ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ
ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.
ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸ ಬೇಕೆಂಬ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶೇಷ ಕ್ರಿಯಾಯೋಜನೆ ರೂಪಿಸಿದ್ದು, ೨೫೬ ಗ್ರಾಪಂ ಗಳಲ್ಲಿ ಜಿಲ್ಲೆಯ ೧೪೭ ಗ್ರಾಪಂಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗಿದೆ.
ರೋಗ ಪತ್ತೆ ಹೇಗೆ? :
ಸಾಮಾನ್ಯವಾಗಿ ಎರಡು ವಾರಗಳಿಗಿಂತ ಹೆಚ್ಚು ಕಾಲ ಕಫದೊಂದಿಗೆ ಕೆಮ್ಮು, ಕೆಲವೊಮ್ಮೆ ಕಫದೊಂದಿಗೆ ರಕ್ತ ಬೀಳುತ್ತದೆ. ಎದೆ ನೋವು, ಸಂಜೆ ಜ್ವರ, ರಾತ್ರಿಯಲ್ಲಿ ಬೆವರುವುದು, ಹಸಿವಿನ ಕೊರತೆ, ತೂಕ ನಷ್ಟ ಕಾಣಿಸಿಕೊಳ್ಳುತ್ತದೆ. ಇಂತಹವರು ಟಿಬಿ ಉಚಿತ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ಪಿಕೆಟಿಬಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.
ಮುನ್ನೆಚ್ಚರಿಕೆ ಕ್ರಮ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವ ಜನಿಕರಲ್ಲಿ ಕ್ಷಯ ರೋಗದ ಕುರಿತು ಜಾಗೃತಿ ಮೂಡಿ ಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ ಸೇವೆ ಲಭ್ಯವಿದೆ. ಪ್ರತಿಯೊಬ್ಬರೂ ವರ್ಷಕ್ಕೊಂದು ಬಾರಿ ಟಿಬಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಬಾಯಿಗೆ ಅಡ್ಡಲಾಗಿ ಕರವಸ ಇಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳಬಾರದು, ಸೋಂಕು ಗಾಳಿಯಲ್ಲಿ ಹರಡಿ ಬೇರೆಯವರಿಗೂ ತಗುಲುತ್ತದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಅಗತ್ಯ.
ಜಿಲ್ಲೆಯಲ್ಲಿ ನಿರಂತರ ಜಾಗೃತಿ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರಂತರ ಜಾಗೃತಿ ಹಾಗೂ ನಾನಾ ಯೋಜನೆಗಳ ಅನುಷ್ಠಾನದಿಂದಾಗಿ ವರ್ಷದಿಂದ ವರ್ಷಕ್ಕೆ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕಾಗಿ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಬಹುಬೇಗನೆ ಪತ್ತೆ ಹಚ್ಚಿ ಅದರ ತೀವ್ರತೆಯನ್ನು ಕಡಿಮೆಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…