Andolana originals

೧೭೦ ಮಂದಿ ಮಹಿಳೆಯರಿಗೆ ದೊರೆಯದ ‘ಗೃಹಲಕ್ಷ್ಮೀ ’

ಎಂ.ಯೋಗಾನಂದ

ಹುಣಸೂರು ತಾಲ್ಲೂಕಿನಲ್ಲಿ ೭೪,೯೯೦ -ಲಾನುಭವಿಗಳು; ಶೇ.೯೮.೫ರಷ್ಟು ಸಾಧನೆ 

ಹುಣಸೂರು: ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೭೪,೯೯೦ ಫಲಾನುಭವಿಗಳಿದ್ದು, ಇವರ ಪೈಕಿ ೧೭೦ ಮಂದಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗುತ್ತಿಲ್ಲ.

ಸಂಬಂಧಪಟ್ಟ ಸಿಡಿಪಿಒ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯವರು ಇತ್ತ ಗಮನಹರಿಸಿ ನೊಂದ ಬಡವರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ಹಣ ತಲುಪಿಸುವ ಕೆಲಸ ಮಾಡಬೇಕಾಗಿದೆ.

ನಾನು ಐಟಿ, ಜಿಎಸ್‌ಟಿ ಕ್ಯಾನ್ಸಲ್ ಮಾಡಿಸಿ ಸಂಬಂಧಪಟ್ಟ ಇಲಾಖೆ, ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೂ ಈ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದರೂ ಇದುವರೆಗೂ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಎಲ್ಲ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರುವ ಹಾಗೆ ನನ್ನ ಪತ್ನಿಗೂ ಹಣ ಬಂದರೆ ಸಂಸಾರದಲ್ಲಿ ಸಂತೋಷ ಕಾಪಾಡಿಕೊಳ್ಳಬಹುದು. ಇಲ್ಲದಿದ್ದರೆ ಮನೆಯಲ್ಲಿ ಕಿರಿಕಿರಿ ಆಗುತ್ತಿದೆ ಎಂದು ಉಯಿಗೊಂಡನ ಹಳ್ಳಿ ಗ್ರಾಮದ ಯು.ಬಿ.ಆಶಾರವರ ಪತಿ ಎಸ್.ಕುಮಾರ ಅಳಲು ತೋಡಿಕೊಂಡರು.

ಹುಣಸೂರು ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಶೇ.೯೮.೫ರಷ್ಟು ಫಲಾನುಭವಿಗಳಿಗೆ ದೊರಕಿದೆ. ೪೦ಕ್ಕೂ ಹೆಚ್ಚು ಜನರು ಮರಣ ಹೊಂದಿದ್ದಾರೆ. ಅವರ ಹೆಸರಿನಲ್ಲಿ ಕುಟುಂಬದವರೇ ಪಡೆಯುತ್ತಿದ್ದಾರೆ. ೧೩೦ ಜನರು ಬ್ಯಾಂಕ್ಗಳಲ್ಲಿ ಎನ್‌ಪಿಸಿಐ ಲಿಂಕ್ ಮಾಡಿಸಿಲ್ಲ. ಹೀಗೆ ಒಟ್ಟು ೧೭೦ ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ. ಈ ಎಲ್ಲ ಅರ್ಜಿಗಳನ್ನೂ ಸಂಬಂಧಪಟ್ಟ ಇಲಾಖೆಗೆ ಕಳಿಸಲಾಗಿದೆ. ಇದು ತಾಂತ್ರಿಕ ಸಮಸ್ಯೆ ಯಾಗಿದ್ದು, ಸರ್ಕಾರದ ಹಂತದಲ್ಲಿಯೇ ಬಗೆಹರಿಯಬೇಕು ಎಂದು ಸಿಡಿಪಿಒ ಹರೀಶ್ ತಿಳಿಸಿದ್ದಾರೆ.

” ಮೈಸೂರು ಜಿಲ್ಲೆಯಲ್ಲಿ ಐಟಿ, ಜಿಎಸ್‌ಟಿ ಸಮಸ್ಯೆ ಇರುವ ೮೦೦ ರಿಂದ ೧,೦೦೦ ಫಲಾನುಭವಿಗಳಿಗೆ ಈ ಯೋಜನೆ ಹಣ ಬರುತ್ತಿಲ್ಲ. ಜೊತೆಗೆ ಹುಣಸೂರು ತಾಲ್ಲೂಕಿನ ಮಾಹಿತಿಯೂ ನನಗಿಲ್ಲ. ಇದರ ಬಗ್ಗೆ ಮಾಹಿತಿ ಪಡೆದು ಸಭೆಯಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.”

-ಡಾ.ಪುಷ್ಪಾ ಅಮರ್‌ನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ 

” ತಾಲ್ಲೂಕಿನಲ್ಲಿ ಈಗ ೭೪,೮೨೦ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಶೇ.೯೮.೫ರಷ್ಟು ಸಾಧನೆ ಸಾಧಿಸಿದ್ದು ವಿವಿಧ ಕಾರಣಗಳಿಂದ ಉಳಿದಿರುವ ಫಲಾನುಭವಿಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು.”

-ರಾಘು ಕಲ್ಕುಣಿಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ

 

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

1 hour ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

15 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

15 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

15 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

15 hours ago