Andolana originals

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ

ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.

ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸ ಬೇಕೆಂಬ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶೇಷ ಕ್ರಿಯಾಯೋಜನೆ ರೂಪಿಸಿದ್ದು, ೨೫೬ ಗ್ರಾಪಂ ಗಳಲ್ಲಿ ಜಿಲ್ಲೆಯ ೧೪೭ ಗ್ರಾಪಂಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗಿದೆ.

ರೋಗ ಪತ್ತೆ ಹೇಗೆ? :
ಸಾಮಾನ್ಯವಾಗಿ ಎರಡು ವಾರಗಳಿಗಿಂತ ಹೆಚ್ಚು ಕಾಲ ಕಫದೊಂದಿಗೆ ಕೆಮ್ಮು, ಕೆಲವೊಮ್ಮೆ ಕಫದೊಂದಿಗೆ ರಕ್ತ ಬೀಳುತ್ತದೆ. ಎದೆ ನೋವು, ಸಂಜೆ ಜ್ವರ, ರಾತ್ರಿಯಲ್ಲಿ ಬೆವರುವುದು, ಹಸಿವಿನ ಕೊರತೆ, ತೂಕ ನಷ್ಟ ಕಾಣಿಸಿಕೊಳ್ಳುತ್ತದೆ. ಇಂತಹವರು ಟಿಬಿ ಉಚಿತ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ಪಿಕೆಟಿಬಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.

ಮುನ್ನೆಚ್ಚರಿಕೆ ಕ್ರಮ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವ ಜನಿಕರಲ್ಲಿ ಕ್ಷಯ ರೋಗದ ಕುರಿತು ಜಾಗೃತಿ ಮೂಡಿ ಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ ಸೇವೆ ಲಭ್ಯವಿದೆ. ಪ್ರತಿಯೊಬ್ಬರೂ ವರ್ಷಕ್ಕೊಂದು ಬಾರಿ ಟಿಬಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಬಾಯಿಗೆ ಅಡ್ಡಲಾಗಿ ಕರವಸ ಇಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳಬಾರದು, ಸೋಂಕು ಗಾಳಿಯಲ್ಲಿ ಹರಡಿ ಬೇರೆಯವರಿಗೂ ತಗುಲುತ್ತದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಅಗತ್ಯ.

ಜಿಲ್ಲೆಯಲ್ಲಿ ನಿರಂತರ ಜಾಗೃತಿ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರಂತರ ಜಾಗೃತಿ ಹಾಗೂ ನಾನಾ ಯೋಜನೆಗಳ ಅನುಷ್ಠಾನದಿಂದಾಗಿ ವರ್ಷದಿಂದ ವರ್ಷಕ್ಕೆ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕಾಗಿ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಬಹುಬೇಗನೆ ಪತ್ತೆ ಹಚ್ಚಿ ಅದರ ತೀವ್ರತೆಯನ್ನು ಕಡಿಮೆಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

7 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

47 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago