Andolana originals

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು

ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿ- ಮಳೆಯಿಂದ ನಾಶವಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಲವು ಗ್ರಾಮಗಳ ಜಮೀನುಗಳಲ್ಲಿ ನಡೆದಿದೆ.

ಸುಮಾರು ೧೬೮ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬಾಳೆ ಬೆಳೆ ನಾಶವಾಗಿದ್ದು, ಪ್ರತಿ ಗ್ರಾಮದಲ್ಲೂ ನಷ್ಟದ ಪ್ರಮಾಣವನ್ನು ಸರ್ವೆ ನಡೆಸಲಾಗುತ್ತದೆ. ಸಂತ್ರಸ್ತ ರೈತರು ತೋಟಗಾರಿಕೆ ಇಲಾಖೆ ಹಾಗೂ ತಹಸಿಲ್ದಾರ್ ಗಮನಕ್ಕೆ ತರಬಹುದಾಗಿದೆ.

ತಾಲ್ಲೂಕಿನಾದ್ಯಂತ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದಾರೆ.

ಬೇಗೂರು ಭಾಗದಲ್ಲಿ ಗಾಳಿಯ ಪ್ರಮಾಣ ಕಡಿಮೆ ಇದ್ದು ಹೆಚ್ಚು ನಷ್ಟ ಸಂಭವಿಸಿಲ್ಲ. ಆದರೆ ಹಂಗಳ, ಕಸಬಾ, ತೆರಕಣಾಂಬಿ ಹೋಬಳಿಗಳ ವ್ಯಾಪ್ತಿಯ ಬೊಮ್ಮಲಾಪುರ, ಅಂಕಹಳ್ಳಿ, ಬೆಳವಾಡಿ, ಶಿವಪುರ, ಹಂಗಳಾಪುರ, ಹಂಗಳ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಾಳೆ ತೋಟಗಳು ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

” ಬಿರುಗಾಳಿ ಮಳೆಗೆ ರೈತರು ಕಷ್ಟಪಟ್ಟು ಬೆಳೆದ ಬಾಳೆ ನಾಶವಾಗಿದ್ದು, ನಾನು ಜಮೀನುಗಳಿಗೆ ತೆರಳಿ ವೀಕ್ಷಿಸುತ್ತೇನೆ. ಅಧಿಕಾರಿಗಳಿಗೆ ಈಗಾಗಲೇ ಸರ್ವೆ ನಡೆಸಿ ಎಷ್ಟು ಪ್ರಮಾಣದಲ್ಲಿ ನಷ್ಟವಾಗಿದೆ ಎಂಬ ವರದಿ ನೀಡಲು ಸೂಚಿಸಿದ್ದು, ಸರ್ಕಾರದ ಗಮನಕ್ಕೆ ತಂದು ಹೆಚ್ಚಿನ ಪರಿಹಾರ ನೀಡುವಂತೆ ಚರ್ಚೆ ನಡೆಸಲಾಗುವುದು.”

-ಎಚ್.ಎಂ.ಗಣೇಶ್ ಪ್ರಸಾದ್, ಶಾಸಕ 

” ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಎಷ್ಟು ಪ್ರಮಾಣದಲ್ಲಿ ನಾಶವಾಗಿದೆ ಎಂಬ ಆಧಾರ ದಲ್ಲಿ ಪರಿಹಾರ ನಿಗದಿಯಾಗು ತ್ತದೆ. ಪರಿಹಾರದ ಮೊತ್ತ ಸರ್ಕಾರದ ಮಟ್ಟದಲ್ಲಿ ನಿಗದಿಯಾಗುತ್ತದೆ. ತೋಟಗಾರಿಕೆ ಇಲಾಖೆಯವರು ಸರ್ವೆ ನಡೆಸಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮಾಹಿತಿ ಸಲ್ಲಿಸಲಿದ್ದಾರೆ. ಪರಿಹಾರ ಎಷ್ಟು ಎಂಬುದು ಇನ್ನೂ ನಿಗದಿಯಾಗಿಲ್ಲ. ಅದು ಸರ್ಕಾರದಿಂದಲೇ ಘೋಷಣೆಯಾಗಬೇಕು.”

-ತನ್ಮಯ್, ತಹಸಿಲ್ದಾರ್, ಗುಂಡ್ಲುಪೇಟೆ

” ಬೇಸಿಗೆಯಲ್ಲೂ ಕಷ್ಟಪಟ್ಟು ಬಾಳೆ ಬೆಳೆ ಬೆಳೆಯಲಾಗಿತ್ತು. ನಮ್ಮ ಶ್ರಮಕ್ಕೆ ಫಲ ಸಿಗುವ ಸಮಯದಲ್ಲೇ ಗಾಳಿ ಮಳೆಯಿಂದಾಗಿ ಬಾಳೆ ನಾಶವಾಗಿದೆ. ಗೊನೆ ಕಟಾವಿಗೆ ಬಂದು ವ್ಯಾಪಾರ ಮಾಡಿ ಒಂದು ಲೋಡ್ ನೀಡಲಾಗಿತ್ತು. ಇನ್ನೆರಡು ಲೋಡ್‌ನಷ್ಟು ಬಾಳೆ ಗೊನೆ ಕಟಾವು ಆಗಬೇಕಿತ್ತು. ಅದರೆ ಗಾಳಿ ಮಳೆಗೆ ಹೀಗಾಗಿದೆ. ವ್ಯಾಪಾರ ಸ್ಥರು ಬಿದ್ದ ಗೊನೆ ತೆಗೆದುಕೊಳ್ಳುವುದಿಲ್ಲ. ಸರ್ಕಾರ ರೈತರ ನೋವು ಅರ್ಥ ಮಾಡಿಕೊಂಡು ಸೂಕ್ತ ಪರಿಹಾರ ನೀಡಬೇಕು.”

-ರೇವಣ್ಣ, ರೈತ, ಹಂಗಳಾಪುರ

ಆಂದೋಲನ ಡೆಸ್ಕ್

Recent Posts

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

30 mins ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

37 mins ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

2 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

3 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

4 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

4 hours ago