Andolana originals

೧೭೦ ಮಂದಿ ಮಹಿಳೆಯರಿಗೆ ದೊರೆಯದ ‘ಗೃಹಲಕ್ಷ್ಮೀ ’

ಎಂ.ಯೋಗಾನಂದ

ಹುಣಸೂರು ತಾಲ್ಲೂಕಿನಲ್ಲಿ ೭೪,೯೯೦ -ಲಾನುಭವಿಗಳು; ಶೇ.೯೮.೫ರಷ್ಟು ಸಾಧನೆ 

ಹುಣಸೂರು: ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೭೪,೯೯೦ ಫಲಾನುಭವಿಗಳಿದ್ದು, ಇವರ ಪೈಕಿ ೧೭೦ ಮಂದಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗುತ್ತಿಲ್ಲ.

ಸಂಬಂಧಪಟ್ಟ ಸಿಡಿಪಿಒ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯವರು ಇತ್ತ ಗಮನಹರಿಸಿ ನೊಂದ ಬಡವರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ಹಣ ತಲುಪಿಸುವ ಕೆಲಸ ಮಾಡಬೇಕಾಗಿದೆ.

ನಾನು ಐಟಿ, ಜಿಎಸ್‌ಟಿ ಕ್ಯಾನ್ಸಲ್ ಮಾಡಿಸಿ ಸಂಬಂಧಪಟ್ಟ ಇಲಾಖೆ, ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೂ ಈ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದರೂ ಇದುವರೆಗೂ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಎಲ್ಲ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರುವ ಹಾಗೆ ನನ್ನ ಪತ್ನಿಗೂ ಹಣ ಬಂದರೆ ಸಂಸಾರದಲ್ಲಿ ಸಂತೋಷ ಕಾಪಾಡಿಕೊಳ್ಳಬಹುದು. ಇಲ್ಲದಿದ್ದರೆ ಮನೆಯಲ್ಲಿ ಕಿರಿಕಿರಿ ಆಗುತ್ತಿದೆ ಎಂದು ಉಯಿಗೊಂಡನ ಹಳ್ಳಿ ಗ್ರಾಮದ ಯು.ಬಿ.ಆಶಾರವರ ಪತಿ ಎಸ್.ಕುಮಾರ ಅಳಲು ತೋಡಿಕೊಂಡರು.

ಹುಣಸೂರು ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಶೇ.೯೮.೫ರಷ್ಟು ಫಲಾನುಭವಿಗಳಿಗೆ ದೊರಕಿದೆ. ೪೦ಕ್ಕೂ ಹೆಚ್ಚು ಜನರು ಮರಣ ಹೊಂದಿದ್ದಾರೆ. ಅವರ ಹೆಸರಿನಲ್ಲಿ ಕುಟುಂಬದವರೇ ಪಡೆಯುತ್ತಿದ್ದಾರೆ. ೧೩೦ ಜನರು ಬ್ಯಾಂಕ್ಗಳಲ್ಲಿ ಎನ್‌ಪಿಸಿಐ ಲಿಂಕ್ ಮಾಡಿಸಿಲ್ಲ. ಹೀಗೆ ಒಟ್ಟು ೧೭೦ ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ. ಈ ಎಲ್ಲ ಅರ್ಜಿಗಳನ್ನೂ ಸಂಬಂಧಪಟ್ಟ ಇಲಾಖೆಗೆ ಕಳಿಸಲಾಗಿದೆ. ಇದು ತಾಂತ್ರಿಕ ಸಮಸ್ಯೆ ಯಾಗಿದ್ದು, ಸರ್ಕಾರದ ಹಂತದಲ್ಲಿಯೇ ಬಗೆಹರಿಯಬೇಕು ಎಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.

” ಮೈಸೂರು ಜಿಲ್ಲೆಯಲ್ಲಿ ಐಟಿ, ಜಿಎಸ್‌ಟಿ ಸಮಸ್ಯೆ ಇರುವ ೮೦೦ ರಿಂದ ೧,೦೦೦ ಫಲಾನುಭವಿಗಳಿಗೆ ಈ ಯೋಜನೆ ಹಣ ಬರುತ್ತಿಲ್ಲ. ಜೊತೆಗೆ ಹುಣಸೂರು ತಾಲ್ಲೂಕಿನ ಮಾಹಿತಿಯೂ ನನಗಿಲ್ಲ. ಇದರ ಬಗ್ಗೆ ಮಾಹಿತಿ ಪಡೆದು ಸಭೆಯಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.”

-ಡಾ.ಪುಷ್ಪಾ ಅಮರ್‌ನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ 

” ತಾಲ್ಲೂಕಿನಲ್ಲಿ ಈಗ ೭೪,೮೨೦ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಶೇ.೯೮.೫ರಷ್ಟು ಸಾಧನೆ ಸಾಧಿಸಿದ್ದು ವಿವಿಧ ಕಾರಣಗಳಿಂದ ಉಳಿದಿರುವ ಫಲಾನುಭವಿಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು.”

-ರಾಘು ಕಲ್ಕುಣಿಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ

 

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

10 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

1 hour ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

2 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

3 hours ago