Andolana originals

ಕೊಡಗಿನಲ್ಲಿ ಮಳೆಯಿಂದ ಇಲ್ಲಿಯವರೆಗೆ ೧೮ ದಿನ ರಜೆ

ನವೀನ್ ಡಿಸೋಜ

ಮಳೆ ಹಿನ್ನೆಲೆ; ಶಾಲಾ ಶೈಕ್ಷಣಿಕ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ; ಹೆಚ್ಚುವರಿ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಸೂಚನೆ 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರಿದಿದ್ದು, ಸೋಮವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಈವರೆಗೂ ೧೮ ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ರಜೆಯಿಂದ ಉಂಟಾಗಿರುವ ಶೈಕ್ಷಣಿಕ ವ್ಯತ್ಯಯವನ್ನು ಸರಿದೂಗಿಸಿಕೊಳ್ಳಲು ಪ್ರತಿ ಶನಿವಾರ ಮಧ್ಯಾಹ್ನದ ಬಳಿಕ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಹೀಗಾಗಿ ಶಾಲಾ ಆರಂಭ ಮೇ ೨೯ಕ್ಕೆ ಇದ್ದರೂ ಕೆಲವು ಶಾಲೆಗಳು ಮಾತ್ರ ಮೊದಲ ದಿನ ಆರಂಭವಾದವು. ಆ ಸಮಯದಲ್ಲಿ ಮಳೆ ಹೆಚ್ಚಿದ ಕಾರಣ ಪಾಠಗಳು ಆರಂಭವಾಗಲು ಇನ್ನೂ ಕೆಲವು ದಿನಗಳಿಡಿದವು. ಬಳಿಕ ನಿರಂತರ ಮಳೆಯಿಂದಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಘೋಷಿಸಿತು.

ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದಾಗೆಲ್ಲ ಶಾಲೆಗಳಿಗೆ ರಜೆ ನೀಡಲಾಗಿದೆ. ಹೀಗೆ ಶಾಲಾರಂಭವಾದ ಮೇ ೨೯ರಿಂದ ಆ.೧೮ರವರೆಗೆ ಜಿಲ್ಲೆಯಲ್ಲಿ ಒಟ್ಟು ೧೮ ದಿನಗಳ ಕಾಲ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದರಿಂದ ಪಠ್ಯಚಟುವಟಿಕೆ ಗಳನ್ನು ನಿಗದಿತ ಶೈಕ್ಷಣಿಕ ಕ್ಯಾಲೆಂಡರ್ ಅನುಸಾರಪೂರೈಸಿ ಕೊಳ್ಳಲು ಗೊಂದಲವಾಗುತ್ತಿದ್ದು, ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದೆ.

ಈ ಬಾರಿ ಕಡಿಮೆ ತರಗತಿಗಳು ನಡೆದಿರುವುದು ಮಕ್ಕಳ ಶೈಕ್ಷಣಿಕ ಚಟುವಟಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಶಿಕ್ಷಣ ತಜ್ಞರ ಅಭಿಮತ. ಈ ರಜೆಗಳನ್ನು ಸರಿದೂಗಿಸಿಕೊಳ್ಳಲು ಶನಿವಾರಗಳಂದು ಅರ್ಧ ದಿನ ಹೆಚ್ಚುವರಿ ತರಗತಿಗಳನ್ನು ನಡೆಸಿದರೂ ಅದು ಮಕ್ಕಳು ಮತ್ತು ಶಿಕ್ಷಕರಿಗೆ ಹೊರೆ, ಒತ್ತಡವಾಗಿ ಪರಿಣಮಿಸುವ ಸಾಧ್ಯತೆ ಇದೆ. ಅಲ್ಲದೇ ಒಟ್ಟಾರೆ ಫಲಿತಾಂಶದ ಮೇಲೂ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕೇರಳ ಮಾದರಿ ಚಿಂತನೆ…:  ಪ್ರತಿ ಶೈಕ್ಷಣಿಕ ವರ್ಷದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗುತ್ತಿದೆ. ಇತ್ತೀಚೆಗೆ ಕೇರಳದ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಸಾಂಪ್ರದಾಯಿಕ ಏಪ್ರಿಲ್-ಮೇ ಬೇಸಿಗೆ ರಜೆಯ ಬದಲು ಜೂನ್ ಮತ್ತು ಜುಲೈನ ಮಳೆಗಾಲಕ್ಕೆ ಬದಲಾಯಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಕೊಡಗಿನ ವಿಚಾರದಲ್ಲೂ ಈ ಬದಲಾವಣೆ ಉತ್ತಮ ಎಂಬ ಅಭಿಪ್ರಾಯ ಪೋಷಕರು ಮತ್ತು ಶಿಕ್ಷಕ ವಲಯದಿಂದಲೂ ಕೇಳಿ ಬರುತ್ತಿದೆ.

” ಮಳೆಗಾಲದಲ್ಲಿ ನೀಡಲಾದ ರಜೆಯನ್ನು ಸರಿದೂಗಿಸಲು ಶಾಲಾ ಆಡಳಿತ ಮಂಡಳಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆ ಸೇರಿ ತೀರ್ಮಾನಿಸಿ ಶನಿವಾರ ಹೆಚ್ಚುವರಿ ತರಗತಿಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ರಜಾ ದಿನಗಳಲ್ಲಿನ ಪಾಠ ಪ್ರವಚನಗಳನ್ನು ಹೆಚ್ಚುವರಿ ತರಗತಿಗಳ ಮೂಲಕ ಸರಿದೂಗಿಸಿಕೊಳ್ಳುತ್ತೇವೆ. ಈಗಾಗಲೇ ಮಳೆ ಪರಿಸ್ಥಿತಿ ನೋಡಿಕೊಂಡು ಶನಿವಾರ ಮಧ್ಯಾಹ್ನದ ನಂತರ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.”

-ಸಿ.ರಂಗಧಾಮಯ್ಯ, ಶಿಕ್ಷಣ ಇಲಾಖೆ ಉಪನಿರ್ದೇಶಕ

” ನಮ್ಮ ಸಂಸ್ಥೆಯಲ್ಲಿ ಪ್ರತಿ ದಿನ ನಡೆಯುವ ಪಠ್ಯೇತರ ಚಟುವಟಿಕೆಗಳನ್ನು ಶನಿವಾರ ಮಧ್ಯಾಹ್ನ  ನಡೆಸುವ ಮೂಲಕ ಉಳಿದ ದಿನಗಳಲ್ಲಿ ಪಠ್ಯ ಚಟುವಟಿಕೆಗೆ ಒತ್ತು ನೀಡುತ್ತೇವೆ. ಹಾಗಾಗಿ ಯಾವುದೇ ಸಮಸ್ಯೆ ಆಗುವುದಿಲ್ಲ. ಕೇವಲ ಪಠ್ಯ ಚಟುವಟಿಕೆಗಳನ್ನೇ ನಡೆಸುವುದು ಮತ್ತು ಹೆಚ್ಚುವರಿ ತರಗತಿಗಳನ್ನು ನಡೆಸುವುದರಿಂದ ಮಕ್ಕಳಿಗೆ ಒತ್ತಡವಾಗುವ ಸಾಧ್ಯತೆ ಇದೆ. ಜಾಗತಿಕವಾಗಿ ಹವಾಮಾನ ಬದಲಾವಣೆಯಾಗುತ್ತಿದ್ದು, ಕೇರಳದಂತೆ ಬೇಸಿಗೆ ರಜೆಯನ್ನು ಬದಲಾವಣೆ ಮಾಡುವ ಚಿಂತನೆಯ ಅಗತ್ಯತೆಯೂ ಈಗ ಕಾಣುತ್ತಿದೆ.”

-ಬಿ.ಪಿ.ಬೋಪಣ್ಣ , ಪ್ರಾಂಶುಪಾಲರು, ಉದ್ಗಮ್ ವಿದ್ಯಾಸಂ

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

4 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

7 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

10 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

10 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago