Andolana originals

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು

ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿ- ಮಳೆಯಿಂದ ನಾಶವಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಲವು ಗ್ರಾಮಗಳ ಜಮೀನುಗಳಲ್ಲಿ ನಡೆದಿದೆ.

ಸುಮಾರು ೧೬೮ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬಾಳೆ ಬೆಳೆ ನಾಶವಾಗಿದ್ದು, ಪ್ರತಿ ಗ್ರಾಮದಲ್ಲೂ ನಷ್ಟದ ಪ್ರಮಾಣವನ್ನು ಸರ್ವೆ ನಡೆಸಲಾಗುತ್ತದೆ. ಸಂತ್ರಸ್ತ ರೈತರು ತೋಟಗಾರಿಕೆ ಇಲಾಖೆ ಹಾಗೂ ತಹಸಿಲ್ದಾರ್ ಗಮನಕ್ಕೆ ತರಬಹುದಾಗಿದೆ.

ತಾಲ್ಲೂಕಿನಾದ್ಯಂತ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದಾರೆ.

ಬೇಗೂರು ಭಾಗದಲ್ಲಿ ಗಾಳಿಯ ಪ್ರಮಾಣ ಕಡಿಮೆ ಇದ್ದು ಹೆಚ್ಚು ನಷ್ಟ ಸಂಭವಿಸಿಲ್ಲ. ಆದರೆ ಹಂಗಳ, ಕಸಬಾ, ತೆರಕಣಾಂಬಿ ಹೋಬಳಿಗಳ ವ್ಯಾಪ್ತಿಯ ಬೊಮ್ಮಲಾಪುರ, ಅಂಕಹಳ್ಳಿ, ಬೆಳವಾಡಿ, ಶಿವಪುರ, ಹಂಗಳಾಪುರ, ಹಂಗಳ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಾಳೆ ತೋಟಗಳು ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

” ಬಿರುಗಾಳಿ ಮಳೆಗೆ ರೈತರು ಕಷ್ಟಪಟ್ಟು ಬೆಳೆದ ಬಾಳೆ ನಾಶವಾಗಿದ್ದು, ನಾನು ಜಮೀನುಗಳಿಗೆ ತೆರಳಿ ವೀಕ್ಷಿಸುತ್ತೇನೆ. ಅಧಿಕಾರಿಗಳಿಗೆ ಈಗಾಗಲೇ ಸರ್ವೆ ನಡೆಸಿ ಎಷ್ಟು ಪ್ರಮಾಣದಲ್ಲಿ ನಷ್ಟವಾಗಿದೆ ಎಂಬ ವರದಿ ನೀಡಲು ಸೂಚಿಸಿದ್ದು, ಸರ್ಕಾರದ ಗಮನಕ್ಕೆ ತಂದು ಹೆಚ್ಚಿನ ಪರಿಹಾರ ನೀಡುವಂತೆ ಚರ್ಚೆ ನಡೆಸಲಾಗುವುದು.”

-ಎಚ್.ಎಂ.ಗಣೇಶ್ ಪ್ರಸಾದ್, ಶಾಸಕ 

” ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಎಷ್ಟು ಪ್ರಮಾಣದಲ್ಲಿ ನಾಶವಾಗಿದೆ ಎಂಬ ಆಧಾರ ದಲ್ಲಿ ಪರಿಹಾರ ನಿಗದಿಯಾಗು ತ್ತದೆ. ಪರಿಹಾರದ ಮೊತ್ತ ಸರ್ಕಾರದ ಮಟ್ಟದಲ್ಲಿ ನಿಗದಿಯಾಗುತ್ತದೆ. ತೋಟಗಾರಿಕೆ ಇಲಾಖೆಯವರು ಸರ್ವೆ ನಡೆಸಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮಾಹಿತಿ ಸಲ್ಲಿಸಲಿದ್ದಾರೆ. ಪರಿಹಾರ ಎಷ್ಟು ಎಂಬುದು ಇನ್ನೂ ನಿಗದಿಯಾಗಿಲ್ಲ. ಅದು ಸರ್ಕಾರದಿಂದಲೇ ಘೋಷಣೆಯಾಗಬೇಕು.”

-ತನ್ಮಯ್, ತಹಸಿಲ್ದಾರ್, ಗುಂಡ್ಲುಪೇಟೆ

” ಬೇಸಿಗೆಯಲ್ಲೂ ಕಷ್ಟಪಟ್ಟು ಬಾಳೆ ಬೆಳೆ ಬೆಳೆಯಲಾಗಿತ್ತು. ನಮ್ಮ ಶ್ರಮಕ್ಕೆ ಫಲ ಸಿಗುವ ಸಮಯದಲ್ಲೇ ಗಾಳಿ ಮಳೆಯಿಂದಾಗಿ ಬಾಳೆ ನಾಶವಾಗಿದೆ. ಗೊನೆ ಕಟಾವಿಗೆ ಬಂದು ವ್ಯಾಪಾರ ಮಾಡಿ ಒಂದು ಲೋಡ್ ನೀಡಲಾಗಿತ್ತು. ಇನ್ನೆರಡು ಲೋಡ್‌ನಷ್ಟು ಬಾಳೆ ಗೊನೆ ಕಟಾವು ಆಗಬೇಕಿತ್ತು. ಅದರೆ ಗಾಳಿ ಮಳೆಗೆ ಹೀಗಾಗಿದೆ. ವ್ಯಾಪಾರ ಸ್ಥರು ಬಿದ್ದ ಗೊನೆ ತೆಗೆದುಕೊಳ್ಳುವುದಿಲ್ಲ. ಸರ್ಕಾರ ರೈತರ ನೋವು ಅರ್ಥ ಮಾಡಿಕೊಂಡು ಸೂಕ್ತ ಪರಿಹಾರ ನೀಡಬೇಕು.”

-ರೇವಣ್ಣ, ರೈತ, ಹಂಗಳಾಪುರ

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

43 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago