Andolana originals

೧೭೦ ಮಂದಿ ಮಹಿಳೆಯರಿಗೆ ದೊರೆಯದ ‘ಗೃಹಲಕ್ಷ್ಮೀ ’

ಎಂ.ಯೋಗಾನಂದ

ಹುಣಸೂರು ತಾಲ್ಲೂಕಿನಲ್ಲಿ ೭೪,೯೯೦ -ಲಾನುಭವಿಗಳು; ಶೇ.೯೮.೫ರಷ್ಟು ಸಾಧನೆ 

ಹುಣಸೂರು: ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೭೪,೯೯೦ ಫಲಾನುಭವಿಗಳಿದ್ದು, ಇವರ ಪೈಕಿ ೧೭೦ ಮಂದಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗುತ್ತಿಲ್ಲ.

ಸಂಬಂಧಪಟ್ಟ ಸಿಡಿಪಿಒ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯವರು ಇತ್ತ ಗಮನಹರಿಸಿ ನೊಂದ ಬಡವರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ಹಣ ತಲುಪಿಸುವ ಕೆಲಸ ಮಾಡಬೇಕಾಗಿದೆ.

ನಾನು ಐಟಿ, ಜಿಎಸ್‌ಟಿ ಕ್ಯಾನ್ಸಲ್ ಮಾಡಿಸಿ ಸಂಬಂಧಪಟ್ಟ ಇಲಾಖೆ, ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೂ ಈ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದರೂ ಇದುವರೆಗೂ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಎಲ್ಲ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರುವ ಹಾಗೆ ನನ್ನ ಪತ್ನಿಗೂ ಹಣ ಬಂದರೆ ಸಂಸಾರದಲ್ಲಿ ಸಂತೋಷ ಕಾಪಾಡಿಕೊಳ್ಳಬಹುದು. ಇಲ್ಲದಿದ್ದರೆ ಮನೆಯಲ್ಲಿ ಕಿರಿಕಿರಿ ಆಗುತ್ತಿದೆ ಎಂದು ಉಯಿಗೊಂಡನ ಹಳ್ಳಿ ಗ್ರಾಮದ ಯು.ಬಿ.ಆಶಾರವರ ಪತಿ ಎಸ್.ಕುಮಾರ ಅಳಲು ತೋಡಿಕೊಂಡರು.

ಹುಣಸೂರು ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಶೇ.೯೮.೫ರಷ್ಟು ಫಲಾನುಭವಿಗಳಿಗೆ ದೊರಕಿದೆ. ೪೦ಕ್ಕೂ ಹೆಚ್ಚು ಜನರು ಮರಣ ಹೊಂದಿದ್ದಾರೆ. ಅವರ ಹೆಸರಿನಲ್ಲಿ ಕುಟುಂಬದವರೇ ಪಡೆಯುತ್ತಿದ್ದಾರೆ. ೧೩೦ ಜನರು ಬ್ಯಾಂಕ್ಗಳಲ್ಲಿ ಎನ್‌ಪಿಸಿಐ ಲಿಂಕ್ ಮಾಡಿಸಿಲ್ಲ. ಹೀಗೆ ಒಟ್ಟು ೧೭೦ ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ. ಈ ಎಲ್ಲ ಅರ್ಜಿಗಳನ್ನೂ ಸಂಬಂಧಪಟ್ಟ ಇಲಾಖೆಗೆ ಕಳಿಸಲಾಗಿದೆ. ಇದು ತಾಂತ್ರಿಕ ಸಮಸ್ಯೆ ಯಾಗಿದ್ದು, ಸರ್ಕಾರದ ಹಂತದಲ್ಲಿಯೇ ಬಗೆಹರಿಯಬೇಕು ಎಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.

” ಮೈಸೂರು ಜಿಲ್ಲೆಯಲ್ಲಿ ಐಟಿ, ಜಿಎಸ್‌ಟಿ ಸಮಸ್ಯೆ ಇರುವ ೮೦೦ ರಿಂದ ೧,೦೦೦ ಫಲಾನುಭವಿಗಳಿಗೆ ಈ ಯೋಜನೆ ಹಣ ಬರುತ್ತಿಲ್ಲ. ಜೊತೆಗೆ ಹುಣಸೂರು ತಾಲ್ಲೂಕಿನ ಮಾಹಿತಿಯೂ ನನಗಿಲ್ಲ. ಇದರ ಬಗ್ಗೆ ಮಾಹಿತಿ ಪಡೆದು ಸಭೆಯಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.”

-ಡಾ.ಪುಷ್ಪಾ ಅಮರ್‌ನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ 

” ತಾಲ್ಲೂಕಿನಲ್ಲಿ ಈಗ ೭೪,೮೨೦ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಶೇ.೯೮.೫ರಷ್ಟು ಸಾಧನೆ ಸಾಧಿಸಿದ್ದು ವಿವಿಧ ಕಾರಣಗಳಿಂದ ಉಳಿದಿರುವ ಫಲಾನುಭವಿಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು.”

-ರಾಘು ಕಲ್ಕುಣಿಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ

 

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

14 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

16 hours ago