್, ಲಿಂಟಲ್ ಮತ್ತು ಸೈಡ್ ಗೂವ್‌ಗಳು ಮತ್ತು ಪ್ಲೇಟ್‌ಗಳು, ಸಮತೋಲನ ತೂಕ, ಫೋಟ್‌ಗಳನ್ನು ಒಳಗೊಂಡಿರುವ 8 ಗೇಟ್‌ಗಳ ಆರು ಸೆಟ್ ಗಳಲ್ಲಿ ಅಂತಹ 48 ಸ್ವಯಂಚಾಲಿತ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಸರಪಳಿಗಳು ಮತ್ತು ಪುಲ್ಲಿಗಳು ಮತ್ತು ಒಳಹರಿವು ಮತ್ತು ಔಬ್ಲೆಟ್ ಪೈಪ್ ಗಳು ಇಲ್ಲಿನ ವಿಶೇಷ. ನವೀನ ತಾಂತ್ರಿಕತೆಯನ್ನು ಉಪಯೋಗಿಸಿಕೊಂಡು ನೀರಿನೊಳಗೇ ಗೇಟ್‌ಗಳನ್ನು ರಿಪೇರಿ ಮಾಡುವ, ಅಂಡರ್‌ವಾಟರ್ ಸಾರ್ಡರಿಂಗ್ ಮಾಡುವ ಸ್ಕೂಬಾ ಡೈವರ್‌ಗಳು ಇಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಆಟೋಮ್ಯಾಟಿಕ್ ಗೇಟ್ ಎಂಬ ತಂತ್ರಜ್ಞಾನ ಒಂದು ಸರಳ ವಿಧಾನದಲ್ಲಿ ರೂಪಿತಗೊಂಡಿದ್ದು, ಅಣೆಕಟ್ಟೆಯಲ್ಲಿ ನೀರು ಭರ್ತಿಯಾಗುತ್ತಿದ್ದಂತೆ ಕಟ್ಟೆಯ ಹೊರಭಾಗದಲ್ಲಿರುವ ಬಾವಿಯಂತಹ ಕಟ್ಟಡಕ್ಕೆ ನೀರು ಹರಿಯುತ್ತದೆ. ಬಾವಿಯಲ್ಲಿರುವ ಟ್ಯಾಂಕ್ ತುಂಬಿ ತೂಕಕ್ಕೆ ಕೆಳಗಿಳಿಯುತ್ತಿದ್ದಂತೆ ಇದಕ್ಕೆ ಹೊಂದಿಸಲಾಗಿರುವ ಸರಪಳಿಯು ಅಣೆಕಟ್ಟೆಯ ಗೇಟನ್ನು ಮೇಲೆತ್ತುತ್ತದೆ. ಇದುವೇ ಆಟೋಮ್ಯಾಟಿಕ್ ಗೇಟ್‌ನ ತಾಂತ್ರಿಕತೆ. ಇಡೀ ಅಣೆಕಟ್ಟೆಯಲ್ಲಿ ಒಟ್ಟು ಕಮಾನು ಪ್ರಕಾರದ 177 ಕಬ್ಬಿಣದ ಬ್ಲೂಯಿಸ್‌ ಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿವೆ. ವಿವಿಧ ಹಂತಗಳಲ್ಲಿ 153 ಬ್ಲೂಸ್ ಗೇಟ್‌ಗಳಿದ್ದು, ಇದರ ಮೂಲಕ ನೀರು ಬಿಡಲಾಗುತ್ತದೆ ಮತ್ತು 2003ರಲ್ಲಿ 80 ಅಡಿ ಮಟ್ಟದ 17 ಬ್ಲೂಸ್‌ಗೇಟ್‌ಗಳು ತುಕ್ಕು ಅಥವಾ ಹಾನಿಗೊಳಗಾಗಿದ್ದರಿಂದ ಬದಲಾಯಿಸಲಾಗಿದೆ.

ಇತ್ತೀಚೆಗೆ 25 ಸ್ಫೂಸ್ ಗೇಟ್‌ಗಳ ಅಂತಿಮ ಸೆಟ್ ಅನ್ನು ಬದಲಿಸುವ ಕೆಲಸ ಪೂರ್ಣಗೊಂಡಿದೆ. ಹೀಗಾಗಿ 58.46 ಕೋಟಿ ರೂ. ವೆಚ್ಚದಲ್ಲಿ ಅಣೆಕಟ್ಟೆ ಪುನರ್ವಸತಿ ಮತ್ತು ಸುಧಾರಣೆ ಯೋಜನೆ (ಡಿಆರ್‌ಐಪಿ) ಅಡಿಯಲ್ಲಿ ಕೈಗೊಂಡ ಯೋಜನೆಯ ಪ್ರಮುಖ ಹಂತವನ್ನು ಮುಟ್ಟಲಾಗಿದೆ.

ಅಣೆಕಟ್ಟೆಯ ಡೆಡ್ ಸ್ಟೋರೇಜ್ ಮಟ್ಟವು 60 ಅಡಿಗಳಿಗೆ ಸೀಮಿತ. 2019ರ ಜುಲೈನಲ್ಲಿ ಅಣೆಕಟ್ಟೆಯ ಶೇಖರಣಾ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂವೇದಕ ಆಧಾರಿತ ನೈಜ-ಸಮಯದ ಡೇಟಾಕ್ಕಾಗಿ ಕೆಆರ್‌ಎಸ್ ಅಣೆಕಟ್ಟಿನಲ್ಲಿ ಟೆಲಿಮೆಟ್ರಿಕ್‌ ವಾಟರ್‌ಗೇಜ್ (ಆನ್‌ಲೈನ್ ಮಾನಿಟರಿಂಗ್ ಸಿಸ್ಟಮ್) ಅನ್ನು ಸ್ಥಾಪಿಸಲಾಗಿದೆ. ಅಣೆಕಟ್ಟೆಯಲ್ಲಿನ ಒಟ್ಟು 1,368,847,000 ಎಂ3 (1,109,742 ಎಕರೆ). ಸಕ್ರಿಯ ಸಾಮರ್ಥ್ಯ, 124,421,000 ಎಂ3.

ಅಣೆಕಟ್ಟೆಯಿಂದ ಸರ್ ಎಂ.ವಿಶ್ವೇಶ್ವರಯ್ಯ ನಾಲೆ, ವರುಣಾ ನಾಲೆ, ರಾಜಾಪರಮೇಶ್ವರಿ, ರಾಮಸ್ವಾಮಿ, ಚಿಕ್ಕದೇವರಾಯ ಸೇರಿದಂತೆ ಹಲವು ಕಾಲುವೆಗಳು ಲಕ್ಷಾಂತರ ಎಕರೆ ಜಮೀನನ್ನು ಹಸಿರಾಗಿಸಿ, ಕೋಟ್ಯಂತರ ಜನರ ಜೀವನಾಡಿಯಾಗಿವೆ. ಕನ್ನಂಬಾಡಿ ಎಂಬ ಗ್ರಾಮವಿದ್ದ ಈ ಸ್ಥಳದಲ್ಲಿ ಟಿಪ್ಪು ಸುಲ್ತಾನ್ ಕೂಡ ಒಡ್ಡು ನಿರ್ಮಿಸಿರುವ ಕುರಿತು ಉಲ್ಲೇಖವಿದೆ. ಜಲಾಶಯವನ್ನು ನಿರ್ಮಿಸಿದ ಪಟ್ಟಣವನ್ನು ಕೃಷ್ಣರಾಜಸಾಗರ ಎಂದು ಕರೆಯಲಾಗುತ್ತದೆ. ಕಾವೇರಿ, ಹೇಮಾವತಿ ಮತ್ತು ಲಕ್ಷ್ಮಣತೀರ್ಥ ಎಂಬ ಮೂರು ನದಿಗಳು ಕೃಷ್ಣರಾಜಸಾಗರ ಹಿನ್ನೀರಿನ ಅಂಬಿಗರಹಳ್ಳಿ ಬಳಿ ಸಂಗಮವಾಗುತ್ತವೆ. ಮೈಸೂರು, ಮಂಡ್ಯ ಮತ್ತು ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ಏಕೈಕ ಪ್ರಮುಖ ಮೂಲವಾಗಿರುವ ಕೆಆರ್‌ಎಸ್ ಅಣೆಕಟ್ಟೆಯ ನೀರು ತಮಿಳುನಾಡಿನ ಮೆಟ್ಟೂರು ಅಣೆಕಟ್ಟೆಯ ಕಡೆಗೆ ಹರಿಯುತ್ತದೆ. ಕಾವೇರಿ ನದಿಯು ಮುಂದೆ ಪೂಂಪುಹಾರ್‌ನಲ್ಲಿ ಬಂಗಾಳಕೊಲ್ಲಿಯನ್ನು ಸೇರುತ್ತದೆ.

ಹಳೇ ಗೇಟ್‌ಗಳನ್ನು ಬದಲಾಯಿಸುವ ಕಾಮಗಾರಿ

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

3 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

3 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

5 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

6 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

7 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

10 hours ago