ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ
ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ ಗಾಂಧಿ ಚಿಂತನೆಯ ಪರಿಚಯ
ಭಾರತದ ಐತಿಹಾಸಿಕ ಆಂದೋಲನ ‘ಸ್ವಾತಂತ್ರ್ಯದ ಚಳವಳಿ’ಯಲ್ಲಿ ಸಹಸ್ರ ಸಹಸ್ರ ಹೋರಾಟಗಾರರು ತ್ಯಾಗ, ಬಲಿದಾನ ಗೈದಿದ್ದಾರೆ. ಜಗತ್ತಿನ ಯಾವುದೇ ಸ್ವಾತಂತ್ರ್ಯ ಹೋರಾಟ ಕ್ಕಿಂತಲೂ ಭಾರತದ ಸ್ವಾತಂತ್ರ್ಯದ ಹೋರಾಟದ ಹಾದಿ ಜಗತ್ತನ್ನೇ ಬೆರಗಾಗಿಸಿತು.
ಇದಕ್ಕೆ ಕಾರಣ ಗಾಂಧೀಜಿಯವರ ಅಹಿಂಸಾ ಮಾರ್ಗದ ಚಳವಳಿ. ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸಾ ಮಾರ್ಗದಲ್ಲಿ ಚಳವಳಿಯನ್ನು ಮುನ್ನಡೆಸಿದ ರೀತಿಗೆ ಬ್ರಿಟಿಷ್ ಸರ್ಕಾರ ನಡುಗಿ ಹೋಯಿತು ಮತ್ತು ಭಾರತವು ಸ್ವಾತಂತ್ರ್ಯವನ್ನು ದಕ್ಕಿಸಿಕೊಳ್ಳುವಂತಾಯಿತು. ಅಂದರೆ ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸಾ ಮಾರ್ಗದ ಹೋರಾಟಕ್ಕೆ ಹಿಂಸೆಯನ್ನು ಮೆಟ್ಟಿ ನಿಲ್ಲುವ ಶಕ್ತಿಯಿತ್ತು ಎಂಬುದು ಸ್ಪಷ್ಟ. ಮಹಾತ್ಮ ಗಾಂಧೀಜಿ ಅವರ ಆತ್ಮಕಥೆ ‘ನನ್ನ ಸತ್ಯಾನ್ವೇಷಣೆ’ ರಚನೆಯಾಗಿ ೧೦೦ ವರ್ಷಗಳು ಸಂದಿರುವ ಈ ಸಂದರ್ಭ ನಮಗೆ ಅತ್ಯಂತ ಆಪ್ಯಾಯಮಾನವಾಗಿದೆ. ಈ ಸಮಯವು ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಲು ಸಿಕ್ಕ ಸುಸಂದರ್ಭ ಎಂದು ಭಾವಿಸಬೇಕಿದೆ. ಗಾಂಧೀಜಿ ಅವರು ನಡೆದ ಸತ್ಯದ ದಾರಿ ಹಾಗೂ ಅಹಿಂಸೆಯ ಮಾರ್ಗ ಇಂದಿನ ಪೀಳಿಗೆಗೆ ದಾರಿದೀಪವಾಗ ಬೇಕಿದೆ. ಜನರಿಗೆ ಸತ್ಯದ ಅರಿವಾಗಬೇಕಿದೆ. ಅಹಿಂಸೆಯ ಮಾರ್ಗಕ್ಕೆ ಜಗತ್ತನ್ನೇ ಗೆಲ್ಲುವ ಶಕ್ತಿಯಿದೆ ಎಂಬುದನ್ನು ತಿಳಿಯಬೇಕಿದೆ. ಸಹ ಬಾಳ್ವೆ, ಸಹಿಷ್ಣುತೆ, ಜೀವಪರ ನಿಲುವುಗಳ ಮಹತ್ವ ಅರಿಯಬೇಕಿದೆ. ನಮಗೆ ಬೇಕಿರುವುದು ಹೊಡಿ ಬಡಿ ಸಂಸ್ಕೃತಿಯಲ್ಲ, ನಡೆ ನುಡಿಯ ಸಂಸ್ಕೃತಿ. ಇದನ್ನು ಈ ನಾಡಿಗೆ ತಿಳಿಯಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗಾಂಧೀಜಿ ಅವರ ಸತ್ಯ ಮತ್ತು ಅಹಿಂಸಾ ಮಾರ್ಗದ ಹೋರಾಟದಿಂದ ಭಾರತದ ನೆಲೆ ಹೇಗೆ ಶಾಂತಿ ನೆಮ್ಮದಿ ಕಂಡು ಕೊಂಡಿತು ಎಂಬುದು ಇಂದಿನ ಮಕ್ಕಳ ಮನಸ್ಸಿಗೆ ನಾಟಬೇಕಿದೆ.
ಈ ಹಿನ್ನೆಲೆಯಲ್ಲಿ ಭಾರತದ ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಜೀವಪರ ನಿಲುವು ಪ್ರೇರಣೆಯಾಗಬೇಕಿದೆ. ಹಾಗಾಗಿಯೇ ಮಹಾತ್ಮ ಗಾಂಧಿಜಿ ಅವರ ಆತ್ಮಕಥೆ ‘ನನ್ನ ಸತ್ಯಾನ್ವೇಷಣೆ’ ರಚನೆಯಾಗಿ ೧೦೦ ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ‘ಆಂದೋಲನ’ ದಿನ ಪತ್ರಿಕೆ ಹಾಗೂ ಬೆಂಗಳೂರಿನ ಗಾಂಧಿ ಭವನದ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಜೊತೆಗೂಡಿ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆ ಹಾಗೂ ಗಾಂಧಿಜಿ ಬದುಕಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ನಾಡಿನ ನೆಮ್ಮದಿಗೆ ಗಾಂಧಿಜಿಯ ವಿಚಾರಧಾರೆಗಳ ಅನಿವಾರ್ಯತೆ ಎಷ್ಟಿದೆ ಎಂಬುದನ್ನು ತಿಳಿಯಪಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಇದಕ್ಕಾಗಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಪೌಢಶಾಲೆಗಳಲ್ಲಿ ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೆ ‘ನನ್ನ ಕಣ್ಣಲ್ಲಿ ಗಾಂಧಿಜಿ’ ವಿಷಯ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗುತ್ತಿದೆ. ಇದನ್ನು ನಿರಂತರವಾಗಿ ಮುಂದುವರಿಸುತ್ತಾ ಒಂದು ವರ್ಷ ಕಾಲ ಕನಿಷ್ಠ ೧೫೦ ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ನಡೆಸಿ ಗಾಂಧಿಜಿಯ ವಿಚಾರಧಾರೆಗಳನ್ನು ಪಸರಿಸಲಾಗು ತ್ತದೆ. ಅಂತಿಮವಾಗಿ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಕ್ವಿಜ್ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವುದರೊಂದಿಗೆ ಅಭಿಯಾನವನ್ನು ಮುಗಿಸಲಾಗುವುದು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಮಕ್ಕಳ ಬರವಣಿಗೆಯ ತುಣುಕು, ‘ನನ್ನ ಸತ್ಯಾನ್ವೇಷಣೆ’ ಕೃತಿಯ ಆಯ್ದ ಭಾಗ, ಗಾಂಧಿಜಿಯಿಂದ ಪ್ರೇರೇಪಿತರಾಗಿ ಬದುಕನ್ನು ರೂಪಿಸಿಕೊಂಡವರ ಕಥನ ಈ ಅಭಿಯಾನದ ಮೊದಲ ಕಂತಿನ ವಿಶೇಷ ಪುಟದಲ್ಲಿದೆ.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…