Andolana originals

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ.

ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ ಎಂಬ ಮಾಹಿತಿ ಹೆಬ್ಬಾಳು ಠಾಣಾ ಪೊಲೀಸರಿಗೆ ಬಂದಿದೆ. ಕೂಡಲೇ ಜಾಗೃತರಾದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸೆ. ೨೩ರಂದು ರಾತ್ರಿ ೮. ೩೦ರಲ್ಲಿ ಹೆಬ್ಬಾಳು ರಿಂಗ್ ರಸ್ತೆಯ ಬಳಿ ಬರುತ್ತಿದ್ದ ಗೂಡ್ಸ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಅಲ್ಲಿ ೨೫ ರಾಸುಗಳನ್ನು ತುಂಬಿ ಸಾಗಿಸುತ್ತಿರುವುದು ಕಂಡು ಬಂದಿದೆ. ಪೊಲೀಸರು ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದು ರಾಸುಗಳನ್ನು ರಕ್ಷಿಸಿದ್ದಾರೆ.

ಯುವ ವೈದ್ಯರಿಗೆ ೫೦ ಲಕ್ಷ ರೂ. ವಂಚನೆ ಮೈಸೂರು: ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸು ವುದಾಗಿ ನಂಬಿಸಿ ಯುವ ವೈದ್ಯರೊಬ್ಬರಿಂದ ದುಷ್ಕರ್ಮಿ ಗಳು ೫೦ ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಾರ್ಥನಗರದ ನಿವಾಸಿ ಡಾ. ನಿಶಾಂತ್ ಎಂಬವರೇ ವಂಚನೆಗೆ ಒಳಗಾದವರು. ಬೆಂಗಳೂರು ಮೂಲದ ಪ್ರದೀಪ್ ಕುಮಾರ್ ಹಾಗೂ ಶ್ರುತಿ ಎಂಬವರ ವಿರುದ್ಧ ಇದೀಗ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ. ಡಾ. ನಿಶಾಂತ್ ಕುಟುಂಬದವರಿಗೆ ಆರೋಪಿಗಳ ಪರಿಚಯವಾಗಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ್ದ ನಿಶಾಂತ್‌ಗೆ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಪ್ರವೇಶ ಕೊಡಿಸುವುದಾಗಿ ಅವರ ಪೋಷಕರನ್ನು ನಂಬಿಸಿದ್ದಾರೆ. ಹೀಗಾಗಿ ನಿಶಾಂತ್ ಪೋಷಕರು ಹಂತ ಹಂತವಾಗಿ ಆರೋಪಿಗಳಿಗೆ ೫ ಲಕ್ಷ ರೂ. ಅನ್ನು ನಗದಾಗಿ ಹಾಗೂ ೪೫ ಲಕ್ಷ ರೂ. ಹಣವನ್ನು ಆರ್ ಟಿಜಿಎಸ್ ಮೂಲಕ ಕಳುಹಿಸಿದ್ದಾರೆ. ಆದರೆ, ಅವರ ಮಗನಿಗೆ ಸೀಟ್ ದೊರಕಿಲ್ಲ. ಹೀಗಾಗಿ ಅವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

 

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

6 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

16 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

35 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

58 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago