Andolana originals

ʼಮೈಸೂರು ಚಲೋ ಚಳವಳಿಯಲ್ಲಿ ಸೆರೆವಾಸʼ: ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರಯ್ಯ ʼನೆನಪಿನ ದೋಣಿʼ

• ಎಂ.ಎಸ್.ಕಾಶೀನಾಥ್

ಶಾಲೆಯಲ್ಲಿ ಇದ್ದಾಗಲೇ ಪ್ರಭಾತ್ ಫೇರಿಯಲ್ಲಿ ಪಾಲ್ಗೊಳ್ಳುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಸೆಳೆತಕ್ಕೆ ಸಿಲುಕಿದ್ದು, ಮೈಸೂರು ಚಲೋ ಚಳವಳಿಯಲ್ಲಿ ಸೆರೆವಾಸ ಅನುಭವಿಸಿದೆ… ಇವು ಸ್ವಾತಂತ್ರ್ಯ ಚಳವಳಿ ಹಾಗೂ ಮೈಸೂರು ಚಲೋ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಡಾ.ಎಂ.ಸೋಮಶೇಖರಯ್ಯ ಅವರ ಮಾತುಗಳು.

ದೇಶಾಭಿಮಾನ, ಬ್ರಿಟಿಷರ ದಾಸ್ಯದಿಂದ ವಿಮುಕ್ತಿ ದೊರೆತ ದಿನಗಳನ್ನು ಕುರಿತು ಮಾತ ನಾಡುತ್ತಿದ್ದ 90ರ ಹರಯದ ಆ ಸ್ವಾತಂತ್ರ್ಯ ಹೋರಾಟಗಾರರ ಕಣ್ಣಲ್ಲಿ 77 ವರ್ಷಗಳ ಹಿಂದಿನ ನೆನಪುಗಳು ಜಲಪಾತದಂತೆ ಧುಮ್ಮಿ ಕುತ್ತಿದ್ದವು…

ಸೋಮಶೇಖರಯ್ಯ ಅವರು ಮೈಸೂರಿನ ಸರಸ್ವತಿಪುರಂ ಬಡಾವಣೆಯ 4ನೇ ಮೇನ್‌ನಲ್ಲಿ ಪ್ರಸ್ತುತ ವಾಸವಾಗಿದ್ದಾರೆ. ನಗರದ ಸುಬ್ಬರಾಯನಕೆರೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಉಪಾಧ್ಯಕ್ಷರು ಕೂಡ. ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಹಾಸನದ ಶಾಲೆಯಲ್ಲಿ ಓದುತಿದ್ದ ನಾನು ಸಹಪಾಠಿಗಳೊಂದಿಗೆ ಪ್ರತಿದಿನ ಬೆಳಿಗ್ಗೆ ಪ್ರಭಾತ್ ಫೇರಿಯಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದು ಸೋಮಶೇಖರಯ್ಯ ಅವರು ತಮ್ಮ ಬಾಲ್ಯಾವಸ್ಥೆಯ ದಿನಗಳನ್ನು ನೆನಪಿಸಿಕೊಂಡರು.

1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಘೋಷಣೆಯಾದ ನಂತರವೂ ಮಹಾರಾಜರ ಆಳ್ವಿಕೆಯಲ್ಲಿದ್ದ ಮೈಸೂರು ಸಂಸ್ಥಾನ ಮಾತ್ರ ಒಕ್ಕೂಟಕ್ಕೆ ಸೇರದೆ ಸ್ವತಂತ್ರ ರಾಜ್ಯವಾಗಿಯೇ ಉಳಿದುಕೊಂಡಿತ್ತು. ಆಗ ಮೈಸೂರು ಸಂಸ್ಥಾನವನ್ನೂ ದೇಶದ ಒಕ್ಕೂಟಕ್ಕೆ ಸೇರಿಸಬೇಕೆಂಬ ಧ್ವನಿ ಜೋರಾಯಿತು ಎಂದು ಅವರು ವಿವರಿಸಿದರು.

ಆಗ ಹಾಸನದಲ್ಲಿ ಸೆಕ್ಷನ್ 144 ಅನ್ನು ಜಾರಿ ಮಾಡಲಾಗಿದ್ದರೂ 1947ರ ಸೆಪ್ಟೆಂಬರ್ 27ರಂದು ಪ್ರಭಾತ್ ಫೇರಿಯಲ್ಲಿ ಭಾಗವಹಿಸಿದ್ದ ನಾನೂ ಸೇರಿದಂತೆ ಆರು ವಿದ್ಯಾರ್ಥಿಗಳನ್ನು ಮೈಸೂರು ಚಲೋ ಚಳವಳಿ ಸತ್ಯಾಗ್ರಹದಲ್ಲಿ ಭಾಗವಹಿಸಕೂಡದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರು. ಅವರ ಮಾತಿಗೆ ಕಿವಿ ಗೊಡದಿದ್ದಾಗ ನಮ್ಮನ್ನು ಪೊಲೀಸರು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಮಗೆ ಸೆರೆವಾಸ ವಿಧಿಸಿ ಆದೇಶ ನೀಡಿದರು ಎಂದು ಸೋಮಶೇಖರಯ್ಯ ತಿಳಿಸಿದರು.

ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ ನಂತರ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಡಾ.ಸೋಮಶೇಖರಯ್ಯ ಅವರದು ಸಾರ್ಥಕ ಬದುಕಾಗಿದೆ.

ಕೋಟ್ಸ್‌)))

ಗಣ್ಯರೊಂದಿಗೆ ಸೆರೆವಾಸ: ಒಟ್ಟು 11 ದಿನಗಳ ಕಾಲ ಸೆರೆಯಲ್ಲಿದ್ದ ನಮ್ಮನ್ನು 1947ರ ಅ.7 ರಂದು ಸಂಜೆ ಬಿಡುಗಡೆ ಮಾಡಿದರು. ನಮ್ಮನ್ನು ಹಾಸನದ ಜೈಲಿನಲ್ಲಿ ಇರಿಸಿದ್ದಾಗ ನಮ್ಮೊಂದಿಗೆ ಸ್ವಾತಂತ್ರ್ಯ ಚಳವಳಿ ಹಾಗೂ ಮೈಸೂರು ಚಲೋ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಸಿದ್ದವನಹಳ್ಳಿ ಕೃಷ್ಣಶರ್ಮ, ಕೆ.ಟಿ.ಭಾಷ್ಯಂ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮುಂತಾದ ನಾಯಕರೂ ಇದ್ದರು.
-ಡಾ.ಎಂ.ವಿ ಸೋಮಶೇಖರಯ್ಯ

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

28 mins ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

1 hour ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

2 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

2 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

2 hours ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

3 hours ago