Andolana originals

ʼಮೈಸೂರು ಚಲೋ ಚಳವಳಿಯಲ್ಲಿ ಸೆರೆವಾಸʼ: ಸ್ವಾತಂತ್ರ್ಯ ಹೋರಾಟಗಾರ ಸೋಮಶೇಖರಯ್ಯ ʼನೆನಪಿನ ದೋಣಿʼ

• ಎಂ.ಎಸ್.ಕಾಶೀನಾಥ್

ಶಾಲೆಯಲ್ಲಿ ಇದ್ದಾಗಲೇ ಪ್ರಭಾತ್ ಫೇರಿಯಲ್ಲಿ ಪಾಲ್ಗೊಳ್ಳುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಸೆಳೆತಕ್ಕೆ ಸಿಲುಕಿದ್ದು, ಮೈಸೂರು ಚಲೋ ಚಳವಳಿಯಲ್ಲಿ ಸೆರೆವಾಸ ಅನುಭವಿಸಿದೆ… ಇವು ಸ್ವಾತಂತ್ರ್ಯ ಚಳವಳಿ ಹಾಗೂ ಮೈಸೂರು ಚಲೋ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಡಾ.ಎಂ.ಸೋಮಶೇಖರಯ್ಯ ಅವರ ಮಾತುಗಳು.

ದೇಶಾಭಿಮಾನ, ಬ್ರಿಟಿಷರ ದಾಸ್ಯದಿಂದ ವಿಮುಕ್ತಿ ದೊರೆತ ದಿನಗಳನ್ನು ಕುರಿತು ಮಾತ ನಾಡುತ್ತಿದ್ದ 90ರ ಹರಯದ ಆ ಸ್ವಾತಂತ್ರ್ಯ ಹೋರಾಟಗಾರರ ಕಣ್ಣಲ್ಲಿ 77 ವರ್ಷಗಳ ಹಿಂದಿನ ನೆನಪುಗಳು ಜಲಪಾತದಂತೆ ಧುಮ್ಮಿ ಕುತ್ತಿದ್ದವು…

ಸೋಮಶೇಖರಯ್ಯ ಅವರು ಮೈಸೂರಿನ ಸರಸ್ವತಿಪುರಂ ಬಡಾವಣೆಯ 4ನೇ ಮೇನ್‌ನಲ್ಲಿ ಪ್ರಸ್ತುತ ವಾಸವಾಗಿದ್ದಾರೆ. ನಗರದ ಸುಬ್ಬರಾಯನಕೆರೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಉಪಾಧ್ಯಕ್ಷರು ಕೂಡ. ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಹಾಸನದ ಶಾಲೆಯಲ್ಲಿ ಓದುತಿದ್ದ ನಾನು ಸಹಪಾಠಿಗಳೊಂದಿಗೆ ಪ್ರತಿದಿನ ಬೆಳಿಗ್ಗೆ ಪ್ರಭಾತ್ ಫೇರಿಯಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದು ಸೋಮಶೇಖರಯ್ಯ ಅವರು ತಮ್ಮ ಬಾಲ್ಯಾವಸ್ಥೆಯ ದಿನಗಳನ್ನು ನೆನಪಿಸಿಕೊಂಡರು.

1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಘೋಷಣೆಯಾದ ನಂತರವೂ ಮಹಾರಾಜರ ಆಳ್ವಿಕೆಯಲ್ಲಿದ್ದ ಮೈಸೂರು ಸಂಸ್ಥಾನ ಮಾತ್ರ ಒಕ್ಕೂಟಕ್ಕೆ ಸೇರದೆ ಸ್ವತಂತ್ರ ರಾಜ್ಯವಾಗಿಯೇ ಉಳಿದುಕೊಂಡಿತ್ತು. ಆಗ ಮೈಸೂರು ಸಂಸ್ಥಾನವನ್ನೂ ದೇಶದ ಒಕ್ಕೂಟಕ್ಕೆ ಸೇರಿಸಬೇಕೆಂಬ ಧ್ವನಿ ಜೋರಾಯಿತು ಎಂದು ಅವರು ವಿವರಿಸಿದರು.

ಆಗ ಹಾಸನದಲ್ಲಿ ಸೆಕ್ಷನ್ 144 ಅನ್ನು ಜಾರಿ ಮಾಡಲಾಗಿದ್ದರೂ 1947ರ ಸೆಪ್ಟೆಂಬರ್ 27ರಂದು ಪ್ರಭಾತ್ ಫೇರಿಯಲ್ಲಿ ಭಾಗವಹಿಸಿದ್ದ ನಾನೂ ಸೇರಿದಂತೆ ಆರು ವಿದ್ಯಾರ್ಥಿಗಳನ್ನು ಮೈಸೂರು ಚಲೋ ಚಳವಳಿ ಸತ್ಯಾಗ್ರಹದಲ್ಲಿ ಭಾಗವಹಿಸಕೂಡದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರು. ಅವರ ಮಾತಿಗೆ ಕಿವಿ ಗೊಡದಿದ್ದಾಗ ನಮ್ಮನ್ನು ಪೊಲೀಸರು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಮಗೆ ಸೆರೆವಾಸ ವಿಧಿಸಿ ಆದೇಶ ನೀಡಿದರು ಎಂದು ಸೋಮಶೇಖರಯ್ಯ ತಿಳಿಸಿದರು.

ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ ನಂತರ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಡಾ.ಸೋಮಶೇಖರಯ್ಯ ಅವರದು ಸಾರ್ಥಕ ಬದುಕಾಗಿದೆ.

ಕೋಟ್ಸ್‌)))

ಗಣ್ಯರೊಂದಿಗೆ ಸೆರೆವಾಸ: ಒಟ್ಟು 11 ದಿನಗಳ ಕಾಲ ಸೆರೆಯಲ್ಲಿದ್ದ ನಮ್ಮನ್ನು 1947ರ ಅ.7 ರಂದು ಸಂಜೆ ಬಿಡುಗಡೆ ಮಾಡಿದರು. ನಮ್ಮನ್ನು ಹಾಸನದ ಜೈಲಿನಲ್ಲಿ ಇರಿಸಿದ್ದಾಗ ನಮ್ಮೊಂದಿಗೆ ಸ್ವಾತಂತ್ರ್ಯ ಚಳವಳಿ ಹಾಗೂ ಮೈಸೂರು ಚಲೋ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಸಿದ್ದವನಹಳ್ಳಿ ಕೃಷ್ಣಶರ್ಮ, ಕೆ.ಟಿ.ಭಾಷ್ಯಂ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮುಂತಾದ ನಾಯಕರೂ ಇದ್ದರು.
-ಡಾ.ಎಂ.ವಿ ಸೋಮಶೇಖರಯ್ಯ

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago